<p><strong>ಸಿಂಗಪುರ</strong>: ಸಿಂಗಪುರದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವುದು ಅಪರಾಧ. ಸಡಗರದಿಂದ ಬೆಳಕಿನ ಹಬ್ಬವಾದ ದೀಪಾವಳಿ ಆಚರಿಸಿ ತ್ಯಾಜ್ಯ ಸುರಿದ ಭಾರತೀಯರು ಈಗ ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಬಹು ಜನಾಂಗೀಯ ನೆಲೆಯಾದ ಸಿಂಗಪುರದ ಮೌಂಟ್ ಬ್ಯಾಟನ್ ಪ್ರದೇಶದಲ್ಲಿ ನೆಲೆಸಿರುವ ಭಾರತೀಯರು ಭಾನುವಾರ ಹಬ್ಬ ಆಚರಿಸಿದ್ದರು. ಬಳಿಕ ಕಸ ವಿಲೇವಾರಿ ಮಾಡಿಲ್ಲ. ಹಾಗಾಗಿ, ಈ ಪ್ರದೇಶದ ನಿವಾಸಿಗಳ ಸಂಘವು, ತ್ವರಿತವಾಗಿ ಕಸ ವಿಲೇವಾರಿ ಮಾಡುವಂತೆ ಬ್ಯಾನರ್ ಅಳವಡಿಸಿದೆ. ಈ ವಿವಾದ ಬಗೆಹರಿಸಲು ಮೌಂಟ್ಬ್ಯಾಟನ್ ಕ್ಷೇತ್ರದ ಸಂಸದ ಲಿಮ್ ಬಯೋ ಚುವಾನ್ ಮಧ್ಯಪ್ರವೇಶಿಸಿದ್ದಾರೆ.</p>.<p>‘ರಾಷ್ಟ್ರೀಯ ಪರಿಸರ ಏಜೆನ್ಸಿಯ (ಎನ್ಇಎ) ಬೆಂಬಲದೊಂದಿಗೆ ನಿವಾಸಿಗಳ ಸಂಘವು ಈ ಬ್ಯಾನರ್ ಅಳವಡಿಸಿದೆ. ತಪ್ಪು ತಿಳಿವಳಿಕೆ ಮೂಡದಂತೆ ಈ ಕ್ರಮವಹಿಸಲಾಗಿದೆ. ದೀಪಾವಳಿ ಆಚರಣೆ ನಂತರ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ ಎಂಬ ದೂರುಗಳ ಅನ್ವಯ ಈ ಕ್ರಮಕ್ಕೆ ಮುಂದಾಗಿದೆ’ ಎಂದು ಸಂಸದ ಚುವಾನ್ ಹೇಳಿದ್ದಾರೆ.</p>.<p>‘ನನ್ನ ಕ್ಷೇತ್ರದ ಹಲವೆಡೆ ಹಬ್ಬಕ್ಕೆ ಶುಭಾಶಯ ಕೋರುವ ಬ್ಯಾನರ್ ಅಳವಡಿಸಲಾಗಿದೆ. ಕಸ ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಒಂದು ಪ್ರದೇಶದಲ್ಲಷ್ಟೇ ಬ್ಯಾನರ್ ಅಳವಡಿಸಲಾಗಿದೆ. ಇದರ ಹಿಂದೆ ಯಾವುದೇ ಒಂದು ಜನಾಂಗವನ್ನು ಗುರಿಯಾಗಿಟ್ಟುಕೊಂಡಿಲ್ಲ’ ಎಂದು ಹೇಳಿದ್ದಾರೆ.</p>.