<p><strong>ಕೋಲ್ಕತ್ತ</strong>: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ಶುಕ್ರವಾರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಮೂರು ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದೆ.</p><p>ಎನ್ಸಿಡಬ್ಲ್ಯೂ ಅಧ್ಯಕ್ಷೆ ವಿಜಯಾ ರಹತ್ಕರ್ ಕೋಲ್ಕತ್ತ ಪೊಲೀಸ್ ಆಯುಕ್ತ ಮನೋಜ್ ವರ್ಮಾ ಅವರಿಗೆ ಇಂದು (ಶುಕ್ರವಾರ) ಪತ್ರ ಬರೆದಿದ್ದು, ತಕ್ಷಣ ಮತ್ತು ತ್ವರಿತವಾಗಿ ತನಿಖೆ ನಡೆಸುವಂತೆ ನಿರ್ದೇಶಿಸಿದ್ದಾರೆ.</p>.ಮಳೆಗಾಲದ ಆರಂಭದಲ್ಲೇ ಭರ್ತಿಯಾದ ಕೆಆರ್ಎಸ್: ಜೂನ್ 30ರಂದು ಬಾಗಿನ.ಜಗನ್ ವಿರುದ್ಧ ಪೊಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಆಂಧ್ರ ಹೈಕೋರ್ಟ್ ನಿರ್ಬಂಧ. <p>ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆಯೇ?, ಸಂತ್ರಸ್ತೆಗೆ ಸಂಪೂರ್ಣ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆಯೇ?, ಆಕೆಗೆ ಮಾನಸಿಕ ಮತ್ತು ಕಾನೂನು ನೆರವು ನೀಡಲಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳುವಂತೆ ವರ್ಮಾಗೆ ರಹತ್ಕರ್ ನಿರ್ದೇಶನ ನೀಡಿದ್ದಾರೆ .</p><p>ಬಿಎನ್ಎಸ್ಎಸ್ ಸೆಕ್ಷನ್ 396ರ ಅಡಿಯಲ್ಲಿ ಸಂತ್ರಸ್ತರಿಗೆ ಸರಿಯಾದ ಮತ್ತು ತ್ವರಿತ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋಲ್ಕತ್ತ ಪೊಲೀಸ್ ಕಮಿಷನರ್ ವರ್ಮಾಗೆ ರಹತ್ಕರ್ ಸೂಚಿಸಿದ್ದಾರೆ.</p><p>ಜೂನ್ 25 ರಂದು ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ.</p>.ಹುಲಿಗಳ ಸಾವು: ದುಷ್ಕರ್ಮಿಗಳನ್ನು ಬಂಧಿಸಿ; ಸರ್ಕಾರವನ್ನು ಒತ್ತಾಯಿಸಿದ ಬಿವೈವಿ.ಹಿಂದಿ, ತ್ರಿಭಾಷಾ ಸೂತ್ರ ಹೇರಿಕೆ: ಉದ್ಧವ್, ರಾಜ್ ಠಾಕ್ರೆ ಜಂಟಿ ಪ್ರತಿಭಟನೆ.JSK ಚಿತ್ರಕ್ಕೆ CBFC ತಡೆ ವಿರೋಧಿಸಿ ಕೇರಳ ಚಿತ್ರರಂಗದ ಗಣ್ಯರಿಂದ ಪ್ರತಿಭಟನೆ.PV Cine Sammana-3: ಕೃಷ್ಣಂ ಪ್ರಣಯ ಸಖಿ ಅತ್ಯುತ್ತಮ ಚಿತ್ರ; ದುನಿಯಾ ವಿಜಯ್, ಅಂಕಿತಾಗೆ ಪ್ರಶಸ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ಶುಕ್ರವಾರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಮೂರು ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದೆ.</p><p>ಎನ್ಸಿಡಬ್ಲ್ಯೂ ಅಧ್ಯಕ್ಷೆ ವಿಜಯಾ ರಹತ್ಕರ್ ಕೋಲ್ಕತ್ತ ಪೊಲೀಸ್ ಆಯುಕ್ತ ಮನೋಜ್ ವರ್ಮಾ ಅವರಿಗೆ ಇಂದು (ಶುಕ್ರವಾರ) ಪತ್ರ ಬರೆದಿದ್ದು, ತಕ್ಷಣ ಮತ್ತು ತ್ವರಿತವಾಗಿ ತನಿಖೆ ನಡೆಸುವಂತೆ ನಿರ್ದೇಶಿಸಿದ್ದಾರೆ.</p>.ಮಳೆಗಾಲದ ಆರಂಭದಲ್ಲೇ ಭರ್ತಿಯಾದ ಕೆಆರ್ಎಸ್: ಜೂನ್ 30ರಂದು ಬಾಗಿನ.ಜಗನ್ ವಿರುದ್ಧ ಪೊಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಆಂಧ್ರ ಹೈಕೋರ್ಟ್ ನಿರ್ಬಂಧ. <p>ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆಯೇ?, ಸಂತ್ರಸ್ತೆಗೆ ಸಂಪೂರ್ಣ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆಯೇ?, ಆಕೆಗೆ ಮಾನಸಿಕ ಮತ್ತು ಕಾನೂನು ನೆರವು ನೀಡಲಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳುವಂತೆ ವರ್ಮಾಗೆ ರಹತ್ಕರ್ ನಿರ್ದೇಶನ ನೀಡಿದ್ದಾರೆ .</p><p>ಬಿಎನ್ಎಸ್ಎಸ್ ಸೆಕ್ಷನ್ 396ರ ಅಡಿಯಲ್ಲಿ ಸಂತ್ರಸ್ತರಿಗೆ ಸರಿಯಾದ ಮತ್ತು ತ್ವರಿತ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋಲ್ಕತ್ತ ಪೊಲೀಸ್ ಕಮಿಷನರ್ ವರ್ಮಾಗೆ ರಹತ್ಕರ್ ಸೂಚಿಸಿದ್ದಾರೆ.</p><p>ಜೂನ್ 25 ರಂದು ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ.</p>.ಹುಲಿಗಳ ಸಾವು: ದುಷ್ಕರ್ಮಿಗಳನ್ನು ಬಂಧಿಸಿ; ಸರ್ಕಾರವನ್ನು ಒತ್ತಾಯಿಸಿದ ಬಿವೈವಿ.ಹಿಂದಿ, ತ್ರಿಭಾಷಾ ಸೂತ್ರ ಹೇರಿಕೆ: ಉದ್ಧವ್, ರಾಜ್ ಠಾಕ್ರೆ ಜಂಟಿ ಪ್ರತಿಭಟನೆ.JSK ಚಿತ್ರಕ್ಕೆ CBFC ತಡೆ ವಿರೋಧಿಸಿ ಕೇರಳ ಚಿತ್ರರಂಗದ ಗಣ್ಯರಿಂದ ಪ್ರತಿಭಟನೆ.PV Cine Sammana-3: ಕೃಷ್ಣಂ ಪ್ರಣಯ ಸಖಿ ಅತ್ಯುತ್ತಮ ಚಿತ್ರ; ದುನಿಯಾ ವಿಜಯ್, ಅಂಕಿತಾಗೆ ಪ್ರಶಸ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>