<p><strong>ನವದೆಹಲಿ:</strong> ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ 2008ರ ನವೆಂಬರ್ 26ರಂದು (26/11) ನಡೆದಿದ್ದ ದಾಳಿ ಮಾದರಿಯಲ್ಲೇ ಈ ವರ್ಷವೂ ದಾಳಿ ನಡೆಸುತ್ತೇವೆ ಎಂದು ಲಷ್ಕರ್-ಎ-ತಯಬಾ (ಎಲ್ಇಟಿ) ಸಂಘಟನೆ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ಬೆದರಿಕೆ ಹಾಕಿದ್ದಾನೆ.</p><p>ಭಾರತದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಿರಂತವಾಗಿ ನಡೆಯುತ್ತಿದೆ. ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ಕುರಿತು ಉದ್ವಿಗ್ನತೆ ಹೆಚ್ಚಿರುವುದರ ನಡುವೆಯೇ ಎಲ್ಇಟಿಯಿಂದ ಬೆದರಿಕೆ ಬಂದಿದೆ.</p><p>ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಪ್ರತಿಯಾಗಿ ನಾವು ವಾಯುಮಾರ್ಗದ ಮೂಲಕ ಯಶಸ್ವಿಯಾಗಿ ದಾಳಿ ನಡೆಸಿದ್ದೇವೆ. 2008ರ ಮುಂಬೈ ದಾಳಿಯ ಭಯಾನಕತೆ ಇನ್ನೂ ಮಾಸಿಲ್ಲ. ಈ ವರ್ಷವೂ ಸಮುದ್ರ ಮಾರ್ಗ ಬಳಸಿಕೊಂಡು 26/11 ಮಾದರಿಯಲ್ಲೇ ಭಾರತದಲ್ಲಿ ಮತ್ತೊಂದು ದಾಳಿ ಮಾಡುತ್ತೇವೆ’ ಎಂದು ಕಸೂರಿ ಹೇಳಿಕೊಂಡಿದ್ದಾನೆ.</p><p>‘2025ರಲ್ಲಿ ಪಾಕಿಸ್ತಾನವು ವಾಯುಮಾರ್ಗದಲ್ಲಿ ಪ್ರಾಬಲ್ಯ ಸಾಧಿಸಿದೆ. 2026ರಲ್ಲಿ ಸಮುದ್ರ ಮಾರ್ಗದಲ್ಲೂ ಪ್ರಾಬಲ್ಯ ಸಾಧಿಸುತ್ತದೆ. ಭೂಮಿ, ಆಕಾಶ ಅಥವಾ ಸಮುದ್ರದಲ್ಲಿ ‘ಶತ್ರು’ವಿಗೆ (ಭಾರತಕ್ಕೆ) ಯಾವುದೇ ಸ್ಥಳ ಉಳಿಯುವುದಿಲ್ಲ. ‘ಅಲ್ಲಾ ಇಚ್ಛೆ’ಯಂತೆಯೇ ದಾಳಿ ನಡೆಸಲಾಗುತ್ತದೆ’ ಎಂದು ಕಸೂರಿ ಹೇಳಿದ್ದಾನೆ.</p><p>ಕಸೂರಿ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಭಾರತೀಯ ಗುಪ್ತಚರ ಸಂಸ್ಥೆಗಳು ಈ ವಿಡಿಯೊ ಪ್ರಚಾರ ಮತ್ತು ಅಪಾಯಕಾರಿ ಸಂಕೇತವೆಂದು ಪರಿಗಣಿಸಿವೆ. 2008ರ ಮುಂಬೈ ದಾಳಿಗೆ ಬಳಸಲಾದ ಸಮುದ್ರ ಮಾರ್ಗವನ್ನೇ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆಗಳು ಮತ್ತೆ ಬಳಸಲು ಪ್ರಯತ್ನಿಸುತ್ತಿವೆ ಎಂದು ಸಿಎನ್ಎನ್–ನ್ಯೂಸ್ 18 ವರದಿ ಮಾಡಿದೆ.</p><p>2008ರ ನವೆಂಬರ್ 26ರಂದು ಲಷ್ಕರ್–ಎ–ತಯಬಾ ಸಂಘಟನೆಯ ಹತ್ತು ಪಾಕಿಸ್ತಾನಿ ಉಗ್ರರು ಸಮುದ್ರದ ಮೂಲಕ ಕರಾಚಿಯಿಂದ ದೋಣಿಯಲ್ಲಿ ಬಂದು ಮುಂಬೈಗೆ ನುಸುಳಿದ್ದರು. ನಗರದ ಹೃದಯ ಭಾಗದಲ್ಲಿರುವ ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಲ್, ತಾಜ್ಮಹಲ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಯಹೂದಿ ಕೇಂದ್ರಗಳ ಮೇಲೆ ಈ ಉಗ್ರರು ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಬಲಿತೆಗೆದುಕೊಂಡಿದ್ದರು.