<p>‘ನಿವಾಸಿಗಳ ಸಂಘದ ಸದಸ್ಯರು ಚರ್ಚಿಸಿದ ಬಳಿಕ ಎಲ್ಲೆಂದರಲ್ಲಿ ಕಸ ಸುರಿಯದಂತೆ ನೆನಪಿಸಲು ಈ ಬ್ಯಾನರ್ ಅಳವಡಿಸಿದ್ದಾರೆ’ ಎಂದು ಅವರು ಸಮಜಾಯಿಷಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗಪುರ</strong>: ಸಿಂಗಪುರದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವುದು ಅಪರಾಧ. ಸಡಗರದಿಂದ ಬೆಳಕಿನ ಹಬ್ಬವಾದ ದೀಪಾವಳಿ ಆಚರಿಸಿ ತ್ಯಾಜ್ಯ ಸುರಿದ ಭಾರತೀಯರು ಈಗ ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಬಹು ಜನಾಂಗೀಯ ನೆಲೆಯಾದ ಸಿಂಗಪುರದ ಮೌಂಟ್ ಬ್ಯಾಟನ್ ಪ್ರದೇಶದಲ್ಲಿ ನೆಲೆಸಿರುವ ಭಾರತೀಯರು ಭಾನುವಾರ ಹಬ್ಬ ಆಚರಿಸಿದ್ದರು. ಬಳಿಕ ಕಸ ವಿಲೇವಾರಿ ಮಾಡಿಲ್ಲ. ಹಾಗಾಗಿ, ಈ ಪ್ರದೇಶದ ನಿವಾಸಿಗಳ ಸಂಘವು, ತ್ವರಿತವಾಗಿ ಕಸ ವಿಲೇವಾರಿ ಮಾಡುವಂತೆ ಬ್ಯಾನರ್ ಅಳವಡಿಸಿದೆ. ಈ ವಿವಾದ ಬಗೆಹರಿಸಲು ಮೌಂಟ್ಬ್ಯಾಟನ್ ಕ್ಷೇತ್ರದ ಸಂಸದ ಲಿಮ್ ಬಯೋ ಚುವಾನ್ ಮಧ್ಯಪ್ರವೇಶಿಸಿದ್ದಾರೆ.</p>.<p>‘ರಾಷ್ಟ್ರೀಯ ಪರಿಸರ ಏಜೆನ್ಸಿಯ (ಎನ್ಇಎ) ಬೆಂಬಲದೊಂದಿಗೆ ನಿವಾಸಿಗಳ ಸಂಘವು ಈ ಬ್ಯಾನರ್ ಅಳವಡಿಸಿದೆ. ತಪ್ಪು ತಿಳಿವಳಿಕೆ ಮೂಡದಂತೆ ಈ ಕ್ರಮವಹಿಸಲಾಗಿದೆ. ದೀಪಾವಳಿ ಆಚರಣೆ ನಂತರ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ ಎಂಬ ದೂರುಗಳ ಅನ್ವಯ ಈ ಕ್ರಮಕ್ಕೆ ಮುಂದಾಗಿದೆ’ ಎಂದು ಸಂಸದ ಚುವಾನ್ ಹೇಳಿದ್ದಾರೆ.</p>.<p>‘ನನ್ನ ಕ್ಷೇತ್ರದ ಹಲವೆಡೆ ಹಬ್ಬಕ್ಕೆ ಶುಭಾಶಯ ಕೋರುವ ಬ್ಯಾನರ್ ಅಳವಡಿಸಲಾಗಿದೆ. ಕಸ ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಒಂದು ಪ್ರದೇಶದಲ್ಲಷ್ಟೇ ಬ್ಯಾನರ್ ಅಳವಡಿಸಲಾಗಿದೆ. ಇದರ ಹಿಂದೆ ಯಾವುದೇ ಒಂದು ಜನಾಂಗವನ್ನು ಗುರಿಯಾಗಿಟ್ಟುಕೊಂಡಿಲ್ಲ’ ಎಂದು ಹೇಳಿದ್ದಾರೆ.</p>.<p>‘ನಿವಾಸಿಗಳ ಸಂಘದ ಸದಸ್ಯರು ಚರ್ಚಿಸಿದ ಬಳಿಕ ಎಲ್ಲೆಂದರಲ್ಲಿ ಕಸ ಸುರಿಯದಂತೆ ನೆನಪಿಸಲು ಈ ಬ್ಯಾನರ್ ಅಳವಡಿಸಿದ್ದಾರೆ’ ಎಂದು ಅವರು ಸಮಜಾಯಿಷಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>