<p><strong>ದಂತೆವಾಡಾ</strong>: ‘ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಮುಖ್ಯವಾಹಿನಿಗೆ ಬನ್ನಿ. ನೀವು ಕೂಡ ನಮ್ಮವರೇ ಆಗಿದ್ದೀರಿ. ನಿಮ್ಮನ್ನು ಕೊಲ್ಲುವುದರಿಂದ ನಮಗೆ ಖುಷಿ ಸಿಗುವುದಿಲ್ಲ’ ಎಂದು ಗೃಹ ಸಚಿವ ಅಮಿತ್ ಶಾ ಅವರು ನಕ್ಸಲರನ್ನು ಶನಿವಾರ ಉದ್ದೇಶಿಸಿ ಮಾತನಾಡಿದರು. </p><p>‘ಬತ್ಸರ್ ಪಂಡುಮ್’ ಹಬ್ಬದ ಪ್ರಯುಕ್ತ ಛತ್ತೀಸಗಢ ಸರ್ಕಾರವು ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘2026ರ ಮಾರ್ಚ್ ಒಳಗಾಗಿ ನಾವು ದೇಶವನ್ನು ನಕ್ಸಲ್ ಮುಕ್ತ ಮಾಡುತ್ತೇವೆ. ನಕ್ಸಲರು ಬತ್ಸರ್ ಪ್ರದೇಶದಲ್ಲಿರುವ ಬುಡಕಟ್ಟು ಜನರ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ’ ಎಂದರು.</p><p>‘ನಕ್ಸಲ್ ಚಳವಳಿ ತೊರೆದು ಅಭಿವೃದ್ಧಿ ಪ್ರಕ್ರಿಯೆಯ ಭಾಗವಾಗಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನಿಮಗೆ ರಕ್ಷಣೆ ದೊರೆಯುತ್ತದೆ. ಈ ಪ್ರದೇಶವು ಅಭಿವೃದ್ಧಿಯನ್ನು ಬಯಸುತ್ತಿದೆ. ಈ ಪ್ರದೇಶದಲ್ಲಿ ಕಳೆದ 50 ವರ್ಷಗಳಿಂದ ಆಗದ ಅಭಿವೃದ್ಧಿಯನ್ನು ಪ್ರಧಾನಿ ಮೋದಿ ಅವರು ಮುಂದಿನ ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಮಕ್ಕಳು ಶಾಲೆಗೆ ಹೋಗುವುದು, ಆಸ್ಪತ್ರೆಗಳ ನಿರ್ಮಾಣದಿಂದ ಮಾತ್ರವೇ ಇವೆಲ್ಲವೂ ಸಾಧ್ಯವಾಗುತ್ತದೆ’ ಎಂದರು.</p><p>‘ಬತ್ಸರ್ ಪ್ರದೇಶದಲ್ಲಿ ಯಾವ ಗ್ರಾಮವು ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುತ್ತದೆಯೋ ಅಂಥ ಗ್ರಾಮಗಳ ಅಭಿವೃದ್ಧಿಗೆ ₹1 ಕೋಟಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಈಗ ನೀವು ನಿಮ್ಮ ಗ್ರಾಮ, ಮನೆಗಳನ್ನು ನಕ್ಸಲ್ ಮುಕ್ತ ಮಾಡಿಕೊಳ್ಳಬೇಕು’ ಎಂದು ಕರೆ ನೀಡಿದರು.</p>.ಕುನಾಲ್ ಕಾಮ್ರಾ ಕಾರ್ಯಕ್ರಮಗಳಿಗೆ ‘ಬುಕ್ಮೈಶೋ’ ಕೊಕ್.ಠಾಣೆ | 13 ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ.ತೆಲಂಗಾಣ: 86 ಮಾವೋವಾದಿಗಳ ಶರಣಾಗತಿ.ಪಾಕ್ಗೆ ಮತ್ತೆ ಮುಖಭಂಗ; ಏಕದಿನ ಸರಣಿಯಲ್ಲಿ ಕಿವೀಸ್ ಕ್ಲೀನ್ ಸ್ವೀಪ್ ಸಾಧನೆ.ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಸಾವಿನ ಸಂಖ್ಯೆ 18ಕ್ಕೆ ಏರಿಕೆ.