<p>ನವದೆಹಲಿ: ಕೆರಗಳ ಪುನಶ್ಚೇತನಗೊಳಿಸುವ ಕೆಲಸ ಮಾಡುತ್ತಿರುವ ಬೆಂಗಳೂರಿನ ಐಟಿ ಉದ್ಯೋಗಿ ಕಪಿಲ್ ಶರ್ಮಾ ಅವರ ಕುರಿತು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ಅವರ ‘ಸೇಟ್ರೀಸ್’ ಎಂಬ ಸಂಸ್ಥೆಯ ಬಗ್ಗೆಯೂ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.</p>.<p>‘ಎಂಜಿನಿಯರ್ ಕಪಿಲ್ ಶರ್ಮಾ ಅವರ ಬೆಂಗಳೂರಿನಲ್ಲಿ ಗಮನಾರ್ಹವಾಗಿರುವ ಕಾರ್ಯ ಸಾಧಿಸಿದ್ದಾರೆ. ಬೆಂಗಳೂರನ್ನು ಕೆರೆಗಳ ನಗರ ಎನ್ನಲಾಗುತ್ತದೆ. ಇಲ್ಲಿನ ಕೆರೆಗಳಿಗೆ ಮರುಹುಟ್ಟು ನೀಡುವ ಅಭಿಯಾನವನ್ನೇ ಕಪಿಲ್ ಅವರು ಆರಂಭಿಸಿದ್ದಾರೆ. ಕಪಿಲ್ ಅವರ ತಂಡವು ನಗರದ 40 ಬಾವಿಗಳು, 6 ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇದರಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಈ ಅಭಿಯಾನದಲ್ಲಿ ಉದ್ಯಮಿಗಳನ್ನೂ ಸ್ಥಳೀಯರನ್ನೂ ಸೇರಿಸಿಕೊಂಡಿದ್ದಾರೆ’ ಎಂದು ಪ್ರಧಾನಿ ಮೋದಿ ಹೇಳಿದರು. </p>.<p>ಶರ್ಮಾ ಅವರ ‘ಸೇಟ್ರೀಸ್’ ಎಂಬ ಸರ್ಕಾರೇತರ ಸಂಸ್ಥೆಯ ಕುರಿತೂ ಪ್ರಧಾನಿ ಅವರು ಪ್ರಸ್ತಾಪಿಸಿದರು. ತಾನು 50 ಲಕ್ಷ ಸಸಿಗಳನ್ನು ನೆಟ್ಟಿರುವುದಾಗಿ ಮತ್ತು ದೇಶದಾದ್ಯಂತ ಸುಮಾರು 50 ಕೆರೆಗಳನ್ನು ಪುನರುಜ್ಜೀವನಗೊಳಿಸಿರುವುದಾಗಿ ಈ ಸಂಸ್ಥೆ ಹೇಳಿಕೊಂಡಿದೆ.</p>.<p><strong>‘ವಂದೇ ಮಾತರಂ’ ಗೀತೆಗೆ 150 ವರ್ಷ</strong>‘</p><p> * ಬಂಕಿಮ್ ಚಂದ್ರ ಚಟ್ಟೋಪಾದ್ಯಾಯ ಅವರು ಬರೆದ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬುತ್ತಿದೆ. ಈ ಗೀತೆಯು ದೇಶವನ್ನು ಅತ್ಯದ್ಬುತವಾಗಿ ಚಿತ್ರಿಸಿದೆ. ಈ ಗೀತೆಯ ಮೌಲ್ಯಗಳನ್ನು ನಾವು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಇದಕ್ಕಾಗಿ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. </p><p>* ಬಿಎಸ್ಎಫ್ ಮತ್ತು ಸಿಆರ್ಪಿಎಫ್ನಲ್ಲಿ ಮುಧೋಳ ತಳಿಯ ಶ್ವಾನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗುತ್ತಿರುವುದರ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.</p><p> * ಆಪರೇಷನ್ ಸಿಂಧೂರದ ಯಶಸ್ಸು ಹಾಗೂ ನಕ್ಸಲರ ಭಯ ಕಡಿಮೆಯಾಗಿರುವುದರಿಂದ ಈ ಬಾರಿ ದೇಶದಲ್ಲಿ ಜನರು ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.