<p><strong>ನವದೆಹಲಿ:</strong> ಪಂಜಾಬ್ನಲ್ಲಿ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವನ್ನು ಇನ್ನೂ ಕೊಟ್ಟಿಲ್ಲ ಎಂಬ ವರದಿಯನ್ನು ಉಲ್ಲೇಖಿಸಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಟೀಕಿಸಿದ್ದಾರೆ.</p>.<p>ಭಗವಂತ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಹಣಕಾಸು ಕೊರತೆಯನ್ನು ಎದುರಿಸುತ್ತಿದೆ. ಹಾಗಾಗಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿದೆ ಎಂದು ಮೂಲಗಳನ್ನು ಆಧರಿಸಿ ಪ್ರಕಟಿಸಲಾದ ವರದಿಗಳು ಆರೋಪಿಸಿವೆ.</p>.<p>ಭಾರತವನ್ನು ವಿಶ್ವದ ನಂ.1 ರಾಷ್ಟ್ರ ಮಾಡಲು ಕೇಜ್ರಿವಾಲ್ ಬಯಸುತ್ತಾರೆ. ಆದರೆ ಪಂಜಾಬ್ನಲ್ಲಿ ಒಂದು ವರ್ಷ ಅವಧಿಯಲ್ಲಿ ಅವರು ಮಾಡಿದ್ದೇನು? ಎಂದು ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.</p>.<p>ಎಎಪಿಯೇ ಅಧಿಕಾರದಲ್ಲಿರುವ ದೆಹಲಿಯಲ್ಲಿಯೂ ದೊಡ್ಡ ಮೊತ್ತದ ತೆರಿಗೆ ಹಣವನ್ನು ದುಂದುವೆಚ್ಚದ ಮೂಲಕ ವ್ಯರ್ಥ ಮಾಡಲಾಗಿದೆ ಎಂದು ರಿಜಿಜು ಆರೋಪಿಸಿದ್ದಾರೆ.</p>.<p>'ದೆಹಲಿ ರಾಷ್ಟ್ರದ ರಾಜಧಾನಿ ಮತ್ತು ದೆಹಲಿಯ ಸರಾಸರಿ ತಲಾ ಆದಾಯವು ರಾಷ್ಟ್ರದ ತಲಾ ಆದಾಯಕ್ಕಿಂತ ಮೂರು ಪಟ್ಟು ಹೆಚ್ಚಿರುತ್ತದೆ. ಅತಿ ದೊಡ್ಡ ಮೊತ್ತದ ತೆರಿಗೆ ಹಣವನ್ನು ದುಂದುವೆಚ್ಚದ ಮೂಲಕ ನಷ್ಟ ಮಾಡಿದ್ದಾರೆ' ಎಂದು ಕೇಜ್ರಿವಾಲ್ ವಿರುದ್ಧ ಟ್ವೀಟ್ ಮೂಲಕ ರಿಜಿಜು ಕಿಡಿಕಾರಿದ್ದಾರೆ.</p>.<p><a href="https://www.prajavani.net/district/bengaluru-city/mp-tejasvi-surya-inviting-people-to-eat-benne-dosa-in-between-bengaluru-flood-video-969649.html" itemprop="url">ಬೆಂಗಳೂರು ಪ್ರವಾಹ: ಟೆಂಪ್ಟ್ ಆಗಿ ದೋಸೆ ತಿನ್ನಲು ಹೋದ ತೇಜಸ್ವಿ ಸೂರ್ಯಗೆ ತರಾಟೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಂಜಾಬ್ನಲ್ಲಿ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವನ್ನು ಇನ್ನೂ ಕೊಟ್ಟಿಲ್ಲ ಎಂಬ ವರದಿಯನ್ನು ಉಲ್ಲೇಖಿಸಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಟೀಕಿಸಿದ್ದಾರೆ.</p>.<p>ಭಗವಂತ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಹಣಕಾಸು ಕೊರತೆಯನ್ನು ಎದುರಿಸುತ್ತಿದೆ. ಹಾಗಾಗಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿದೆ ಎಂದು ಮೂಲಗಳನ್ನು ಆಧರಿಸಿ ಪ್ರಕಟಿಸಲಾದ ವರದಿಗಳು ಆರೋಪಿಸಿವೆ.</p>.<p>ಭಾರತವನ್ನು ವಿಶ್ವದ ನಂ.1 ರಾಷ್ಟ್ರ ಮಾಡಲು ಕೇಜ್ರಿವಾಲ್ ಬಯಸುತ್ತಾರೆ. ಆದರೆ ಪಂಜಾಬ್ನಲ್ಲಿ ಒಂದು ವರ್ಷ ಅವಧಿಯಲ್ಲಿ ಅವರು ಮಾಡಿದ್ದೇನು? ಎಂದು ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.</p>.<p>ಎಎಪಿಯೇ ಅಧಿಕಾರದಲ್ಲಿರುವ ದೆಹಲಿಯಲ್ಲಿಯೂ ದೊಡ್ಡ ಮೊತ್ತದ ತೆರಿಗೆ ಹಣವನ್ನು ದುಂದುವೆಚ್ಚದ ಮೂಲಕ ವ್ಯರ್ಥ ಮಾಡಲಾಗಿದೆ ಎಂದು ರಿಜಿಜು ಆರೋಪಿಸಿದ್ದಾರೆ.</p>.<p>'ದೆಹಲಿ ರಾಷ್ಟ್ರದ ರಾಜಧಾನಿ ಮತ್ತು ದೆಹಲಿಯ ಸರಾಸರಿ ತಲಾ ಆದಾಯವು ರಾಷ್ಟ್ರದ ತಲಾ ಆದಾಯಕ್ಕಿಂತ ಮೂರು ಪಟ್ಟು ಹೆಚ್ಚಿರುತ್ತದೆ. ಅತಿ ದೊಡ್ಡ ಮೊತ್ತದ ತೆರಿಗೆ ಹಣವನ್ನು ದುಂದುವೆಚ್ಚದ ಮೂಲಕ ನಷ್ಟ ಮಾಡಿದ್ದಾರೆ' ಎಂದು ಕೇಜ್ರಿವಾಲ್ ವಿರುದ್ಧ ಟ್ವೀಟ್ ಮೂಲಕ ರಿಜಿಜು ಕಿಡಿಕಾರಿದ್ದಾರೆ.</p>.<p><a href="https://www.prajavani.net/district/bengaluru-city/mp-tejasvi-surya-inviting-people-to-eat-benne-dosa-in-between-bengaluru-flood-video-969649.html" itemprop="url">ಬೆಂಗಳೂರು ಪ್ರವಾಹ: ಟೆಂಪ್ಟ್ ಆಗಿ ದೋಸೆ ತಿನ್ನಲು ಹೋದ ತೇಜಸ್ವಿ ಸೂರ್ಯಗೆ ತರಾಟೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>