<p><strong>ಪಟ್ನಾ</strong>: ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮತ್ತು ಕುಟುಂಬದಿಂದ ಹೊರಹಾಕಲ್ಪಟ್ಟಿದ್ದ ತನ್ನ ಹಿರಿಯ ಪುತ್ರ ತೇಜ್ಪ್ರತಾಪ್ ಯಾದವ್ ಮನೆಯಲ್ಲಿ ಬುಧವಾರ ನಡೆದ ಸಂಕ್ರಾಂತಿ ಹಬ್ಬದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಭಾಗಿಯಾಗಿದ್ದರು.</p>.<p>ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಲಾಲೂ ಕುಟುಂಬದಲ್ಲಿ ಮತ್ತೆ ಸಾಮರಸ್ಯ ಮೂಡುತ್ತಿರುವುದಕ್ಕೆ ಈ ಬೆಳವಣಿಗೆ ಮುನ್ಸೂಚನೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ.</p>.<p>ಉಚ್ಚಾಟನೆ ಬಳಿಕ ಜನಶಕ್ತಿ ಜನತಾ ದಳ(ಜೆಜೆಡಿ) ಸ್ಥಾಪಿಸಿದ್ದ ತೇಜ್ಪ್ರತಾಪ್ ಮಂಗಳವಾರ ರಾತ್ರಿ ತನ್ನ ಪೋಷಕರು ಮತ್ತು ಸಹೋದರ ತೇಜಸ್ವಿ ಅವರನ್ನು ಭೇಟಿಯಾಗಿ ಹಬ್ಬಕ್ಕೆ ಆಹ್ವಾನಿಸಿದರು. ಆದರೆ ಲಾಲೂ ಮಾತ್ರ ತೇಜ್ ಪ್ರತಾಪ್ ಮನೆಗೆ ಆಗಮಿಸಿದ್ದರು.</p>.<p>ಹಿರಿಯ ಮಗನ ಸಾರ್ವಜನಿಕ ನಡವಳಿಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಲಾಲೂ, ಕಳೆದ ಮೇನಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದರು ಮತ್ತು ಕುಟುಂಬದಿಂದ ಹೊರಹಾಕಿರುವುದಾಗಿ ಘೋಷಿಸಿದ್ದರು. ತೇಜ್ಪ್ರತಾಪ್ ಹೊಸ ಪಕ್ಷ ಜೆಜೆಡಿ ವಿಧಾನಸಭಾ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿತ್ತು. </p>.<p>ದೆಹಲಿ ಉಪ ಮುಖ್ಯಮಂತ್ರಿ ಬಿಜೆಪಿ ವಿಜಯ್ ಕುಮಾರ್ ಸಿನ್ಹಾ ಅವರ ಮನೆಯಲ್ಲಿ ಮಂಗಳವಾರ ನಡೆದ ಸಂಕ್ರಾಂತಿ ಹಬ್ಬದಲ್ಲಿ ತೇಜ್ಪ್ರತಾಪ್ ಭಾಗಿಯಾಗಿದ್ದರು. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಅವರು ಸೇರುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮತ್ತು ಕುಟುಂಬದಿಂದ ಹೊರಹಾಕಲ್ಪಟ್ಟಿದ್ದ ತನ್ನ ಹಿರಿಯ ಪುತ್ರ ತೇಜ್ಪ್ರತಾಪ್ ಯಾದವ್ ಮನೆಯಲ್ಲಿ ಬುಧವಾರ ನಡೆದ ಸಂಕ್ರಾಂತಿ ಹಬ್ಬದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಭಾಗಿಯಾಗಿದ್ದರು.</p>.<p>ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಲಾಲೂ ಕುಟುಂಬದಲ್ಲಿ ಮತ್ತೆ ಸಾಮರಸ್ಯ ಮೂಡುತ್ತಿರುವುದಕ್ಕೆ ಈ ಬೆಳವಣಿಗೆ ಮುನ್ಸೂಚನೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ.</p>.<p>ಉಚ್ಚಾಟನೆ ಬಳಿಕ ಜನಶಕ್ತಿ ಜನತಾ ದಳ(ಜೆಜೆಡಿ) ಸ್ಥಾಪಿಸಿದ್ದ ತೇಜ್ಪ್ರತಾಪ್ ಮಂಗಳವಾರ ರಾತ್ರಿ ತನ್ನ ಪೋಷಕರು ಮತ್ತು ಸಹೋದರ ತೇಜಸ್ವಿ ಅವರನ್ನು ಭೇಟಿಯಾಗಿ ಹಬ್ಬಕ್ಕೆ ಆಹ್ವಾನಿಸಿದರು. ಆದರೆ ಲಾಲೂ ಮಾತ್ರ ತೇಜ್ ಪ್ರತಾಪ್ ಮನೆಗೆ ಆಗಮಿಸಿದ್ದರು.</p>.<p>ಹಿರಿಯ ಮಗನ ಸಾರ್ವಜನಿಕ ನಡವಳಿಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಲಾಲೂ, ಕಳೆದ ಮೇನಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದರು ಮತ್ತು ಕುಟುಂಬದಿಂದ ಹೊರಹಾಕಿರುವುದಾಗಿ ಘೋಷಿಸಿದ್ದರು. ತೇಜ್ಪ್ರತಾಪ್ ಹೊಸ ಪಕ್ಷ ಜೆಜೆಡಿ ವಿಧಾನಸಭಾ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿತ್ತು. </p>.<p>ದೆಹಲಿ ಉಪ ಮುಖ್ಯಮಂತ್ರಿ ಬಿಜೆಪಿ ವಿಜಯ್ ಕುಮಾರ್ ಸಿನ್ಹಾ ಅವರ ಮನೆಯಲ್ಲಿ ಮಂಗಳವಾರ ನಡೆದ ಸಂಕ್ರಾಂತಿ ಹಬ್ಬದಲ್ಲಿ ತೇಜ್ಪ್ರತಾಪ್ ಭಾಗಿಯಾಗಿದ್ದರು. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಅವರು ಸೇರುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>