<p><strong>ಲಾತೂರ್:</strong> ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ₹4,000 ಕಳ್ಳತನ ಪ್ರಕರಣದ ಆರೋಪಿಯನ್ನು ಬರೋಬ್ಬರಿ ಎರಡು ದಶಕಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. </p><p>ಸುಮಾರು 20 ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣ ಇದಾಗಿದೆ. ಆರೋಪಿ ಬಾಬು ಲಕ್ಷ್ಮಣ್ ಸಂಕೋಲೆ (41) ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಕಬ್ಬು ಕಟಾವು ಕೆಲಸ ಮಾಡುತ್ತಿದ್ದ ಈತನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶ ಕಂಡಿದ್ದಾರೆ. </p><p>ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜನವರಿ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. </p>.ಬೆಂಗಳೂರು | ರೌಡಿಶೀಟರ್ ಹತ್ಯೆ: ಎಂಟು ಮಂದಿ ಬಂಧನ.ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಭೂ ಮಂಜೂರಾತಿ: SDA ವಿಜಯಕುಮಾರ್ ಬಂಧನ. <p>ಬುಧೋಡಾ ಗ್ರಾಮದ ಆರೋಪಿ ತಲೆಮರೆಸಿಕೊಳ್ಳುತ್ತಲೇ ಇದ್ದ. ಇದರಿಂದಾಗಿ ಪೊಲೀಸರಿಗೆ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಲಾತೂರ್ ಪೊಲೀಸರ ವಿಶೇಷ ತಂಡವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಯಿತು. </p><p>2006ರ ಜುಲೈ 10ರಂದು ಅಂದಾಜು ₹4,000 ಬೆಲೆ ಬಾಳುವ ಕಾರು ಸ್ಟೀರಿಯೊವನ್ನು ಕದ್ದಿರುವ ಬಗ್ಗೆ ಅರವಿಂದ್ ವಿಠಲರಾವ್ ಭೋಸಲೆ ದೂರು ದಾಖಲಿಸಿದ್ದರು. 2006ರ ಜುಲೈ 14ರಂದು ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಳಿಕ ವಿಚಾರಣೆಗೆ ಗೈರಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾತೂರ್:</strong> ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ₹4,000 ಕಳ್ಳತನ ಪ್ರಕರಣದ ಆರೋಪಿಯನ್ನು ಬರೋಬ್ಬರಿ ಎರಡು ದಶಕಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. </p><p>ಸುಮಾರು 20 ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣ ಇದಾಗಿದೆ. ಆರೋಪಿ ಬಾಬು ಲಕ್ಷ್ಮಣ್ ಸಂಕೋಲೆ (41) ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಕಬ್ಬು ಕಟಾವು ಕೆಲಸ ಮಾಡುತ್ತಿದ್ದ ಈತನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶ ಕಂಡಿದ್ದಾರೆ. </p><p>ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜನವರಿ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. </p>.ಬೆಂಗಳೂರು | ರೌಡಿಶೀಟರ್ ಹತ್ಯೆ: ಎಂಟು ಮಂದಿ ಬಂಧನ.ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಭೂ ಮಂಜೂರಾತಿ: SDA ವಿಜಯಕುಮಾರ್ ಬಂಧನ. <p>ಬುಧೋಡಾ ಗ್ರಾಮದ ಆರೋಪಿ ತಲೆಮರೆಸಿಕೊಳ್ಳುತ್ತಲೇ ಇದ್ದ. ಇದರಿಂದಾಗಿ ಪೊಲೀಸರಿಗೆ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಲಾತೂರ್ ಪೊಲೀಸರ ವಿಶೇಷ ತಂಡವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಯಿತು. </p><p>2006ರ ಜುಲೈ 10ರಂದು ಅಂದಾಜು ₹4,000 ಬೆಲೆ ಬಾಳುವ ಕಾರು ಸ್ಟೀರಿಯೊವನ್ನು ಕದ್ದಿರುವ ಬಗ್ಗೆ ಅರವಿಂದ್ ವಿಠಲರಾವ್ ಭೋಸಲೆ ದೂರು ದಾಖಲಿಸಿದ್ದರು. 2006ರ ಜುಲೈ 14ರಂದು ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಳಿಕ ವಿಚಾರಣೆಗೆ ಗೈರಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>