<p><strong>ಪಟ್ನಾ</strong>: ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ಹಾಗೂ ಜನಶಕ್ತಿ ಜನತಾ ದಳದ ನಾಯಕ ತೇಜ್ ಪ್ರತಾಪ್ ಯಾದವ್ ಅವರು, ನನಗೆ ಬೆದರಿಕೆ ಇದ್ದು, ಶತ್ರುಗಳು ನನ್ನನ್ನು ಕೊಲ್ಲಬಹುದು ಎಂದು ಹೇಳಿದ್ದಾರೆ.</p><p>ಆರ್ಜೆಡಿಯಿಂದ ಹೊರ ಹಾಕಿದ ನಂತರ ಇತ್ತೀಚೆಗೆ ರಾಜಕೀಯ ಪಕ್ಷವನ್ನು ಸ್ಥಾಪಿಸಿದ ತೇಜ್, ಪ್ರಸ್ತುತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹುವಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.</p>.ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ಉಗ್ರಂ’ ಮಂಜು .ವಂದೇ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳಿಂದ RSSಗೀತೆ: ತನಿಖೆಗೆ ಕೇರಳ ಸರ್ಕಾರ ಆದೇಶ. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ನನಗೆ ಬೆದರಿಕೆ ಇದೆ. ನನ್ನ ಶತ್ರುಗಳು ನನ್ನನ್ನು ಕೊಲ್ಲಲೂಬಹುದು. ಎಲ್ಲರೂ ಶತ್ರುಗಳಂತೆ ಕಾಣುತ್ತಿದ್ದಾರೆ ಎಂದಿದ್ದಾರೆ.</p><p>ಆದರೆ ಅವರು ಬೆದರಿಕೆ ಕರೆಗಳ ಬಗ್ಗೆ ಅಥವಾ ಶತ್ರುಗಳ ಹೆಸರುಗಳನ್ನು ಬಹಿರಂಗಪಡಿಸಿಲ್ಲ ಎಂದು ತಿಳಿದು ಬಂದಿದೆ.</p><p>ಪಕ್ಷದಿಂದ ಹೊರಹಾಕಿದ ಬಳಿಕ ಪೋಸ್ಟ್ ಹಂಚಿಕೊಂಡಿದ್ದ ತೇಜ್, 'ನನ್ನ ಮತ್ತು ನನ್ನ ತಮ್ಮನ ನಡುವೆ ಬಿರುಕು ಮೂಡಿಸಲು ರಾಜಕೀಯ ಪಿತೂರಿ ನಡೆದಿದೆ' ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದರು.</p>.ಮತಕಳ್ಳತನದ ವಿರುದ್ಧ ಜನ ಒಗ್ಗೂಡಿದರೆ ಬಿಹಾರದಲ್ಲಿ ನಮ್ಮದೇ ಅಧಿಕಾರ: ರಾಹುಲ್ ಗಾಂಧಿ.MP: ದಿನಪತ್ರಿಕೆಯಲ್ಲಿ ಮಕ್ಕಳಿಗೆ ಬಿಸಿಯೂಟ; ವಿವಾದದ ಬಳಿಕ ಸ್ಟೀಲ್ಪ್ಲೇಟ್ ವಿತರಣೆ. <p>ಈ ಹಿಂದೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲಾಲೂ, ‘ನನ್ನ ಹಿರಿಯ ಪುತ್ರ ತೇಜ್ ಪ್ರತಾಪ್ನ ಕಾರ್ಯಚಟುವಟಿಕೆಗಳು ನಮ್ಮ ಕುಟುಂಬದ ಘನತೆಗೆ, ಪರಂಪರೆಗೆ ತಕ್ಕುದಾಗಿಲ್ಲ. ಆತನ ಬೇಜವಾಬ್ದಾರಿಯುತ ವರ್ತನೆಯಿಂದಾಗಿ ಅವನನ್ನು ಪಕ್ಷ ಹಾಗೂ ಕುಟುಂಬದಿಂದ ಉಚ್ಚಾಟಿಸುತ್ತಿದ್ದೇನೆ. ಇನ್ನು ಮುಂದೆ ಪಕ್ಷಕ್ಕಾಗಲಿ, ಕುಟುಂಬಕ್ಕಾಗಲಿ ಆತ ಸಂಬಂಧಿಸಿದವನಲ್ಲ. ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು.</p><p>‘ಮಹಿಳೆಯೊಬ್ಬರ ಜತೆಗೆ ನಾನು ಸಂಬಂಧ ಹೊಂದಿದ್ದೇನೆ’ ಎಂದು ತೇಜ್ ಪ್ರತಾಪ್ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ತನ್ನ ಅಕೌಂಟ್ ಹ್ಯಾಕ್ ಆಗಿದೆ ಎಂದೂ ಹೇಳಿಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತೇಜ್ ಅವರನ್ನು ಲಾಲೂ ಉಚ್ಚಾಟನೆ ಮಾಡಿದ್ದರು.</p>.ಅತ್ಯಾಚಾರ ಪ್ರಕರಣ: ಎಎಪಿ ಶಾಸಕ ಹರ್ಮೀತ್ ಸಿಂಗ್ ಆಸ್ಟ್ರೇಲಿಯಾಕ್ಕೆ ಪರಾರಿ.