ಗುವಾಹಟಿ: ಮಹಿಳಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರನ್ನು ರಾಕ್ಷಸನಿಗೆ ಹೋಲಿಸಿ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದ ವಕೀಲನ್ನು ಗೌಹಾತಿ ಹೈಕೋರ್ಟ್ ಅಪರಾಧಿ ಎಂದು ತೀರ್ಪು ನೀಡಿದೆ.
ನ್ಯಾಯಾಧೀಶರಾದ ಕಲ್ಯಾಣ್ ರೈ ಸುರಾನಾ ಮತ್ತು ದೇವಶೀಸ್ ಬರುವಾ ಅವರನ್ನು ಒಳಗೊಂಡ ವಿಭಾಗೀಯ ಪೀಠವು ವಕೀಲನ್ನು ದೋಷಿ ಎಂದು ತೀರ್ಪು ನೀಡಿದೆ. ವಕೀಲ ಉತ್ಪಲ್ ಗೋಸ್ವಾಮಿ ತೀರ್ಪನ್ನು ಒಪ್ಪಿಕೊಂಡಿದ್ದಾರೆ.
ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ವಕೀಲ ಗೋಸ್ವಾಮಿ ಸಹ ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.