<p><strong>ಪಟ್ನಾ:</strong> ‘ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಂದ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನವಾಗಿದೆ. ಇದು ದಲಿತರ ಮೇಲೆ ಅವರು ಹೊಂದಿರುವ ಅಗೌರವವನ್ನು ತೋರಿಸುತ್ತದೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಆರೋಪಿಸಿದ್ದಾರೆ. </p>.<p>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಪಕ್ಷದ ತಯಾರಿಗಾಗಿ ಪಟ್ನಾದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜನಾಥ್ ಮಾತನಾಡಿದರು. </p>.<p>‘ಲಾಲು ಪ್ರಸಾದ್ ಅವರ ಕಾಲಿನ ಬಳಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಲಾಗಿತ್ತು. ಇದು ಸಣ್ಣ ಪ್ರಮಾದವಲ್ಲ. ಸರ್ವಾಧಿಕಾರಿ ಧೋರಣೆ ಹೊಂದಿರುವ ಈ ಜನರು ಸಾಮಾಜಿಕ ಸಮಾನತೆಯ ಮುಖವಾಡ ಧರಿಸಿ ಬಿಹಾರವನ್ನು ವಂಚಿಸುತ್ತಾ ಬಂದಿದ್ದಾರೆ’ ಎಂದು ಆರೋಪಿಸಿದರು. </p>.<p>ಲಾಲು ಅವರ ಹುಟ್ಟುಹಬ್ಬದಂದು ನೂರಾರು ಜನರು ಅವರ ಮನೆಗೆ ಬಂದು ಶುಭಾಷಯ ಕೋರುತ್ತಿದ್ದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕುರ್ಚಿ ಮೇಲೆ ಕುಳಿತಿದ್ದ ಲಾಲು ಅವರ ಕಾಲಿನ ಬಳಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿದ್ದು ವಿಡಿಯೊದಲ್ಲಿ ಕಂಡು ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಂದ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನವಾಗಿದೆ. ಇದು ದಲಿತರ ಮೇಲೆ ಅವರು ಹೊಂದಿರುವ ಅಗೌರವವನ್ನು ತೋರಿಸುತ್ತದೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಆರೋಪಿಸಿದ್ದಾರೆ. </p>.<p>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಪಕ್ಷದ ತಯಾರಿಗಾಗಿ ಪಟ್ನಾದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜನಾಥ್ ಮಾತನಾಡಿದರು. </p>.<p>‘ಲಾಲು ಪ್ರಸಾದ್ ಅವರ ಕಾಲಿನ ಬಳಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಲಾಗಿತ್ತು. ಇದು ಸಣ್ಣ ಪ್ರಮಾದವಲ್ಲ. ಸರ್ವಾಧಿಕಾರಿ ಧೋರಣೆ ಹೊಂದಿರುವ ಈ ಜನರು ಸಾಮಾಜಿಕ ಸಮಾನತೆಯ ಮುಖವಾಡ ಧರಿಸಿ ಬಿಹಾರವನ್ನು ವಂಚಿಸುತ್ತಾ ಬಂದಿದ್ದಾರೆ’ ಎಂದು ಆರೋಪಿಸಿದರು. </p>.<p>ಲಾಲು ಅವರ ಹುಟ್ಟುಹಬ್ಬದಂದು ನೂರಾರು ಜನರು ಅವರ ಮನೆಗೆ ಬಂದು ಶುಭಾಷಯ ಕೋರುತ್ತಿದ್ದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕುರ್ಚಿ ಮೇಲೆ ಕುಳಿತಿದ್ದ ಲಾಲು ಅವರ ಕಾಲಿನ ಬಳಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿದ್ದು ವಿಡಿಯೊದಲ್ಲಿ ಕಂಡು ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>