<p><strong>ನವದೆಹಲಿ(ಪಿಟಿಐ):</strong> ಭೂ ಸ್ವಾಧೀನಕ್ಕೆ ಸಂಬಂಧಿಸಿದ ನೀತಿಯಲ್ಲಿ ಬದಲಾವಣೆ ತರುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ಟಿ.ವಿ.ಸೋಮನಾಥನ್ ಶುಕ್ರವಾರ ಹೇಳಿದ್ದಾರೆ.</p>.<p>ಭೂಸ್ವಾಧೀನ ಹಾಗೂ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. </p>.<p>‘ಎಲ್ಲ ರಾಜ್ಯ ಸರ್ಕಾರಗಳು ಯೋಜನೆಗಳನ್ನು ಶೀಘ್ರವೇ ಮುಕ್ತಾಯಗೊಳಿಸಲು ಬಯಸಿವೆ. ಈ ನಿಟ್ಟಿನಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವುದಕ್ಕೆ ಸಂಬಂಧಿಸಿ ಎಲ್ಲ ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಹೇಳಿದರು.</p>.<p>‘ಸಭೆಯಲ್ಲಿ ಪ್ರಸ್ತಾಪಗೊಂಡ ಯೋಜನೆಗಳ ಪೈಕಿ ಶೇ 71ರಷ್ಟು ಯೋಜನೆಗಳು ಭೂ ಸ್ವಾಧೀನ/ಅರಣ್ಯ ಅಥವಾ ಪರಿಸರ ಅನುಮೋದನೆಗೆ ಸಂಬಂಧಿಸಿದ್ದಾಗಿದ್ದವು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>
<p><strong>ನವದೆಹಲಿ(ಪಿಟಿಐ):</strong> ಭೂ ಸ್ವಾಧೀನಕ್ಕೆ ಸಂಬಂಧಿಸಿದ ನೀತಿಯಲ್ಲಿ ಬದಲಾವಣೆ ತರುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ಟಿ.ವಿ.ಸೋಮನಾಥನ್ ಶುಕ್ರವಾರ ಹೇಳಿದ್ದಾರೆ.</p>.<p>ಭೂಸ್ವಾಧೀನ ಹಾಗೂ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. </p>.<p>‘ಎಲ್ಲ ರಾಜ್ಯ ಸರ್ಕಾರಗಳು ಯೋಜನೆಗಳನ್ನು ಶೀಘ್ರವೇ ಮುಕ್ತಾಯಗೊಳಿಸಲು ಬಯಸಿವೆ. ಈ ನಿಟ್ಟಿನಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವುದಕ್ಕೆ ಸಂಬಂಧಿಸಿ ಎಲ್ಲ ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಹೇಳಿದರು.</p>.<p>‘ಸಭೆಯಲ್ಲಿ ಪ್ರಸ್ತಾಪಗೊಂಡ ಯೋಜನೆಗಳ ಪೈಕಿ ಶೇ 71ರಷ್ಟು ಯೋಜನೆಗಳು ಭೂ ಸ್ವಾಧೀನ/ಅರಣ್ಯ ಅಥವಾ ಪರಿಸರ ಅನುಮೋದನೆಗೆ ಸಂಬಂಧಿಸಿದ್ದಾಗಿದ್ದವು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>