<p class="title"><strong>ಹೈದರಾಬಾದ್: </strong>ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದ್ದ ವಕೀಲ ದಂಪತಿಯ ಕೊಲೆ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಪರಿಗಣಿಸಿರುವ ತೆಲಂಗಾಣ ಹೈಕೋರ್ಟ್, ಈ ಕುರಿತು ಸಮರ್ಪಕ ಮತ್ತು ತ್ವರಿತಗತಿಯಲ್ಲಿ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಿತು.</p>.<p class="title">ಹೈಕೋರ್ಟ್ನ ವಕೀಲ ದಂಪತಿಗಳಾದ ಗತ್ತುವಾಮನ್ ರಾವ್ ಮತ್ತು ಪಿ.ವಿ.ನಾಗಮಣಿ ಅವರು ಕಾರಿನಲ್ಲಿ ಪ್ರಯಾಣಿಸುವಾಗ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಚಾಕು ಮತ್ತು ಇತರೆ ಮಾರಕಾಸ್ತ್ರಗಳನ್ನು ಬಳಸಿ ದುಷ್ಕರ್ಮಿಗಳು ರಾಮಗಿರಿ ಮಂಡಲ್ ಬಳಿ ಕೃತ್ಯ ಎಸಗಿದ್ದರು.</p>.<p class="title">ವಿಚಾರಣೆಯನ್ನು ಮಾರ್ಚ್ 1ಕ್ಕೆ ನಿಗದಿಪಡಿಸಿದ ಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ತನಿಖೆಯ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಲು ಸೂಚಿಸಿತು. ದಂಪತಿ ಕೊಲೆ ಖಂಡಿಸಿ ವಕೀಲರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ತ್ವರಿತ ಬಂಧನಕ್ಕೆ ಆಗ್ರಹಪಡಿಸಿದ್ದರು.</p>.<p class="title">ಕೃತ್ಯವನ್ನು ಖಂಡಿಸಿದ್ದ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಯ್ಲಿ ಅವರು, ಸಾಕ್ಷ್ಯ ಸಂಗ್ರಹ ಚುರುಕಾಗಿ ತನಿಖೆ ನಡೆಸಬೇಕು. ಯಾವುದೇ ವಿಳಂಬ ಆಗಬಾರದು ಎಂದೂ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಹೈದರಾಬಾದ್: </strong>ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದ್ದ ವಕೀಲ ದಂಪತಿಯ ಕೊಲೆ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಪರಿಗಣಿಸಿರುವ ತೆಲಂಗಾಣ ಹೈಕೋರ್ಟ್, ಈ ಕುರಿತು ಸಮರ್ಪಕ ಮತ್ತು ತ್ವರಿತಗತಿಯಲ್ಲಿ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಿತು.</p>.<p class="title">ಹೈಕೋರ್ಟ್ನ ವಕೀಲ ದಂಪತಿಗಳಾದ ಗತ್ತುವಾಮನ್ ರಾವ್ ಮತ್ತು ಪಿ.ವಿ.ನಾಗಮಣಿ ಅವರು ಕಾರಿನಲ್ಲಿ ಪ್ರಯಾಣಿಸುವಾಗ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಚಾಕು ಮತ್ತು ಇತರೆ ಮಾರಕಾಸ್ತ್ರಗಳನ್ನು ಬಳಸಿ ದುಷ್ಕರ್ಮಿಗಳು ರಾಮಗಿರಿ ಮಂಡಲ್ ಬಳಿ ಕೃತ್ಯ ಎಸಗಿದ್ದರು.</p>.<p class="title">ವಿಚಾರಣೆಯನ್ನು ಮಾರ್ಚ್ 1ಕ್ಕೆ ನಿಗದಿಪಡಿಸಿದ ಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ತನಿಖೆಯ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಲು ಸೂಚಿಸಿತು. ದಂಪತಿ ಕೊಲೆ ಖಂಡಿಸಿ ವಕೀಲರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ತ್ವರಿತ ಬಂಧನಕ್ಕೆ ಆಗ್ರಹಪಡಿಸಿದ್ದರು.</p>.<p class="title">ಕೃತ್ಯವನ್ನು ಖಂಡಿಸಿದ್ದ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಯ್ಲಿ ಅವರು, ಸಾಕ್ಷ್ಯ ಸಂಗ್ರಹ ಚುರುಕಾಗಿ ತನಿಖೆ ನಡೆಸಬೇಕು. ಯಾವುದೇ ವಿಳಂಬ ಆಗಬಾರದು ಎಂದೂ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>