<p><strong>ಚಂಡೀಗಢ :</strong> ಪಂಜಾಬಿನ ಪಟಿಯಾಲ-ಅಂಬಾಲ ಹೆದ್ದಾರಿಯ ಶಂಭು ಗ್ರಾಮದ ಸಮೀಪದಲ್ಲಿ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭಾಗಿಯಾಗಿದ್ದ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಇವರು ಬಿಷ್ಣೋಯ್ ಗ್ಯಾಂಗ್ಗೆ ಸೇರಿದವರು ಎಂದೆನ್ನಲಾಗಿದೆ.</p><p>ಬಂಧಿತರಿಂದ 9 ಎಂಎಂ ಗ್ಲಾಕ್ ಪಿಸ್ತೂಲ್ ಹಾಗೂ 6 ಜೀವಂತ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಪಂಜಾಬ್ ನ ಆ್ಯಂಟಿ ಗ್ಯಾಂಗ್ಸ್ಟರ್ ಟಾಸ್ಕ್ ಫೋರ್ಸ್ ನಡೆಸಿದ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಇಬ್ಬರನ್ನು ಪಟಿಯಾಲ-ಅಂಬಾಲ ಹೆದ್ದಾರಿಯ ಶಂಭು ಗ್ರಾಮದ ಸಮೀಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ.</p><p>ಕೃತ್ಯ ಎಸಗಿದ ನಂತರ ಇವರು ನೇಪಾಳಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದರು. ಆದರೆ ವಿದೇಶಿ ಮೂಲದ ವ್ಯಕ್ತಿಯ ನಿರ್ದೇಶನ ಮೇರೆಗೆ ಅಪರಾಧ ನಡೆಸಲು ಇವರು ಪಂಜಾಬ್ಗೆ ಮರಳಿದ್ದರು ಎಂಬುದನ್ನು ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯಲ್ಲಿ ಪತ್ತೆ ಮಾಡಿದ್ದಾರೆ.</p><p>ಇಬ್ಬರು ಆರೋಪಿಗಳ ವಿರುದ್ದ ಪಂಜಾಬ್, ದೆಹಲಿ, ರಾಜಸ್ಥಾನ ಮತ್ತು ಗುಜರಾತ್ನಲ್ಲಿ ಕ್ರಿಮಿನಲ್ ಕಾಯ್ದೆಗಳ ಅಡಿ 15 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ. </p><p>ಫಜಿಲ್ಕಾದಲ್ಲಿ ಇತ್ತೀಚೆಗೆ ನಡೆದ ಭರತ್ ರತನ್ ಅಲಿಯಾಸ್ ವಿಕ್ಕಿಯ ಕೊಲೆಯಲ್ಲೂ ಇವರ ಕೈವಾಡವಿರಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ :</strong> ಪಂಜಾಬಿನ ಪಟಿಯಾಲ-ಅಂಬಾಲ ಹೆದ್ದಾರಿಯ ಶಂಭು ಗ್ರಾಮದ ಸಮೀಪದಲ್ಲಿ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭಾಗಿಯಾಗಿದ್ದ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಇವರು ಬಿಷ್ಣೋಯ್ ಗ್ಯಾಂಗ್ಗೆ ಸೇರಿದವರು ಎಂದೆನ್ನಲಾಗಿದೆ.</p><p>ಬಂಧಿತರಿಂದ 9 ಎಂಎಂ ಗ್ಲಾಕ್ ಪಿಸ್ತೂಲ್ ಹಾಗೂ 6 ಜೀವಂತ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಪಂಜಾಬ್ ನ ಆ್ಯಂಟಿ ಗ್ಯಾಂಗ್ಸ್ಟರ್ ಟಾಸ್ಕ್ ಫೋರ್ಸ್ ನಡೆಸಿದ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಇಬ್ಬರನ್ನು ಪಟಿಯಾಲ-ಅಂಬಾಲ ಹೆದ್ದಾರಿಯ ಶಂಭು ಗ್ರಾಮದ ಸಮೀಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ.</p><p>ಕೃತ್ಯ ಎಸಗಿದ ನಂತರ ಇವರು ನೇಪಾಳಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದರು. ಆದರೆ ವಿದೇಶಿ ಮೂಲದ ವ್ಯಕ್ತಿಯ ನಿರ್ದೇಶನ ಮೇರೆಗೆ ಅಪರಾಧ ನಡೆಸಲು ಇವರು ಪಂಜಾಬ್ಗೆ ಮರಳಿದ್ದರು ಎಂಬುದನ್ನು ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯಲ್ಲಿ ಪತ್ತೆ ಮಾಡಿದ್ದಾರೆ.</p><p>ಇಬ್ಬರು ಆರೋಪಿಗಳ ವಿರುದ್ದ ಪಂಜಾಬ್, ದೆಹಲಿ, ರಾಜಸ್ಥಾನ ಮತ್ತು ಗುಜರಾತ್ನಲ್ಲಿ ಕ್ರಿಮಿನಲ್ ಕಾಯ್ದೆಗಳ ಅಡಿ 15 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ. </p><p>ಫಜಿಲ್ಕಾದಲ್ಲಿ ಇತ್ತೀಚೆಗೆ ನಡೆದ ಭರತ್ ರತನ್ ಅಲಿಯಾಸ್ ವಿಕ್ಕಿಯ ಕೊಲೆಯಲ್ಲೂ ಇವರ ಕೈವಾಡವಿರಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>