ರಾಜ್ಯದ ಎಲ್ಲ ಆರ್ಥಿಕ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುವ ಎಡಪಕ್ಷದ ಧೋರಣೆ ಸರಿಯಲ್ಲ ಎಂದು ಹೇಳಿರುವ ಯುಡಿಎಫ್, ಪ್ರತಿಭಟನೆಯಲ್ಲಿ ಭಾಗವಹಿಸಲು ನಿರಾಕರಿಸಿದೆ. ಕೇರಳದ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸರ್ಕಾರದ ದುರುಪಯೋಗವೇ ಮುಖ್ಯ ಕಾರಣ. ತೆರಿಗೆ ಸಂಗ್ರಹ, ಚಿನ್ನದ ಮಾರಾಟ, ಐಜಿಎಸ್ಟಿಯಲ್ಲಿ ತನ್ನ ಪಾಲು ಸ್ವೀಕಾರ ಸೇರಿದಂತೆ ಹಲವು ವಿಷಯಗಳಲ್ಲಿ ರಾಜ್ಯ ಸರ್ಕಾರದ ಲೋಪಗಳಿಂದ ಆರ್ಥಿಕವಾಗಿ ಕೆಟ್ಟ ಪರಿಸ್ಥಿತಿ ಎದುರಾಗಿದೆ ಎಂದು ಯುಡಿಎಫ್ ದೂರಿದೆ.