</p><p>10 ದೇಶಗಳ 28 ವಿದೇಶಿಯರು ಸೇರಿದಂತೆ 166 ಮಂದಿ ಉಗ್ರರ ದಾಳಿಗೆ ಜೀವತೆತ್ತಿದ್ದರು. ಒಂಬತ್ತು ಉಗ್ರರನ್ನು ಕಮಾಂಡೊ ಪಡೆಗಳ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿತ್ತು. ಅಜ್ಮಲ್ ಕಸಾಬ್ ಮಾತ್ರ ಜೀವಂತವಾಗಿ ಸೆರೆ ಸಿಕ್ಕಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ 2008ರ ನವೆಂಬರ್ 26ರಂದು (26/11) ನಡೆದಿದ್ದ ದಾಳಿ ಮಾದರಿಯಲ್ಲೇ ಈ ವರ್ಷವೂ ದಾಳಿ ನಡೆಸುತ್ತೇವೆ ಎಂದು ಲಷ್ಕರ್-ಎ-ತಯಬಾ (ಎಲ್ಇಟಿ) ಸಂಘಟನೆ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ಬೆದರಿಕೆ ಹಾಕಿದ್ದಾನೆ.</p><p>ಭಾರತದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಿರಂತವಾಗಿ ನಡೆಯುತ್ತಿದೆ. ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ಕುರಿತು ಉದ್ವಿಗ್ನತೆ ಹೆಚ್ಚಿರುವುದರ ನಡುವೆಯೇ ಎಲ್ಇಟಿಯಿಂದ ಬೆದರಿಕೆ ಬಂದಿದೆ.</p><p>ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಪ್ರತಿಯಾಗಿ ನಾವು ವಾಯುಮಾರ್ಗದ ಮೂಲಕ ಯಶಸ್ವಿಯಾಗಿ ದಾಳಿ ನಡೆಸಿದ್ದೇವೆ. 2008ರ ಮುಂಬೈ ದಾಳಿಯ ಭಯಾನಕತೆ ಇನ್ನೂ ಮಾಸಿಲ್ಲ. ಈ ವರ್ಷವೂ ಸಮುದ್ರ ಮಾರ್ಗ ಬಳಸಿಕೊಂಡು 26/11 ಮಾದರಿಯಲ್ಲೇ ಭಾರತದಲ್ಲಿ ಮತ್ತೊಂದು ದಾಳಿ ಮಾಡುತ್ತೇವೆ’ ಎಂದು ಕಸೂರಿ ಹೇಳಿಕೊಂಡಿದ್ದಾನೆ.</p><p>‘2025ರಲ್ಲಿ ಪಾಕಿಸ್ತಾನವು ವಾಯುಮಾರ್ಗದಲ್ಲಿ ಪ್ರಾಬಲ್ಯ ಸಾಧಿಸಿದೆ. 2026ರಲ್ಲಿ ಸಮುದ್ರ ಮಾರ್ಗದಲ್ಲೂ ಪ್ರಾಬಲ್ಯ ಸಾಧಿಸುತ್ತದೆ. ಭೂಮಿ, ಆಕಾಶ ಅಥವಾ ಸಮುದ್ರದಲ್ಲಿ ‘ಶತ್ರು’ವಿಗೆ (ಭಾರತಕ್ಕೆ) ಯಾವುದೇ ಸ್ಥಳ ಉಳಿಯುವುದಿಲ್ಲ. ‘ಅಲ್ಲಾ ಇಚ್ಛೆ’ಯಂತೆಯೇ ದಾಳಿ ನಡೆಸಲಾಗುತ್ತದೆ’ ಎಂದು ಕಸೂರಿ ಹೇಳಿದ್ದಾನೆ.</p><p>ಕಸೂರಿ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಭಾರತೀಯ ಗುಪ್ತಚರ ಸಂಸ್ಥೆಗಳು ಈ ವಿಡಿಯೊ ಪ್ರಚಾರ ಮತ್ತು ಅಪಾಯಕಾರಿ ಸಂಕೇತವೆಂದು ಪರಿಗಣಿಸಿವೆ. 2008ರ ಮುಂಬೈ ದಾಳಿಗೆ ಬಳಸಲಾದ ಸಮುದ್ರ ಮಾರ್ಗವನ್ನೇ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆಗಳು ಮತ್ತೆ ಬಳಸಲು ಪ್ರಯತ್ನಿಸುತ್ತಿವೆ ಎಂದು ಸಿಎನ್ಎನ್–ನ್ಯೂಸ್ 18 ವರದಿ ಮಾಡಿದೆ.</p><p>2008ರ ನವೆಂಬರ್ 26ರಂದು ಲಷ್ಕರ್–ಎ–ತಯಬಾ ಸಂಘಟನೆಯ ಹತ್ತು ಪಾಕಿಸ್ತಾನಿ ಉಗ್ರರು ಸಮುದ್ರದ ಮೂಲಕ ಕರಾಚಿಯಿಂದ ದೋಣಿಯಲ್ಲಿ ಬಂದು ಮುಂಬೈಗೆ ನುಸುಳಿದ್ದರು. ನಗರದ ಹೃದಯ ಭಾಗದಲ್ಲಿರುವ ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಲ್, ತಾಜ್ಮಹಲ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಯಹೂದಿ ಕೇಂದ್ರಗಳ ಮೇಲೆ ಈ ಉಗ್ರರು ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಬಲಿತೆಗೆದುಕೊಂಡಿದ್ದರು.</p><p>10 ದೇಶಗಳ 28 ವಿದೇಶಿಯರು ಸೇರಿದಂತೆ 166 ಮಂದಿ ಉಗ್ರರ ದಾಳಿಗೆ ಜೀವತೆತ್ತಿದ್ದರು. ಒಂಬತ್ತು ಉಗ್ರರನ್ನು ಕಮಾಂಡೊ ಪಡೆಗಳ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿತ್ತು. ಅಜ್ಮಲ್ ಕಸಾಬ್ ಮಾತ್ರ ಜೀವಂತವಾಗಿ ಸೆರೆ ಸಿಕ್ಕಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>