<p><strong>ಪಟ್ನಾ:</strong> ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಅವರನ್ನು ಭೇಟಿಯಾಗಿದ್ದಕ್ಕಾಗಿ ಇಂಡಿಯಾ ಮೈತ್ರಿ ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರ ವಿರುದ್ಧ ಬಿಜೆಪಿ ಹಿರಿಯ ನಾಯಕ, ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.</p>.<p>ರೆಡ್ಡಿ ತಮ್ಮ ಈ ನಡೆಯ ಮೂಲಕ ‘ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದ್ದಾರೆ’ ಎಂದು ಚೌಧರಿ ಟೀಕಿಸಿದ್ದಾರೆ.</p>.<p>‘ಆರ್ಜೆಡಿ ಮುಖ್ಯಸ್ಥರು ಮೇವು ಹಗರಣದಲ್ಲಿ ಅಪರಾಧಿಯಾಗಿದ್ದಾರೆ. ಅವರು ಸಂಸದರೂ ಅಲ್ಲ. ಅಂಥವರನ್ನು ಇತ್ತೀಚೆಗೆ (ಸೆ.4) ಪಟ್ನಾದಲ್ಲಿ ರೆಡ್ಡಿ ಭೇಟಿಯಾಗಿದ್ದಾರೆ. ಇದರಿಂದ ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದಂತಾಗಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬುದು ಸ್ಪಷ್ಟ’ ಎಂದಿದ್ದಾರೆ.</p>.<p class="title">ಇದೇ ವೇಳೆ, ಎನ್ಡಿಎ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾದ ಸಂಶಯಗಳ ಬಗ್ಗೆ ಸ್ಪಷ್ಟನೆ ನೀಡಿದ ಚೌಧರಿ, ‘ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರೇ ಎನ್ಡಿಎ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ, ಮುಂದೆಯೂ ಅವರೇ ಆಗಿರುತ್ತಾರೆ. ಈ ಬಗ್ಗೆ ಪ್ರತಿಪಕ್ಷಗಳು ಏನು ಬೇಕಾದರೂ ಹೇಳಿಕೊಳ್ಳಲಿ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಅವರನ್ನು ಭೇಟಿಯಾಗಿದ್ದಕ್ಕಾಗಿ ಇಂಡಿಯಾ ಮೈತ್ರಿ ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರ ವಿರುದ್ಧ ಬಿಜೆಪಿ ಹಿರಿಯ ನಾಯಕ, ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.</p>.<p>ರೆಡ್ಡಿ ತಮ್ಮ ಈ ನಡೆಯ ಮೂಲಕ ‘ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದ್ದಾರೆ’ ಎಂದು ಚೌಧರಿ ಟೀಕಿಸಿದ್ದಾರೆ.</p>.<p>‘ಆರ್ಜೆಡಿ ಮುಖ್ಯಸ್ಥರು ಮೇವು ಹಗರಣದಲ್ಲಿ ಅಪರಾಧಿಯಾಗಿದ್ದಾರೆ. ಅವರು ಸಂಸದರೂ ಅಲ್ಲ. ಅಂಥವರನ್ನು ಇತ್ತೀಚೆಗೆ (ಸೆ.4) ಪಟ್ನಾದಲ್ಲಿ ರೆಡ್ಡಿ ಭೇಟಿಯಾಗಿದ್ದಾರೆ. ಇದರಿಂದ ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದಂತಾಗಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬುದು ಸ್ಪಷ್ಟ’ ಎಂದಿದ್ದಾರೆ.</p>.<p class="title">ಇದೇ ವೇಳೆ, ಎನ್ಡಿಎ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾದ ಸಂಶಯಗಳ ಬಗ್ಗೆ ಸ್ಪಷ್ಟನೆ ನೀಡಿದ ಚೌಧರಿ, ‘ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರೇ ಎನ್ಡಿಎ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ, ಮುಂದೆಯೂ ಅವರೇ ಆಗಿರುತ್ತಾರೆ. ಈ ಬಗ್ಗೆ ಪ್ರತಿಪಕ್ಷಗಳು ಏನು ಬೇಕಾದರೂ ಹೇಳಿಕೊಳ್ಳಲಿ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>