<p><strong>ನವದೆಹಲಿ</strong>: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಲಲಿತ್ ಮೋದಿ ಸೋದರ ಸಂಬಂಧಿ ಸಮೀರ್ ಮೋದಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.</p><p>ಈ ಅರ್ಜಿಯ ವಿಚಾರಣೆಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಪಿನ್ ಖಾರ್ಬ್ ನಡೆಸಿದರು.</p><p>₹5 ಲಕ್ಷ ವೈಯಕ್ತಿಕ ಹಾಗೂ ಭದ್ರತಾ ಬಾಂಡ್, ದೇಶವನ್ನು ಬಿಟ್ಟು ಹೋಗದಿರುವುದು, ವಿಚಾರಣೆಗೆ ಹಾಜರಾಗುವುದು, ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಿರುವುದು ಸೇರಿದಂತೆ ಸಾಕ್ಷ್ಯಗಳನ್ನು ಹಾಳು ಮಾಡದಂತೆ ಇತರೆ ಷರತ್ತುಗಳ ಅನ್ವಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.</p>.ಗುತ್ತಿಗೆ ಪ್ರದೇಶದ ಗಡಿ ನಿರ್ಧರಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್.ಕಸ್ಟಡಿ ಸಾವು: ಮಧ್ಯಪ್ರದೇಶ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ತಪರಾಕಿ. <p>ಸಂತ್ರಸ್ತೆಯ ಮೇಲೆ ಪ್ರಭಾವ ಬೀರಬಹುದು ಮತ್ತು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ಪರ ವಕೀಲರು ವಾದಿಸಿದ್ದರು. ಈ ವೇಳೆ ಸಾಕ್ಷ್ಯಗಳು ಧೃಡಪಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.</p><p>ಈ ಪ್ರಕರಣದಲ್ಲಿ ಇನ್ನು ಮುಂದೆ ಸಮೀರ್ ಮೋದಿ ಕಸ್ಟಡಿಯಲ್ಲಿ ಇರುವ ಅಗತ್ಯತೆ ಇಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ವಿಪಿನ್ ತಿಳಿಸಿದ್ದಾರೆ.</p>.ಬಿಹಾರ: ಮಹಿಳೆಯರ ಜತೆ ಪ್ರಿಯಾಂಕಾ ಸಂವಾದ.ತಿರುಮಲ: ದೇಶದಲ್ಲಿಯೇ ಮೊದಲ ಬಾರಿ AI ಆಧರಿತ ಕಮಾಂಡ್–ಕಂಟ್ರೋಲ್ ಕೇಂದ್ರ ಸ್ಥಾಪನೆ.ಸ್ವಾಮೀಜಿ ಮೇಲೆ ಆರೋಪ: ವಿದ್ಯಾರ್ಥಿಗಳು ಸುರಕ್ಷಿತ, ತನಿಖೆ ಪ್ರಗತಿಯಲ್ಲಿ; ಸಂಸ್ಥೆ.ಮಹಾರಾಷ್ಟ್ರ: ಒಬಿಸಿ ಕೋಟಾ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಲಲಿತ್ ಮೋದಿ ಸೋದರ ಸಂಬಂಧಿ ಸಮೀರ್ ಮೋದಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.</p><p>ಈ ಅರ್ಜಿಯ ವಿಚಾರಣೆಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಪಿನ್ ಖಾರ್ಬ್ ನಡೆಸಿದರು.</p><p>₹5 ಲಕ್ಷ ವೈಯಕ್ತಿಕ ಹಾಗೂ ಭದ್ರತಾ ಬಾಂಡ್, ದೇಶವನ್ನು ಬಿಟ್ಟು ಹೋಗದಿರುವುದು, ವಿಚಾರಣೆಗೆ ಹಾಜರಾಗುವುದು, ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಿರುವುದು ಸೇರಿದಂತೆ ಸಾಕ್ಷ್ಯಗಳನ್ನು ಹಾಳು ಮಾಡದಂತೆ ಇತರೆ ಷರತ್ತುಗಳ ಅನ್ವಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.</p>.ಗುತ್ತಿಗೆ ಪ್ರದೇಶದ ಗಡಿ ನಿರ್ಧರಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್.ಕಸ್ಟಡಿ ಸಾವು: ಮಧ್ಯಪ್ರದೇಶ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ತಪರಾಕಿ. <p>ಸಂತ್ರಸ್ತೆಯ ಮೇಲೆ ಪ್ರಭಾವ ಬೀರಬಹುದು ಮತ್ತು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ಪರ ವಕೀಲರು ವಾದಿಸಿದ್ದರು. ಈ ವೇಳೆ ಸಾಕ್ಷ್ಯಗಳು ಧೃಡಪಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.</p><p>ಈ ಪ್ರಕರಣದಲ್ಲಿ ಇನ್ನು ಮುಂದೆ ಸಮೀರ್ ಮೋದಿ ಕಸ್ಟಡಿಯಲ್ಲಿ ಇರುವ ಅಗತ್ಯತೆ ಇಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ವಿಪಿನ್ ತಿಳಿಸಿದ್ದಾರೆ.</p>.ಬಿಹಾರ: ಮಹಿಳೆಯರ ಜತೆ ಪ್ರಿಯಾಂಕಾ ಸಂವಾದ.ತಿರುಮಲ: ದೇಶದಲ್ಲಿಯೇ ಮೊದಲ ಬಾರಿ AI ಆಧರಿತ ಕಮಾಂಡ್–ಕಂಟ್ರೋಲ್ ಕೇಂದ್ರ ಸ್ಥಾಪನೆ.ಸ್ವಾಮೀಜಿ ಮೇಲೆ ಆರೋಪ: ವಿದ್ಯಾರ್ಥಿಗಳು ಸುರಕ್ಷಿತ, ತನಿಖೆ ಪ್ರಗತಿಯಲ್ಲಿ; ಸಂಸ್ಥೆ.ಮಹಾರಾಷ್ಟ್ರ: ಒಬಿಸಿ ಕೋಟಾ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>