ನವದೆಹಲಿ: 'ಲಡಾಖ್ನಲ್ಲಿ ಇರುವ ದೇಶಭಕ್ತ ಸ್ಥಳೀಯರು ಚೀನಾದ ಒಳನುಸುಳುವಿಕೆ ವಿರುದ್ಧ ಧ್ವನಿ ಎತ್ತಿದ್ದು, ನಮ್ಮ ಮಾತುಗಳನ್ನು ಆಲಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಕೋರುತ್ತಿದ್ದಾರೆ. ಅವರ ಎಚ್ಚರಿಕೆಯನ್ನು ಕಡೆಗಣಿಸಿದರೆ ಭಾರಿ ಬೆಲೆ ತೆರಬೇಕಾದಿತು' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಎಚ್ಚರಿಸಿದ್ದಾರೆ.