ತೇಜಸ್ವಿ ತಂದೆ ಹಾಗೂ ರಾಷ್ಟ್ರೀಯ ಜನತಾದಳದ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯುಪಿಎ–1 ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ನಡೆದಿರುವ ಹಗರಣ ಇದಾಗಿದ್ದು, ನವದೆಹಲಿಯಲ್ಲಿರುವ ಇ.ಡಿ ಮುಖ್ಯ ಕಚೇರಿಯಲ್ಲಿ ಡಿ.27ರಂದು ನಡೆಯುವ ವಿಚಾರಣೆಗೆ ಹಾಜರಾಗಿ ಎಂದು ಜಾರಿ ನಿರ್ದೇಶನಾಲಯ ಲಾಲು ಅವರಿಗೂ ಈಗಾಗಲೇ ಸಮನ್ಸ್ ನೀಡಿದೆ.