<p><strong>ಚೆನ್ನೈ</strong>: ‘ಭಾಷೆ ಕುರಿತು ತಮಿಳುನಾಡಿನಲ್ಲಿ ನ್ಯಾಯ, ಘನತೆಯ ರಕ್ಷಣೆಗಾಗಿ ಹೋರಾಟ ನಡೆಯುತ್ತಿದೆ. ಅದು, ಮತ ರಾಜಕಾರಣದ ಗಲಭೆಯಲ್ಲ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆ, ‘ದ್ವೇಷ ಕುರಿತಂತೆ ಯೋಗಿ ಆದಿತ್ಯನಾಥ ಅವರು ಉಪದೇಶ ಮಾಡುವುದೇ ನಗೆಪಾಟಲಿನ ಸಂಗತಿ’ ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.</p><p>ಸಂದರ್ಶನವೊಂದರಲ್ಲಿ ಉತ್ತರ ಪ್ರದೇಶದ ಸಿ.ಎಂ ಅವರು, ‘ವೋಟ್ ಬ್ಯಾಂಕ್ ಕೈತಪ್ಪುವ ಭೀತಿಯಿಂದ ಸ್ಟಾಲಿನ್ ಅವರು ಧರ್ಮ ಮತ್ತು ಭಾಷೆ ಆಧಾರದಲ್ಲಿ ವಲಯವನ್ನು ವಿಭಜಿಸುತ್ತಿದ್ದಾರೆ’ ಎಂದಿದ್ದರು.</p><p>‘ನಾವು ಯಾವುದೇ ಭಾಷೆ ವಿರೋಧಿಸುತ್ತಿಲ್ಲ. ಆದರೆ, ಕೋಮುವಾದ, ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತಿದ್ದೇವೆ. ಇದು ನ್ಯಾಯ, ಘನತೆಗಾಗಿ ನಡೆದಿರುವ ಹೋರಾಟ’ ಎಂದಿದ್ದಾರೆ.</p><p>ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು, 'ಸ್ಟಾಲಿನ್ ತಮ್ಮನ್ನು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ರಕ್ಷಕನಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ಅವರ ಕುಟುಂಬದ ಮಾಲೀಕತ್ವದ ಶಾಲೆಗಳಲ್ಲಿ 3 ಭಾಷೆ ಕಲಿಸುತ್ತಿರುವುದು ದೇಶಕ್ಕೇ ಗೊತ್ತಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ಭಾಷೆ ಕುರಿತು ತಮಿಳುನಾಡಿನಲ್ಲಿ ನ್ಯಾಯ, ಘನತೆಯ ರಕ್ಷಣೆಗಾಗಿ ಹೋರಾಟ ನಡೆಯುತ್ತಿದೆ. ಅದು, ಮತ ರಾಜಕಾರಣದ ಗಲಭೆಯಲ್ಲ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆ, ‘ದ್ವೇಷ ಕುರಿತಂತೆ ಯೋಗಿ ಆದಿತ್ಯನಾಥ ಅವರು ಉಪದೇಶ ಮಾಡುವುದೇ ನಗೆಪಾಟಲಿನ ಸಂಗತಿ’ ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.</p><p>ಸಂದರ್ಶನವೊಂದರಲ್ಲಿ ಉತ್ತರ ಪ್ರದೇಶದ ಸಿ.ಎಂ ಅವರು, ‘ವೋಟ್ ಬ್ಯಾಂಕ್ ಕೈತಪ್ಪುವ ಭೀತಿಯಿಂದ ಸ್ಟಾಲಿನ್ ಅವರು ಧರ್ಮ ಮತ್ತು ಭಾಷೆ ಆಧಾರದಲ್ಲಿ ವಲಯವನ್ನು ವಿಭಜಿಸುತ್ತಿದ್ದಾರೆ’ ಎಂದಿದ್ದರು.</p><p>‘ನಾವು ಯಾವುದೇ ಭಾಷೆ ವಿರೋಧಿಸುತ್ತಿಲ್ಲ. ಆದರೆ, ಕೋಮುವಾದ, ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತಿದ್ದೇವೆ. ಇದು ನ್ಯಾಯ, ಘನತೆಗಾಗಿ ನಡೆದಿರುವ ಹೋರಾಟ’ ಎಂದಿದ್ದಾರೆ.</p><p>ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು, 'ಸ್ಟಾಲಿನ್ ತಮ್ಮನ್ನು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ರಕ್ಷಕನಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ಅವರ ಕುಟುಂಬದ ಮಾಲೀಕತ್ವದ ಶಾಲೆಗಳಲ್ಲಿ 3 ಭಾಷೆ ಕಲಿಸುತ್ತಿರುವುದು ದೇಶಕ್ಕೇ ಗೊತ್ತಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>