ಹಂಗಾಮಿ ಸ್ಪೀಕರ್ ಲಾಲ್ಫಂಕಿಮ ಅವರು ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಅವಿರೋಧ ಆಯ್ಕೆ ನಡೆದಿದೆ. ವಿಧಾನಸಭೆಯ ಮೊದಲ ಅಧಿವೇಶನ ಮಂಗಳವಾರ ಆರಂಭವಾಗಿದ್ದು 39 ಮಂದಿ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಬೋಧಿಸಿದರು. ರಾಜ್ಯಪಾಲ ಹರಿಬಾಬು ಕಂಭಮ್ಪತಿ ಅವರು ಸದನವನ್ನು ಉದ್ದೇಶಿಸಿ ಬುಧವಾರ ಮಾತನಾಡಲಿದ್ದಾರೆ.