ಬಿಹಾರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್, ಘಟನೆಯನ್ನು ತೀವ್ರವಾಗಿ ಖಂಡಿಸಿ ಹೇಳಿಕೆ ಬಿಡುಗಡೆ ಮಾಡಿದೆ. ‘ಯುವಕನು ಕಲ್ಲು ತೂರಾಟದಲ್ಲೋ ಅಥವಾ ಇನ್ಯಾವುದೋ ದೈಹಿಕ ಹಿಂಸೆಯಲ್ಲಿ ಭಾಗವಹಿಸಿದ್ದರೆ ಈ ರೀತಿ ಮಾಡುವುದನ್ನು ಸಹಿಸಿಕೊಳ್ಳಬಹುದಿತ್ತು. ತ್ರಿವರ್ಣಧ್ವಜ ಹಿಡಿದ ಯುವಕನನ್ನು ಹೊಡೆದಿರುವುದನ್ನು ಒಪ್ಪುವುದಕ್ಕೆ
ಸಾಧ್ಯವಿಲ್ಲ. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಕೆ. ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’
ಎಂದು ಪಕ್ಷದ ವಕ್ತಾರ ಅಸಿತ್ನಾಥ ತಿವಾರಿ ಹೇಳಿದ್ದಾರೆ.