ಮಧ್ಯಪ್ರದೇಶದ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಬಾಬರಿಯಾ ಸೋಮವಾರ ವಿಧಿಶಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ವೇಳೆ ಕಾಂಗ್ರೆಸ್ನ ವ್ಯವಸ್ಥಾಪಕ ಸಮಿತಿಯ ಸಭೆಯನ್ನೂ ಕರೆಯಲಾಗಿತ್ತು.ಈ ಸಭೆಯಲ್ಲಿ ಭಾಗವಹಿಸುವ ಎಲ್ಲ ಜಿಲ್ಲಾ ನೇತಾರರಿಗೂ ಆಸನ ವ್ಯವಸ್ಥೆ ಮಾಡಲಾಗಿತ್ತು, ಆದರೆ ರಾಜಮನೆತನ ಸಿಂಧು ವಿಕ್ರಮ್ ಸಿಂಗ್ ಬನಾ ಎಂಬವರಿಗೆ ಆಸನ ವ್ಯವಸ್ಥೆ ಮಾಡಿಲ್ಲ ಎಂಬುದು ತರ್ಕಕ್ಕೆ ಕಾರಣವಾಗಿತ್ತು. ವಿಕ್ರಮ್ ಸಿಂಗ್ ಈ ಬಾರಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿದ್ದಾರೆ.