<p><strong>ಮುಂಬೈ: </strong>ಪಂಜಾಬ್ನ ಅಮೃತಸರದಲ್ಲಿ ಗಣರಾಜ್ಯೋತ್ಸವ ದಿನ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರುವುದರ ಕುರಿತು ಪ್ರತಿಕ್ರಿಯಿಸಿರುವ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್, ‘ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸಲು ರಾಷ್ಟ್ರದಾದ್ಯಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ’ ಎಂದು ಹೇಳಿದ್ದಾರೆ.</p><p>‘ದೇಶದಾದ್ಯಂತ ಸಂವಿಧಾನ ಮತ್ತು ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಸಂವಿಧಾನ ಬದಲಿಸಿ ಮನುಸ್ಮೃತಿ ಪರಿಚಯಿಸಲು ಷಡ್ಯಂತ್ರ ನಡೆಯುತ್ತಿದೆ. ಸಂವಿಧಾನ ಮತ್ತು ಅಂಬೇಡ್ಕರ್ ಪ್ರತಿಮೆಗಳನ್ನು ಧ್ವಂಸ ಮಾಡುತ್ತಿರುವುದು ಇದಕ್ಕೆ ನಿದರ್ಶನವಾಗಿದೆ’ ಎಂದು ಹೇಳಿದ್ದಾರೆ.</p><p>‘ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡುವುದು ಕ್ರಿಮಿನಲ್ ಕೃತ್ಯಕ್ಕಿಂತ ದೊಡ್ಡದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ಸುಧಾರಣೆ, ರಾಜಕೀಯ ತತ್ವಶಾಸ್ತ್ರ ಮತ್ತು ಶ್ರೀಮಂತ ಪರಂಪರೆಯನ್ನು ತಿರಸ್ಕರಿಸುವವರಿಂದ ಇಂತಹ ಕೆಲಸಗಳು ನಡೆಯುತ್ತಿವೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.</p><p>‘ಇಂತಹ ಘಟನೆಗಳು ಆಘಾತ ಉಂಟು ಮಾಡುತ್ತಿವೆ. ಆದರೆ ಇದಕ್ಕಿಂತಲೂ ಆಘಾತವಾಗುತ್ತಿರುವುದು ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ರಚಿಸಲಾದ ಸಂವಿಧಾನವನ್ನು ಭಾರತವು ಅಂಗೀಕರಿಸಿದ ದಿನವಾದ, ವಸಾಹತುಶಾಹಿ ಮತ್ತು ಮನುಸ್ಮೃತಿ ಆಡಳಿತದಿಂದ ಮುಕ್ತಗೊಂಡ ದಿನವಾದ ಗಣರಾಜ್ಯೋತ್ಸವದ ದಿನವೇ ಅಂಬೇಡ್ಕರ್ ಪ್ರತಿಮೆಗೆ ಹಾನಿಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p><p>‘ಎಎಪಿ ನೇತೃತ್ವದ ಪಂಜಾಬ್ ಸರ್ಕಾರವು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೊಳ್ಳುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಪಂಜಾಬ್ನ ಅಮೃತಸರದಲ್ಲಿ ಗಣರಾಜ್ಯೋತ್ಸವ ದಿನ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರುವುದರ ಕುರಿತು ಪ್ರತಿಕ್ರಿಯಿಸಿರುವ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್, ‘ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸಲು ರಾಷ್ಟ್ರದಾದ್ಯಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ’ ಎಂದು ಹೇಳಿದ್ದಾರೆ.</p><p>‘ದೇಶದಾದ್ಯಂತ ಸಂವಿಧಾನ ಮತ್ತು ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಸಂವಿಧಾನ ಬದಲಿಸಿ ಮನುಸ್ಮೃತಿ ಪರಿಚಯಿಸಲು ಷಡ್ಯಂತ್ರ ನಡೆಯುತ್ತಿದೆ. ಸಂವಿಧಾನ ಮತ್ತು ಅಂಬೇಡ್ಕರ್ ಪ್ರತಿಮೆಗಳನ್ನು ಧ್ವಂಸ ಮಾಡುತ್ತಿರುವುದು ಇದಕ್ಕೆ ನಿದರ್ಶನವಾಗಿದೆ’ ಎಂದು ಹೇಳಿದ್ದಾರೆ.</p><p>‘ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡುವುದು ಕ್ರಿಮಿನಲ್ ಕೃತ್ಯಕ್ಕಿಂತ ದೊಡ್ಡದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ಸುಧಾರಣೆ, ರಾಜಕೀಯ ತತ್ವಶಾಸ್ತ್ರ ಮತ್ತು ಶ್ರೀಮಂತ ಪರಂಪರೆಯನ್ನು ತಿರಸ್ಕರಿಸುವವರಿಂದ ಇಂತಹ ಕೆಲಸಗಳು ನಡೆಯುತ್ತಿವೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.</p><p>‘ಇಂತಹ ಘಟನೆಗಳು ಆಘಾತ ಉಂಟು ಮಾಡುತ್ತಿವೆ. ಆದರೆ ಇದಕ್ಕಿಂತಲೂ ಆಘಾತವಾಗುತ್ತಿರುವುದು ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ರಚಿಸಲಾದ ಸಂವಿಧಾನವನ್ನು ಭಾರತವು ಅಂಗೀಕರಿಸಿದ ದಿನವಾದ, ವಸಾಹತುಶಾಹಿ ಮತ್ತು ಮನುಸ್ಮೃತಿ ಆಡಳಿತದಿಂದ ಮುಕ್ತಗೊಂಡ ದಿನವಾದ ಗಣರಾಜ್ಯೋತ್ಸವದ ದಿನವೇ ಅಂಬೇಡ್ಕರ್ ಪ್ರತಿಮೆಗೆ ಹಾನಿಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p><p>‘ಎಎಪಿ ನೇತೃತ್ವದ ಪಂಜಾಬ್ ಸರ್ಕಾರವು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೊಳ್ಳುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>