<p><strong>ನವದೆಹಲಿ:</strong> ದೇಶದ ಜನರ ಸಮಸ್ಯೆಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯವಾಗಿದೆ. ಜನರಿಗೆ ಅವರ ಹಕ್ಕುಗಳು ಮತ್ತು ನ್ಯಾಯ ಸಿಗುವವರೆಗೆ ನಾನು ಇದನ್ನು ನಿಲ್ಲಿಸುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಈ ಕುರಿತು ತಮ್ಮ ವಾಟ್ಸ್ಆ್ಯಪ್ ಚಾನಲ್ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ‘ವಿರೋಧ ಪಕ್ಷದ ನಾಯಕ ಎಂದರೆ ಕೇವಲ ಹುದ್ದೆಯಲ್ಲ’ ಎಂದು ಹೇಳಿದ್ದಾರೆ. ಜತೆಗೆ ವಿವಿಧ ಸಂಘಗಳೊಂದಿಗೆ ಸಭೆ ನಡೆಸಿರುವ ವಿಡಿಯೊ ಹಂಚಿಕೊಂಡಿದ್ದಾರೆ.</p><p>‘ನನಗೆ, ವಿರೋಧ ಪಕ್ಷದ ನಾಯಕ ಎಂಬುದು ಕೇವಲ ಹುದ್ದೆಯಲ್ಲ. ದೇಶದ ಜನರ ಸಮಸ್ಯೆಗಳನ್ನು ಅರಿತು, ಅವುಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯವಾಗಿದೆ. ದೇಶದ ಜನರಿಗೆ ಅವರ ಹಕ್ಕುಗಳು ಮತ್ತು ನ್ಯಾಯ ಸಿಗುವವರೆಗೆ ನಾನು ಇದನ್ನು ನಿಲ್ಲಿಸುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.</p><p>ಜುಲೈ 1ರಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೊ ತುಣುಕು, ಹಾಥರಸ್ ಕಾಲ್ತುಳಿತದ ಸಂತ್ರಸ್ತರೊಂದಿಗಿನ ಸಭೆ, ಭಾರತೀಯ ರೈಲ್ವೆ ಲೋಕೊ ಪೈಲಟ್ಗಳೊಂದಿಗಿನ ಸಭೆ, ಸಂರ್ಘಷ ಪೀಡಿತ ಮಣಿಪುರದ ಸಂತ್ರಸ್ತರ ಭೇಟಿ ದೃಶ್ಯಗಳನ್ನು ಪೋಸ್ಟ್ ಮಾಡಿರುವ ವಿಡಿಯೊದಲ್ಲಿ ತೋರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಜನರ ಸಮಸ್ಯೆಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯವಾಗಿದೆ. ಜನರಿಗೆ ಅವರ ಹಕ್ಕುಗಳು ಮತ್ತು ನ್ಯಾಯ ಸಿಗುವವರೆಗೆ ನಾನು ಇದನ್ನು ನಿಲ್ಲಿಸುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಈ ಕುರಿತು ತಮ್ಮ ವಾಟ್ಸ್ಆ್ಯಪ್ ಚಾನಲ್ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ‘ವಿರೋಧ ಪಕ್ಷದ ನಾಯಕ ಎಂದರೆ ಕೇವಲ ಹುದ್ದೆಯಲ್ಲ’ ಎಂದು ಹೇಳಿದ್ದಾರೆ. ಜತೆಗೆ ವಿವಿಧ ಸಂಘಗಳೊಂದಿಗೆ ಸಭೆ ನಡೆಸಿರುವ ವಿಡಿಯೊ ಹಂಚಿಕೊಂಡಿದ್ದಾರೆ.</p><p>‘ನನಗೆ, ವಿರೋಧ ಪಕ್ಷದ ನಾಯಕ ಎಂಬುದು ಕೇವಲ ಹುದ್ದೆಯಲ್ಲ. ದೇಶದ ಜನರ ಸಮಸ್ಯೆಗಳನ್ನು ಅರಿತು, ಅವುಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯವಾಗಿದೆ. ದೇಶದ ಜನರಿಗೆ ಅವರ ಹಕ್ಕುಗಳು ಮತ್ತು ನ್ಯಾಯ ಸಿಗುವವರೆಗೆ ನಾನು ಇದನ್ನು ನಿಲ್ಲಿಸುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.</p><p>ಜುಲೈ 1ರಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೊ ತುಣುಕು, ಹಾಥರಸ್ ಕಾಲ್ತುಳಿತದ ಸಂತ್ರಸ್ತರೊಂದಿಗಿನ ಸಭೆ, ಭಾರತೀಯ ರೈಲ್ವೆ ಲೋಕೊ ಪೈಲಟ್ಗಳೊಂದಿಗಿನ ಸಭೆ, ಸಂರ್ಘಷ ಪೀಡಿತ ಮಣಿಪುರದ ಸಂತ್ರಸ್ತರ ಭೇಟಿ ದೃಶ್ಯಗಳನ್ನು ಪೋಸ್ಟ್ ಮಾಡಿರುವ ವಿಡಿಯೊದಲ್ಲಿ ತೋರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>