<p><strong>ಬೆಂಗಳೂರು</strong>: ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆ ಅಂಗವಾಗಿ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. </p><p>'ಜೈ ಜವಾನ್ - ಜೈ ಕಿಸಾನ್' ಘೋಷಣೆಯ ಮೂಲಕ ಭಾರತೀಯರನ್ನು ಸ್ವಾತಂತ್ರ್ಯ ಸಂಗ್ರಾಮ ಮತ್ತು ರಾಷ್ಟ್ರನಿರ್ಮಾಣದಲ್ಲಿ ತೊಡಗಿಸಿದ ಅಪ್ರತಿಮ ದೇಶಭಕ್ತ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆಯಂದು ಗೌರವದಿಂದ ಸ್ಮರಿಸುತ್ತಾ, ನನ್ನ ನಮನಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. </p><p>ಮಾಜಿ ಪ್ರಧಾನಿ, ಭಾರತ ರತ್ನ ಶಾಸ್ತ್ರಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತೇವೆ. 'ಜೈ ಜವಾನ್, ಜೈ ಕಿಸಾನ್'ನೊಂದಿಗೆ ಅವರು ಮುನ್ನಡೆಸಿದ ಹಸಿರು ಕ್ರಾಂತಿ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ <em><strong>ಜೋಶಿ</strong></em> ಟ್ವೀಟ್ ಮಾಡಿದ್ದಾರೆ. </p><p>‘ನಮ್ಮ ಶಕ್ತಿಗೆ ಇರುವ ಅತ್ಯಂತ ಮುಖ್ಯವಾದ ಕಾರ್ಯವೆಂದರೆ ಜನರನ್ನು ಒಂದುಗೂಡಿಸುವುದು‘ ಎಂಬ ಶಾಸ್ತ್ರಿ ಅವರ ಹೇಳಿಕೆಯನ್ನು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಅವರನ್ನು ಸ್ಮರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆ ಅಂಗವಾಗಿ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. </p><p>'ಜೈ ಜವಾನ್ - ಜೈ ಕಿಸಾನ್' ಘೋಷಣೆಯ ಮೂಲಕ ಭಾರತೀಯರನ್ನು ಸ್ವಾತಂತ್ರ್ಯ ಸಂಗ್ರಾಮ ಮತ್ತು ರಾಷ್ಟ್ರನಿರ್ಮಾಣದಲ್ಲಿ ತೊಡಗಿಸಿದ ಅಪ್ರತಿಮ ದೇಶಭಕ್ತ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆಯಂದು ಗೌರವದಿಂದ ಸ್ಮರಿಸುತ್ತಾ, ನನ್ನ ನಮನಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. </p><p>ಮಾಜಿ ಪ್ರಧಾನಿ, ಭಾರತ ರತ್ನ ಶಾಸ್ತ್ರಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತೇವೆ. 'ಜೈ ಜವಾನ್, ಜೈ ಕಿಸಾನ್'ನೊಂದಿಗೆ ಅವರು ಮುನ್ನಡೆಸಿದ ಹಸಿರು ಕ್ರಾಂತಿ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ <em><strong>ಜೋಶಿ</strong></em> ಟ್ವೀಟ್ ಮಾಡಿದ್ದಾರೆ. </p><p>‘ನಮ್ಮ ಶಕ್ತಿಗೆ ಇರುವ ಅತ್ಯಂತ ಮುಖ್ಯವಾದ ಕಾರ್ಯವೆಂದರೆ ಜನರನ್ನು ಒಂದುಗೂಡಿಸುವುದು‘ ಎಂಬ ಶಾಸ್ತ್ರಿ ಅವರ ಹೇಳಿಕೆಯನ್ನು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಅವರನ್ನು ಸ್ಮರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>