</p><p> * ನಮ್ಮ ಬುಡಕಟ್ಟು ಸಮುದಾಯಗಳಲ್ಲಿ ಭಗವಾನ್ ಬಿರ್ಸಾ ಮುಂಡಾ ಮತ್ತು ಕೋಮರಾಮ್ ಭೀಮ್ ಅವರಂತೆಯೇ ಹಲವಾರು ಶ್ರೇಷ್ಠ ಸಾಧಕರು ಆಗಿ ಹೋಗಿದ್ದಾರೆ. ಈ ಎಲ್ಲ ಬಗ್ಗೆಯೂ ನೀವು ಖಂಡಿತವಾಗಿಯೂ ಓದಲೇಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಕೆರಗಳ ಪುನಶ್ಚೇತನಗೊಳಿಸುವ ಕೆಲಸ ಮಾಡುತ್ತಿರುವ ಬೆಂಗಳೂರಿನ ಐಟಿ ಉದ್ಯೋಗಿ ಕಪಿಲ್ ಶರ್ಮಾ ಅವರ ಕುರಿತು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ಅವರ ‘ಸೇಟ್ರೀಸ್’ ಎಂಬ ಸಂಸ್ಥೆಯ ಬಗ್ಗೆಯೂ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.</p>.<p>‘ಎಂಜಿನಿಯರ್ ಕಪಿಲ್ ಶರ್ಮಾ ಅವರ ಬೆಂಗಳೂರಿನಲ್ಲಿ ಗಮನಾರ್ಹವಾಗಿರುವ ಕಾರ್ಯ ಸಾಧಿಸಿದ್ದಾರೆ. ಬೆಂಗಳೂರನ್ನು ಕೆರೆಗಳ ನಗರ ಎನ್ನಲಾಗುತ್ತದೆ. ಇಲ್ಲಿನ ಕೆರೆಗಳಿಗೆ ಮರುಹುಟ್ಟು ನೀಡುವ ಅಭಿಯಾನವನ್ನೇ ಕಪಿಲ್ ಅವರು ಆರಂಭಿಸಿದ್ದಾರೆ. ಕಪಿಲ್ ಅವರ ತಂಡವು ನಗರದ 40 ಬಾವಿಗಳು, 6 ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇದರಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಈ ಅಭಿಯಾನದಲ್ಲಿ ಉದ್ಯಮಿಗಳನ್ನೂ ಸ್ಥಳೀಯರನ್ನೂ ಸೇರಿಸಿಕೊಂಡಿದ್ದಾರೆ’ ಎಂದು ಪ್ರಧಾನಿ ಮೋದಿ ಹೇಳಿದರು. </p>.<p>ಶರ್ಮಾ ಅವರ ‘ಸೇಟ್ರೀಸ್’ ಎಂಬ ಸರ್ಕಾರೇತರ ಸಂಸ್ಥೆಯ ಕುರಿತೂ ಪ್ರಧಾನಿ ಅವರು ಪ್ರಸ್ತಾಪಿಸಿದರು. ತಾನು 50 ಲಕ್ಷ ಸಸಿಗಳನ್ನು ನೆಟ್ಟಿರುವುದಾಗಿ ಮತ್ತು ದೇಶದಾದ್ಯಂತ ಸುಮಾರು 50 ಕೆರೆಗಳನ್ನು ಪುನರುಜ್ಜೀವನಗೊಳಿಸಿರುವುದಾಗಿ ಈ ಸಂಸ್ಥೆ ಹೇಳಿಕೊಂಡಿದೆ.</p>.<p><strong>‘ವಂದೇ ಮಾತರಂ’ ಗೀತೆಗೆ 150 ವರ್ಷ</strong>‘</p><p> * ಬಂಕಿಮ್ ಚಂದ್ರ ಚಟ್ಟೋಪಾದ್ಯಾಯ ಅವರು ಬರೆದ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬುತ್ತಿದೆ. ಈ ಗೀತೆಯು ದೇಶವನ್ನು ಅತ್ಯದ್ಬುತವಾಗಿ ಚಿತ್ರಿಸಿದೆ. ಈ ಗೀತೆಯ ಮೌಲ್ಯಗಳನ್ನು ನಾವು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಇದಕ್ಕಾಗಿ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. </p><p>* ಬಿಎಸ್ಎಫ್ ಮತ್ತು ಸಿಆರ್ಪಿಎಫ್ನಲ್ಲಿ ಮುಧೋಳ ತಳಿಯ ಶ್ವಾನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗುತ್ತಿರುವುದರ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.</p><p> * ಆಪರೇಷನ್ ಸಿಂಧೂರದ ಯಶಸ್ಸು ಹಾಗೂ ನಕ್ಸಲರ ಭಯ ಕಡಿಮೆಯಾಗಿರುವುದರಿಂದ ಈ ಬಾರಿ ದೇಶದಲ್ಲಿ ಜನರು ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.</p><p> * ನಮ್ಮ ಬುಡಕಟ್ಟು ಸಮುದಾಯಗಳಲ್ಲಿ ಭಗವಾನ್ ಬಿರ್ಸಾ ಮುಂಡಾ ಮತ್ತು ಕೋಮರಾಮ್ ಭೀಮ್ ಅವರಂತೆಯೇ ಹಲವಾರು ಶ್ರೇಷ್ಠ ಸಾಧಕರು ಆಗಿ ಹೋಗಿದ್ದಾರೆ. ಈ ಎಲ್ಲ ಬಗ್ಗೆಯೂ ನೀವು ಖಂಡಿತವಾಗಿಯೂ ಓದಲೇಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>