<p><strong>ಲಾತೂರ್</strong>: ರಾತ್ರಿ ಸಮಯದಲ್ಲಿ ಓದುವ ವಿದ್ಯಾರ್ಥಿಗಳ ಬೇಸರ ನಿವಾರಿಸಿ, ಶಕ್ತಿ ತುಂಬಲು ಹಾಗೂ ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡುವಂತೆ ಮಾಡಲು ಮಹಾರಾಷ್ಟ್ರದ ಲಾತೂರ್ನ ಸರ್ಕಾರಿ ಅನುದಾನಿತ ದಯಾನಂದ ಕಾಲೇಜಿನಲ್ಲಿ ಚಹಾ ಮತ್ತು ಕಾಫಿಯನ್ನು ನೀಡಲಾಗುತ್ತಿದೆ.</p><p>‘12 ನೇ ತರಗತಿಯ ವಿದ್ಯಾರ್ಥಿಗಳು ಮುಂಬರುವ ಬೋರ್ಡ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಓದುವ ಕೊಠಡಿಯಲ್ಲಿ ಹಲವು ತಾಸುಗಳ ಕಾಲ ಅಧ್ಯಯನಕ್ಕೆ ಕುಳಿತುಕೊಳ್ಳುತ್ತಾರೆ. ರಾತ್ರಿ ಸಮಯದಲ್ಲಿ ಕುಳಿತು ಓದಲು ಇರುವ ಸವಾಲುಗಳನ್ನು ಗುರುತಿಸಿ, ಅವರನ್ನು ಪ್ರೇರೇಪಿಸುವ ಉದ್ದೇಶದಿಂದ ಈ ಉಪಕ್ರಮ ಜಾರಿಗೆ ತರಲಾಗಿದೆ. ಚಹಾ ಅಥವಾ ಕಾಫಿ ಕುಡಿಯವ ಅವಧಿಯಲ್ಲಿ ವಿದ್ಯಾರ್ಥಿಗಳು ವಿರಾಮವನ್ನೂ ಪಡೆಯುತ್ತಾರೆ. ಇದರಿಂದ ಹೊಸ ಹುರುಪು ಅವರಲ್ಲಿ ಮೂಡಿ ಕಲಿಕೆ ಇನ್ನಷ್ಟು ಉತ್ತಮವಾಗಲಿದೆ’ ಎಂದು ಕಾಲೇಜಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳನ್ನು ಹುರಿದುಂಬಿಸಲು ಕೈಗೊಂಡ ಕ್ರಮವಾಗಿದೆ. ಈ ಸಣ್ಣ ಉಪಾಯವು, ಓದುವ ಸಮಯದಲ್ಲಿ ವಿದ್ಯಾರ್ಥಿಗಳ ಬೇಸರವನ್ನು ದೂರಮಾಡಲಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶಿವಾಜಿ ಗಾಯಕ್ವಾಡ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾತೂರ್</strong>: ರಾತ್ರಿ ಸಮಯದಲ್ಲಿ ಓದುವ ವಿದ್ಯಾರ್ಥಿಗಳ ಬೇಸರ ನಿವಾರಿಸಿ, ಶಕ್ತಿ ತುಂಬಲು ಹಾಗೂ ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡುವಂತೆ ಮಾಡಲು ಮಹಾರಾಷ್ಟ್ರದ ಲಾತೂರ್ನ ಸರ್ಕಾರಿ ಅನುದಾನಿತ ದಯಾನಂದ ಕಾಲೇಜಿನಲ್ಲಿ ಚಹಾ ಮತ್ತು ಕಾಫಿಯನ್ನು ನೀಡಲಾಗುತ್ತಿದೆ.</p><p>‘12 ನೇ ತರಗತಿಯ ವಿದ್ಯಾರ್ಥಿಗಳು ಮುಂಬರುವ ಬೋರ್ಡ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಓದುವ ಕೊಠಡಿಯಲ್ಲಿ ಹಲವು ತಾಸುಗಳ ಕಾಲ ಅಧ್ಯಯನಕ್ಕೆ ಕುಳಿತುಕೊಳ್ಳುತ್ತಾರೆ. ರಾತ್ರಿ ಸಮಯದಲ್ಲಿ ಕುಳಿತು ಓದಲು ಇರುವ ಸವಾಲುಗಳನ್ನು ಗುರುತಿಸಿ, ಅವರನ್ನು ಪ್ರೇರೇಪಿಸುವ ಉದ್ದೇಶದಿಂದ ಈ ಉಪಕ್ರಮ ಜಾರಿಗೆ ತರಲಾಗಿದೆ. ಚಹಾ ಅಥವಾ ಕಾಫಿ ಕುಡಿಯವ ಅವಧಿಯಲ್ಲಿ ವಿದ್ಯಾರ್ಥಿಗಳು ವಿರಾಮವನ್ನೂ ಪಡೆಯುತ್ತಾರೆ. ಇದರಿಂದ ಹೊಸ ಹುರುಪು ಅವರಲ್ಲಿ ಮೂಡಿ ಕಲಿಕೆ ಇನ್ನಷ್ಟು ಉತ್ತಮವಾಗಲಿದೆ’ ಎಂದು ಕಾಲೇಜಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳನ್ನು ಹುರಿದುಂಬಿಸಲು ಕೈಗೊಂಡ ಕ್ರಮವಾಗಿದೆ. ಈ ಸಣ್ಣ ಉಪಾಯವು, ಓದುವ ಸಮಯದಲ್ಲಿ ವಿದ್ಯಾರ್ಥಿಗಳ ಬೇಸರವನ್ನು ದೂರಮಾಡಲಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶಿವಾಜಿ ಗಾಯಕ್ವಾಡ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>