ವಿಜಯನಗರಕ್ಕೆ ಸಿಎಂ ಭೇಟಿ: 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ಹಾಗೂ ಜನಶಕ್ತಿ ಜನತಾ ದಳದ ನಾಯಕ ತೇಜ್ ಪ್ರತಾಪ್ ಯಾದವ್ ಅವರು, ನನಗೆ ಬೆದರಿಕೆ ಇದ್ದು, ಶತ್ರುಗಳು ನನ್ನನ್ನು ಕೊಲ್ಲಬಹುದು ಎಂದು ಹೇಳಿದ್ದಾರೆ.</p><p>ಆರ್ಜೆಡಿಯಿಂದ ಹೊರ ಹಾಕಿದ ನಂತರ ಇತ್ತೀಚೆಗೆ ರಾಜಕೀಯ ಪಕ್ಷವನ್ನು ಸ್ಥಾಪಿಸಿದ ತೇಜ್, ಪ್ರಸ್ತುತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹುವಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.</p>.ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ಉಗ್ರಂ’ ಮಂಜು .ವಂದೇ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳಿಂದ RSSಗೀತೆ: ತನಿಖೆಗೆ ಕೇರಳ ಸರ್ಕಾರ ಆದೇಶ. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ನನಗೆ ಬೆದರಿಕೆ ಇದೆ. ನನ್ನ ಶತ್ರುಗಳು ನನ್ನನ್ನು ಕೊಲ್ಲಲೂಬಹುದು. ಎಲ್ಲರೂ ಶತ್ರುಗಳಂತೆ ಕಾಣುತ್ತಿದ್ದಾರೆ ಎಂದಿದ್ದಾರೆ.</p><p>ಆದರೆ ಅವರು ಬೆದರಿಕೆ ಕರೆಗಳ ಬಗ್ಗೆ ಅಥವಾ ಶತ್ರುಗಳ ಹೆಸರುಗಳನ್ನು ಬಹಿರಂಗಪಡಿಸಿಲ್ಲ ಎಂದು ತಿಳಿದು ಬಂದಿದೆ.</p><p>ಪಕ್ಷದಿಂದ ಹೊರಹಾಕಿದ ಬಳಿಕ ಪೋಸ್ಟ್ ಹಂಚಿಕೊಂಡಿದ್ದ ತೇಜ್, 'ನನ್ನ ಮತ್ತು ನನ್ನ ತಮ್ಮನ ನಡುವೆ ಬಿರುಕು ಮೂಡಿಸಲು ರಾಜಕೀಯ ಪಿತೂರಿ ನಡೆದಿದೆ' ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದರು.</p>.ಮತಕಳ್ಳತನದ ವಿರುದ್ಧ ಜನ ಒಗ್ಗೂಡಿದರೆ ಬಿಹಾರದಲ್ಲಿ ನಮ್ಮದೇ ಅಧಿಕಾರ: ರಾಹುಲ್ ಗಾಂಧಿ.MP: ದಿನಪತ್ರಿಕೆಯಲ್ಲಿ ಮಕ್ಕಳಿಗೆ ಬಿಸಿಯೂಟ; ವಿವಾದದ ಬಳಿಕ ಸ್ಟೀಲ್ಪ್ಲೇಟ್ ವಿತರಣೆ. <p>ಈ ಹಿಂದೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲಾಲೂ, ‘ನನ್ನ ಹಿರಿಯ ಪುತ್ರ ತೇಜ್ ಪ್ರತಾಪ್ನ ಕಾರ್ಯಚಟುವಟಿಕೆಗಳು ನಮ್ಮ ಕುಟುಂಬದ ಘನತೆಗೆ, ಪರಂಪರೆಗೆ ತಕ್ಕುದಾಗಿಲ್ಲ. ಆತನ ಬೇಜವಾಬ್ದಾರಿಯುತ ವರ್ತನೆಯಿಂದಾಗಿ ಅವನನ್ನು ಪಕ್ಷ ಹಾಗೂ ಕುಟುಂಬದಿಂದ ಉಚ್ಚಾಟಿಸುತ್ತಿದ್ದೇನೆ. ಇನ್ನು ಮುಂದೆ ಪಕ್ಷಕ್ಕಾಗಲಿ, ಕುಟುಂಬಕ್ಕಾಗಲಿ ಆತ ಸಂಬಂಧಿಸಿದವನಲ್ಲ. ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು.</p><p>‘ಮಹಿಳೆಯೊಬ್ಬರ ಜತೆಗೆ ನಾನು ಸಂಬಂಧ ಹೊಂದಿದ್ದೇನೆ’ ಎಂದು ತೇಜ್ ಪ್ರತಾಪ್ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ತನ್ನ ಅಕೌಂಟ್ ಹ್ಯಾಕ್ ಆಗಿದೆ ಎಂದೂ ಹೇಳಿಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತೇಜ್ ಅವರನ್ನು ಲಾಲೂ ಉಚ್ಚಾಟನೆ ಮಾಡಿದ್ದರು.</p>.ಅತ್ಯಾಚಾರ ಪ್ರಕರಣ: ಎಎಪಿ ಶಾಸಕ ಹರ್ಮೀತ್ ಸಿಂಗ್ ಆಸ್ಟ್ರೇಲಿಯಾಕ್ಕೆ ಪರಾರಿ.ವಿಜಯನಗರಕ್ಕೆ ಸಿಎಂ ಭೇಟಿ: 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>