<p><strong>ನವದೆಹಲಿ</strong>: ಲಖಿಂಪುರ ಖೇರಿ ಹಿಂಸಾಚಾರ (2021) ಪ್ರಕರಣದ ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಬಂದಿದ್ದ ಆರೋಪದ ಕುರಿತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ಪೊಲೀಸರಿಗೆ ಸೂಚಿಸಿದೆ.</p>.<p>ಕೇಂದ್ರದ ಮಾಜಿ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ವಿರುದ್ಧ ಸಾಕ್ಷಿ ನುಡಿದಿದ್ದಕ್ಕಾಗಿ ಬೆದರಿಕೆ ಬಂದಿದೆ ಎಂದು ಸಾಕ್ಷಿದಾರರೊಬ್ಬರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು. ಆಗ ಕೋರ್ಟ್, ಈ ಸಂಬಂಧ ಪೊಲೀಸರ ಬಳಿ ದೂರು ನೀಡುವಂತೆ ಅವರಿಗೆ ಹೇಳಿತು.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೇಶ್ವರ ಸಿಂಗ್ ಅವರನ್ನೊಳಗೊಂಡ ಪೀಠ ಈ ಕುರಿತು ವಿಚಾರಣೆ ನಡೆಸಿತು. ಸಾಕ್ಷಿದಾರರ ದೂರನ್ನು ಪರಿಶೀಲಿಸಿ, ಅಗತ್ಯವಿದ್ದರೆ ಹೊಸ ವರದಿ ಸಲ್ಲಿಸುವಂತೆ ಪೀಠವು ಪೊಲೀಸರಿಗೆ ತಿಳಿಸಿತು.</p>.<p>ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇದೇ ವೇಳೆ ನಿರಾಕರಿಸಿತು. ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಅವರ ಜಾಮೀನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಈ ಕುರಿತ ವಿಚಾರಣೆಯನ್ನು ಪೀಠ ಏಪ್ರಿಲ್ 16ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲಖಿಂಪುರ ಖೇರಿ ಹಿಂಸಾಚಾರ (2021) ಪ್ರಕರಣದ ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಬಂದಿದ್ದ ಆರೋಪದ ಕುರಿತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ಪೊಲೀಸರಿಗೆ ಸೂಚಿಸಿದೆ.</p>.<p>ಕೇಂದ್ರದ ಮಾಜಿ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ವಿರುದ್ಧ ಸಾಕ್ಷಿ ನುಡಿದಿದ್ದಕ್ಕಾಗಿ ಬೆದರಿಕೆ ಬಂದಿದೆ ಎಂದು ಸಾಕ್ಷಿದಾರರೊಬ್ಬರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು. ಆಗ ಕೋರ್ಟ್, ಈ ಸಂಬಂಧ ಪೊಲೀಸರ ಬಳಿ ದೂರು ನೀಡುವಂತೆ ಅವರಿಗೆ ಹೇಳಿತು.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೇಶ್ವರ ಸಿಂಗ್ ಅವರನ್ನೊಳಗೊಂಡ ಪೀಠ ಈ ಕುರಿತು ವಿಚಾರಣೆ ನಡೆಸಿತು. ಸಾಕ್ಷಿದಾರರ ದೂರನ್ನು ಪರಿಶೀಲಿಸಿ, ಅಗತ್ಯವಿದ್ದರೆ ಹೊಸ ವರದಿ ಸಲ್ಲಿಸುವಂತೆ ಪೀಠವು ಪೊಲೀಸರಿಗೆ ತಿಳಿಸಿತು.</p>.<p>ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇದೇ ವೇಳೆ ನಿರಾಕರಿಸಿತು. ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಅವರ ಜಾಮೀನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಈ ಕುರಿತ ವಿಚಾರಣೆಯನ್ನು ಪೀಠ ಏಪ್ರಿಲ್ 16ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>