ಕೇಂದ್ರದಿಂದ ಬಿಹಾರ, ಹಿಮಾಚಲ, ತಮಿಳುನಾಡು, ಪುದುಚೇರಿಗೆ ₹1,280 ಕೋಟಿ ಪರಿಹಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಂತೆವಾಡಾ</strong>: ‘ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಮುಖ್ಯವಾಹಿನಿಗೆ ಬನ್ನಿ. ನೀವು ಕೂಡ ನಮ್ಮವರೇ ಆಗಿದ್ದೀರಿ. ನಿಮ್ಮನ್ನು ಕೊಲ್ಲುವುದರಿಂದ ನಮಗೆ ಖುಷಿ ಸಿಗುವುದಿಲ್ಲ’ ಎಂದು ಗೃಹ ಸಚಿವ ಅಮಿತ್ ಶಾ ಅವರು ನಕ್ಸಲರನ್ನು ಶನಿವಾರ ಉದ್ದೇಶಿಸಿ ಮಾತನಾಡಿದರು. </p><p>‘ಬತ್ಸರ್ ಪಂಡುಮ್’ ಹಬ್ಬದ ಪ್ರಯುಕ್ತ ಛತ್ತೀಸಗಢ ಸರ್ಕಾರವು ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘2026ರ ಮಾರ್ಚ್ ಒಳಗಾಗಿ ನಾವು ದೇಶವನ್ನು ನಕ್ಸಲ್ ಮುಕ್ತ ಮಾಡುತ್ತೇವೆ. ನಕ್ಸಲರು ಬತ್ಸರ್ ಪ್ರದೇಶದಲ್ಲಿರುವ ಬುಡಕಟ್ಟು ಜನರ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ’ ಎಂದರು.</p><p>‘ನಕ್ಸಲ್ ಚಳವಳಿ ತೊರೆದು ಅಭಿವೃದ್ಧಿ ಪ್ರಕ್ರಿಯೆಯ ಭಾಗವಾಗಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನಿಮಗೆ ರಕ್ಷಣೆ ದೊರೆಯುತ್ತದೆ. ಈ ಪ್ರದೇಶವು ಅಭಿವೃದ್ಧಿಯನ್ನು ಬಯಸುತ್ತಿದೆ. ಈ ಪ್ರದೇಶದಲ್ಲಿ ಕಳೆದ 50 ವರ್ಷಗಳಿಂದ ಆಗದ ಅಭಿವೃದ್ಧಿಯನ್ನು ಪ್ರಧಾನಿ ಮೋದಿ ಅವರು ಮುಂದಿನ ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಮಕ್ಕಳು ಶಾಲೆಗೆ ಹೋಗುವುದು, ಆಸ್ಪತ್ರೆಗಳ ನಿರ್ಮಾಣದಿಂದ ಮಾತ್ರವೇ ಇವೆಲ್ಲವೂ ಸಾಧ್ಯವಾಗುತ್ತದೆ’ ಎಂದರು.</p><p>‘ಬತ್ಸರ್ ಪ್ರದೇಶದಲ್ಲಿ ಯಾವ ಗ್ರಾಮವು ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುತ್ತದೆಯೋ ಅಂಥ ಗ್ರಾಮಗಳ ಅಭಿವೃದ್ಧಿಗೆ ₹1 ಕೋಟಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಈಗ ನೀವು ನಿಮ್ಮ ಗ್ರಾಮ, ಮನೆಗಳನ್ನು ನಕ್ಸಲ್ ಮುಕ್ತ ಮಾಡಿಕೊಳ್ಳಬೇಕು’ ಎಂದು ಕರೆ ನೀಡಿದರು.</p>.ಕುನಾಲ್ ಕಾಮ್ರಾ ಕಾರ್ಯಕ್ರಮಗಳಿಗೆ ‘ಬುಕ್ಮೈಶೋ’ ಕೊಕ್.ಠಾಣೆ | 13 ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ.ತೆಲಂಗಾಣ: 86 ಮಾವೋವಾದಿಗಳ ಶರಣಾಗತಿ.ಪಾಕ್ಗೆ ಮತ್ತೆ ಮುಖಭಂಗ; ಏಕದಿನ ಸರಣಿಯಲ್ಲಿ ಕಿವೀಸ್ ಕ್ಲೀನ್ ಸ್ವೀಪ್ ಸಾಧನೆ.ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಸಾವಿನ ಸಂಖ್ಯೆ 18ಕ್ಕೆ ಏರಿಕೆ.ಕೇಂದ್ರದಿಂದ ಬಿಹಾರ, ಹಿಮಾಚಲ, ತಮಿಳುನಾಡು, ಪುದುಚೇರಿಗೆ ₹1,280 ಕೋಟಿ ಪರಿಹಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>