<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಭಾನುವಾರ) ವಾಗ್ದಾಳಿ ನಡೆಸಿದ್ದಾರೆ. </p><p>ಒಂದು ವೇಳೆ ದೆಹಲಿ ಪೊಲೀಸ್ ಮೇಲೆ ನಮ್ಮ ಸರ್ಕಾರದ ನಿಯಂತ್ರಣ ಇರುತ್ತಿದ್ದರೆ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ. </p><p>ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರೋಲ್ ಭಾಗ್ನಲ್ಲಿ ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಜನರಿಗೆ ಸುರಕ್ಷತೆ ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಆಂದೋಲನ ಪ್ರಾರಂಭಿಸುವುದಾಗಿ ತಿಳಿಸಿದರು. </p><p>'ದೆಹಲಿ ಪೊಲೀಸ್ ನಮ್ಮ ನಿಯಂತ್ರಣದಲ್ಲಿಲ್ಲ. ಇಲ್ಲವಾದ್ದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಇಷ್ಟೊಂದು ಹದಗೆಡುತ್ತಿರಲಿಲ್ಲ. ಶಾಲೆ, ಆಸ್ಪತ್ರೆ, ನೀರು ಹಾಗೂ ವಿದ್ಯುತ್ ಸಮಸ್ಯೆ ಬಗೆಹರಿಸಿದಂತೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಬಗೆಹರಿಸುತ್ತಿದ್ದೆ' ಎಂದು ಅವರು ಹೇಳಿದ್ದಾರೆ. </p><p>ನಗರದ ಪ್ರತಿಯೊಬ್ಬ ಮಹಿಳೆಗೆ ₹1000 ಗೌರವಧನ ನೀಡುವ ಯೋಜನೆಯನ್ನು ಎಎಪಿ ಶೀಘ್ರವೇ ಆರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದರು. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆ ಫೆಬ್ರುವರಿಯಲ್ಲಿ ನಡೆಯುವ ಸಾಧ್ಯತೆಯಿದೆ. </p>.ಕಾನೂನು ಸುವ್ಯವಸ್ಥೆ ಬಗ್ಗೆ ರಾಜಕೀಯ ಬೇಡ: ಅರವಿಂದ ಕೇಜ್ರಿವಾಲ್ ಕಿಡಿ.VIDEO: ಸಂವಿಧಾನದ ಪ್ರತಿ ಹಿಡಿದು ರಾಹುಲ್, ಪ್ರಿಯಾಂಕಾ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಭಾನುವಾರ) ವಾಗ್ದಾಳಿ ನಡೆಸಿದ್ದಾರೆ. </p><p>ಒಂದು ವೇಳೆ ದೆಹಲಿ ಪೊಲೀಸ್ ಮೇಲೆ ನಮ್ಮ ಸರ್ಕಾರದ ನಿಯಂತ್ರಣ ಇರುತ್ತಿದ್ದರೆ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ. </p><p>ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರೋಲ್ ಭಾಗ್ನಲ್ಲಿ ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಜನರಿಗೆ ಸುರಕ್ಷತೆ ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಆಂದೋಲನ ಪ್ರಾರಂಭಿಸುವುದಾಗಿ ತಿಳಿಸಿದರು. </p><p>'ದೆಹಲಿ ಪೊಲೀಸ್ ನಮ್ಮ ನಿಯಂತ್ರಣದಲ್ಲಿಲ್ಲ. ಇಲ್ಲವಾದ್ದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಇಷ್ಟೊಂದು ಹದಗೆಡುತ್ತಿರಲಿಲ್ಲ. ಶಾಲೆ, ಆಸ್ಪತ್ರೆ, ನೀರು ಹಾಗೂ ವಿದ್ಯುತ್ ಸಮಸ್ಯೆ ಬಗೆಹರಿಸಿದಂತೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಬಗೆಹರಿಸುತ್ತಿದ್ದೆ' ಎಂದು ಅವರು ಹೇಳಿದ್ದಾರೆ. </p><p>ನಗರದ ಪ್ರತಿಯೊಬ್ಬ ಮಹಿಳೆಗೆ ₹1000 ಗೌರವಧನ ನೀಡುವ ಯೋಜನೆಯನ್ನು ಎಎಪಿ ಶೀಘ್ರವೇ ಆರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದರು. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆ ಫೆಬ್ರುವರಿಯಲ್ಲಿ ನಡೆಯುವ ಸಾಧ್ಯತೆಯಿದೆ. </p>.ಕಾನೂನು ಸುವ್ಯವಸ್ಥೆ ಬಗ್ಗೆ ರಾಜಕೀಯ ಬೇಡ: ಅರವಿಂದ ಕೇಜ್ರಿವಾಲ್ ಕಿಡಿ.VIDEO: ಸಂವಿಧಾನದ ಪ್ರತಿ ಹಿಡಿದು ರಾಹುಲ್, ಪ್ರಿಯಾಂಕಾ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>