ಚೆನ್ನೈ: ‘ಭಾಷೆ ಎಂಬುದು ಅಗತ್ಯತೆ ಆಧರಿಸಿರುತ್ತದೆಯೇ ಹೊರತು ಹೇರಿಕೆಯ ಮೇಲೆ ಅಲ್ಲ’ ಎಂದು ತಮಿಳು ಚಿತ್ರರಂಗದ ಖ್ಯಾತ ಗೀತರಚನೆಕಾರ ವೈರಮುತ್ತು ಹೇಳಿದ್ದಾರೆ.
‘ಹಿಂದಿಯನ್ನು ಇಂಗ್ಲಿಷ್ಗೆ ಪರ್ಯಾಯ ಭಾಷೆಯಾಗಿ ಬಳಸಬೇಕೇ ಹೊರತು ಸ್ಥಳೀಯ ಭಾಷೆಗಳನ್ನಲ್ಲ. ದೇಶದೆಲ್ಲೆಡೆ ಸಂಪರ್ಕ ಭಾಷೆಯಾಗಿ ದೇಶೀಯ ಭಾಷೆಯಾದ ಹಿಂದಿಯನ್ನು ಬಳಸಬೇಕು. ವಿದೇಶಿ ಭಾಷೆಯನ್ನಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದರು.