<p><strong>ನವದೆಹಲಿ</strong>: ಕಾಮನ್ವೆಲ್ತ್ ರಾಷ್ಟ್ರಗಳ ಸಂಸತ್ತಿನ ಸ್ಪೀಕರ್ಗಳು ಮತ್ತು ಅಧ್ಯಕ್ಷೀಯ ಅಧಿಕಾರಿಗಳ (ಸಿಎಸ್ಪಿಒಸಿ) 28ನೇ ಸಮ್ಮೇಳನಕ್ಕೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗೈರಾಗಿರುವುದು ಚರ್ಚೆಗೆ ಕಾರಣವಾಗಿದೆ. ರಾಹುಲ್ ನಡೆಯುನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.</p><p>ಸಿಎಸ್ಪಿಒಸಿ ಸಮ್ಮೇಳನದ ಕುರಿತು ರಾಹುಲ್ಗೆ ಆಹ್ವಾನವೇ ಇರಲಿಲ್ಲ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ, ಜ.16) ಆಯೋಜಿಸಿರುವ ಔತಣಕೂಟಕ್ಕಷ್ಟೇ ಆಹ್ವಾನಿಸಲಾಗಿದೆ. ಆ ಕಾರ್ಯಕ್ರಮದಲ್ಲಿ ರಾಹುಲ್ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.</p><p>ಸಿಎಸ್ಪಿಒಸಿ ಸಮ್ಮೇಳನಕ್ಕೆ ರಾಹುಲ್ ಅವರಿಗೆ ಆಹ್ವಾನ ನೀಡಿರಲಿಲ್ಲ ಎಂಬುದನ್ನು ಕಾಂಗ್ರೆಸ್ ಹಾಗೂ ಕೇಂದ್ರ ಸರ್ಕಾರದ ಮೂಲಗಳು ಖಚಿತಪಡಿಸಿವೆ.</p><p>ವಿದೇಶಾಂಗ ವ್ಯವಹಾರಗಳ ಸಮಿತಿ ಸದಸ್ಯರಷ್ಟೇ ಸಮ್ಮೇಳನಕ್ಕೆ ಹಾಜರಾಗಿದ್ದರು ಎನ್ನಲಾಗಿದೆ. ಆದರೆ, ಅದು ಇನ್ನಷ್ಟೇ ಖಚಿತವಾಗಬೇಕಿದೆ. ವಿದೇಶಾಂಗ ವ್ಯವಹಾರಗಳ ಸಮಿತಿಯಲ್ಲಿರುವ ಕೇರಳ ಸಂಸದ ಶಶಿ ತರೂರ್ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ನ ಪ್ರಮುಖ ನಾಯಕ.</p><p>ಉಪರಾಷ್ಟ್ರಪತಿಯವರು ಆಯೋಜಿಸಿರುವ ಔತಣಕೂಟಕ್ಕೆ ರಾಹುಲ್ಗೆ ಆಹ್ವಾನ ನೀಡಲಾಗಿದೆಯಾದರೂ, ಅವರು ಪಾಲ್ಗೊಳ್ಳುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಸಿಎಸ್ಪಿಒಸಿ ಸಮ್ಮೇಳನದ ಆಹ್ವಾನದ ವಿಚಾರವಾಗಿ ಕಾಂಗ್ರೆಸ್ ನಾಯಕರು ಲೋಕಸಭೆಯ ಸ್ಪೀಕರ್ ಅವರೊಂದಿಗೆ ಚರ್ಚಿಸಿದ್ದಾರೆ.</p><p><strong>'ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ಗೆ ಗೌರವವಿಲ್ಲ'<br></strong>ರಾಹುಲ್ ಗಾಂಧಿ ಅವರಿಗೆ ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ ಎಂದು ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ಆರೋಪಿಸಿದ್ದಾರೆ. 'ಸ್ಪೀಕರ್ ಅವರು ಆಯೋಜಿಸಿದ್ದ ಇಂತಹ ಕಾರ್ಯಕ್ರಮದಲ್ಲಿ, ರಾಹುಲ್ ಅವರೂ ಪಾಲ್ಗೊಂಡು ವಿದೇಶಗಳ ಪ್ರತಿನಿಧಿಗಳನ್ನು ಸ್ವಾಗತಿಸಬೇಕಿತ್ತು' ಎಂದಿದ್ದಾರೆ.</p><p>ದೇಶದ ಘನತೆಯನ್ನು ಸಾರುವ ಕಾರ್ಯಕ್ರಮ ಇದಾಗಿರುವುದರಿಂದ ರಾಹುಲ್ ಅವರು ಭಾಗವಹಿಸಬೇಕಿತ್ತು ಎಂದು ಕೇಂದ್ರ ಸಚಿವ ಎಸ್ಪಿ ಸಿಂಗ್ ಬಘೇಲ್ ಹೇಳಿದ್ದಾರೆ.</p><p>'ನಮ್ಮದು ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ನಮ್ಮ ಸಂವಿಧಾನ, ನಮ್ಮಲ್ಲಿರುವ ಚುನಾವಣಾ ಪ್ರಕ್ರಿಯೆ, ನಮ್ಮ ಆಡಳಿತದ ಬಗ್ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂತಹ ಕ್ಷಣದಲ್ಲಿ ರಾಹುಲ್ ಗಾಂಧಿಯೂ ಇರಬೇಕಿತ್ತು' ಎಂದು ಜೆಡಿ(ಯು) ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಝಾ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಮನ್ವೆಲ್ತ್ ರಾಷ್ಟ್ರಗಳ ಸಂಸತ್ತಿನ ಸ್ಪೀಕರ್ಗಳು ಮತ್ತು ಅಧ್ಯಕ್ಷೀಯ ಅಧಿಕಾರಿಗಳ (ಸಿಎಸ್ಪಿಒಸಿ) 28ನೇ ಸಮ್ಮೇಳನಕ್ಕೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗೈರಾಗಿರುವುದು ಚರ್ಚೆಗೆ ಕಾರಣವಾಗಿದೆ. ರಾಹುಲ್ ನಡೆಯುನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.</p><p>ಸಿಎಸ್ಪಿಒಸಿ ಸಮ್ಮೇಳನದ ಕುರಿತು ರಾಹುಲ್ಗೆ ಆಹ್ವಾನವೇ ಇರಲಿಲ್ಲ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ, ಜ.16) ಆಯೋಜಿಸಿರುವ ಔತಣಕೂಟಕ್ಕಷ್ಟೇ ಆಹ್ವಾನಿಸಲಾಗಿದೆ. ಆ ಕಾರ್ಯಕ್ರಮದಲ್ಲಿ ರಾಹುಲ್ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.</p><p>ಸಿಎಸ್ಪಿಒಸಿ ಸಮ್ಮೇಳನಕ್ಕೆ ರಾಹುಲ್ ಅವರಿಗೆ ಆಹ್ವಾನ ನೀಡಿರಲಿಲ್ಲ ಎಂಬುದನ್ನು ಕಾಂಗ್ರೆಸ್ ಹಾಗೂ ಕೇಂದ್ರ ಸರ್ಕಾರದ ಮೂಲಗಳು ಖಚಿತಪಡಿಸಿವೆ.</p><p>ವಿದೇಶಾಂಗ ವ್ಯವಹಾರಗಳ ಸಮಿತಿ ಸದಸ್ಯರಷ್ಟೇ ಸಮ್ಮೇಳನಕ್ಕೆ ಹಾಜರಾಗಿದ್ದರು ಎನ್ನಲಾಗಿದೆ. ಆದರೆ, ಅದು ಇನ್ನಷ್ಟೇ ಖಚಿತವಾಗಬೇಕಿದೆ. ವಿದೇಶಾಂಗ ವ್ಯವಹಾರಗಳ ಸಮಿತಿಯಲ್ಲಿರುವ ಕೇರಳ ಸಂಸದ ಶಶಿ ತರೂರ್ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ನ ಪ್ರಮುಖ ನಾಯಕ.</p><p>ಉಪರಾಷ್ಟ್ರಪತಿಯವರು ಆಯೋಜಿಸಿರುವ ಔತಣಕೂಟಕ್ಕೆ ರಾಹುಲ್ಗೆ ಆಹ್ವಾನ ನೀಡಲಾಗಿದೆಯಾದರೂ, ಅವರು ಪಾಲ್ಗೊಳ್ಳುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಸಿಎಸ್ಪಿಒಸಿ ಸಮ್ಮೇಳನದ ಆಹ್ವಾನದ ವಿಚಾರವಾಗಿ ಕಾಂಗ್ರೆಸ್ ನಾಯಕರು ಲೋಕಸಭೆಯ ಸ್ಪೀಕರ್ ಅವರೊಂದಿಗೆ ಚರ್ಚಿಸಿದ್ದಾರೆ.</p><p><strong>'ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ಗೆ ಗೌರವವಿಲ್ಲ'<br></strong>ರಾಹುಲ್ ಗಾಂಧಿ ಅವರಿಗೆ ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ ಎಂದು ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ಆರೋಪಿಸಿದ್ದಾರೆ. 'ಸ್ಪೀಕರ್ ಅವರು ಆಯೋಜಿಸಿದ್ದ ಇಂತಹ ಕಾರ್ಯಕ್ರಮದಲ್ಲಿ, ರಾಹುಲ್ ಅವರೂ ಪಾಲ್ಗೊಂಡು ವಿದೇಶಗಳ ಪ್ರತಿನಿಧಿಗಳನ್ನು ಸ್ವಾಗತಿಸಬೇಕಿತ್ತು' ಎಂದಿದ್ದಾರೆ.</p><p>ದೇಶದ ಘನತೆಯನ್ನು ಸಾರುವ ಕಾರ್ಯಕ್ರಮ ಇದಾಗಿರುವುದರಿಂದ ರಾಹುಲ್ ಅವರು ಭಾಗವಹಿಸಬೇಕಿತ್ತು ಎಂದು ಕೇಂದ್ರ ಸಚಿವ ಎಸ್ಪಿ ಸಿಂಗ್ ಬಘೇಲ್ ಹೇಳಿದ್ದಾರೆ.</p><p>'ನಮ್ಮದು ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ನಮ್ಮ ಸಂವಿಧಾನ, ನಮ್ಮಲ್ಲಿರುವ ಚುನಾವಣಾ ಪ್ರಕ್ರಿಯೆ, ನಮ್ಮ ಆಡಳಿತದ ಬಗ್ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂತಹ ಕ್ಷಣದಲ್ಲಿ ರಾಹುಲ್ ಗಾಂಧಿಯೂ ಇರಬೇಕಿತ್ತು' ಎಂದು ಜೆಡಿ(ಯು) ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಝಾ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>