<p><strong>ನವದೆಹಲಿ:</strong> ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ ಕ್ರಮಗಳು ಯಾವಾಗಲೂ ಜನರ ಅನುಕೂಲಕ್ಕಾಗಿಯೇ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಸಂಸತ್ ಭವನದ ಸಂಕೀರ್ಣದಲ್ಲಿ ನಡೆದ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸದರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ.</p><p>‘ಕೇವಲ ಆರ್ಥಿಕತೆಯಲ್ಲಿ ಮಾತ್ರವಲ್ಲದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಸುಧಾರಣೆ ತರಬೇಕಾಗಿದೆ. ದೇಶದ ಜನರು ಯಾವುದೇ ಅನಾನುಕೂಲತೆ ಎದುರಿಸಬಾರದು. ನಿಯಮಗಳು ಜನರ ಅನುಕೂಲಕ್ಕಾಗಿ ಮತ್ತು ಅವರ ಜೀವನವನ್ನು ಸುಧಾರಿಸುವಂತೆ ಎಲ್ಲರೂ ಖಚಿತಪಡಿಸಿಕೊಳ್ಳಬೇಕು’ ಎಂದು ಮೋದಿ ಹೇಳಿದ್ದಾರೆ.</p><p>‘ಅಭಿವೃದ್ಧಿ ಕಾರ್ಯಗಳನ್ನು ಮೂರು ಪಟ್ಟು ವೇಗಗೊಳಿಸಲು ಮತ್ತು ಯುವಕರು, ಕ್ರೀಡೆ ಮತ್ತು ಇತರ ಚಟುವಟಿಕೆಗಳೊಂದಿಗೆ ಸಂಪರ್ಕ ಸಾಧಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು’ ಎಂದೂ ಎನ್ಡಿಎ ಸಂಸದರಿಗೆ ಮೋದಿ ಕಿವಿಮಾತು ಹೇಳಿದ್ದಾರೆ.</p><p>‘ಕಾನೂನುಗಳು ಅಥವಾ ನಿಯಮಗಳು ಜನರ ಅನುಕೂಲಕ್ಕಾಗಿ ಇರಬೇಕೇ ಹೊರತು, ಹೊರೆಯಾಗಿರಬಾರದು. ಜತೆಗೆ, ನಿಯಮಗಳು ವ್ಯವಸ್ಥೆಯನ್ನು ಸುಧಾರಿಸುವಂತಿರಬೇಕು ಬದಲಾಗಿ ಯಾವುದೇ ಕಾರಣವಿಲ್ಲದೆ ಜನರಿಗೆ ಕಿರುಕುಳ ನೀಡುವಂತಿರಬಾರದು’ ಎಂದು ರಿಜಿಜು ತಿಳಿಸಿದ್ದಾರೆ.</p><p>ಇದೇ ವೇಳೆ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಮೋದಿ ಅವರನ್ನು ಅಭಿನಂದಿಸಲಾಯಿತು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷರೂ ಆಗಿರುವ ಜೆ ಪಿ ನಡ್ಡಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ ಕ್ರಮಗಳು ಯಾವಾಗಲೂ ಜನರ ಅನುಕೂಲಕ್ಕಾಗಿಯೇ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಸಂಸತ್ ಭವನದ ಸಂಕೀರ್ಣದಲ್ಲಿ ನಡೆದ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸದರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ.</p><p>‘ಕೇವಲ ಆರ್ಥಿಕತೆಯಲ್ಲಿ ಮಾತ್ರವಲ್ಲದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಸುಧಾರಣೆ ತರಬೇಕಾಗಿದೆ. ದೇಶದ ಜನರು ಯಾವುದೇ ಅನಾನುಕೂಲತೆ ಎದುರಿಸಬಾರದು. ನಿಯಮಗಳು ಜನರ ಅನುಕೂಲಕ್ಕಾಗಿ ಮತ್ತು ಅವರ ಜೀವನವನ್ನು ಸುಧಾರಿಸುವಂತೆ ಎಲ್ಲರೂ ಖಚಿತಪಡಿಸಿಕೊಳ್ಳಬೇಕು’ ಎಂದು ಮೋದಿ ಹೇಳಿದ್ದಾರೆ.</p><p>‘ಅಭಿವೃದ್ಧಿ ಕಾರ್ಯಗಳನ್ನು ಮೂರು ಪಟ್ಟು ವೇಗಗೊಳಿಸಲು ಮತ್ತು ಯುವಕರು, ಕ್ರೀಡೆ ಮತ್ತು ಇತರ ಚಟುವಟಿಕೆಗಳೊಂದಿಗೆ ಸಂಪರ್ಕ ಸಾಧಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು’ ಎಂದೂ ಎನ್ಡಿಎ ಸಂಸದರಿಗೆ ಮೋದಿ ಕಿವಿಮಾತು ಹೇಳಿದ್ದಾರೆ.</p><p>‘ಕಾನೂನುಗಳು ಅಥವಾ ನಿಯಮಗಳು ಜನರ ಅನುಕೂಲಕ್ಕಾಗಿ ಇರಬೇಕೇ ಹೊರತು, ಹೊರೆಯಾಗಿರಬಾರದು. ಜತೆಗೆ, ನಿಯಮಗಳು ವ್ಯವಸ್ಥೆಯನ್ನು ಸುಧಾರಿಸುವಂತಿರಬೇಕು ಬದಲಾಗಿ ಯಾವುದೇ ಕಾರಣವಿಲ್ಲದೆ ಜನರಿಗೆ ಕಿರುಕುಳ ನೀಡುವಂತಿರಬಾರದು’ ಎಂದು ರಿಜಿಜು ತಿಳಿಸಿದ್ದಾರೆ.</p><p>ಇದೇ ವೇಳೆ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಮೋದಿ ಅವರನ್ನು ಅಭಿನಂದಿಸಲಾಯಿತು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷರೂ ಆಗಿರುವ ಜೆ ಪಿ ನಡ್ಡಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>