<p><strong>ರಜೌರಿ/ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಬಧಾಲ್ ಗ್ರಾಮದಲ್ಲಿ ನಿಗೂಢ ಕಾಯಿಲೆಯೊಂದಕ್ಕೆ ತುತ್ತಾಗಿ 17 ಮಂದಿ ಮೃತಪಟ್ಟಿರುವ ಕಾರಣ ಕಟ್ಟೆಚ್ಚರದಿಂದ ಇರುವಂತೆ ಸೂಚನೆ ಬಂದಿರುವುದರಿಂದ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಯ ಎಲ್ಲ ರಜೆಗಳನ್ನು ಅಧಿಕಾರಿಗಳು ರದ್ದುಪಡಿಸಿದ್ದಾರೆ. ಈ ಗ್ರಾಮದಲ್ಲಿ 230 ಮಂದಿಯನ್ನು ಬೇರೆಯವರ ಸಂಪರ್ಕದಿಂದ ಪ್ರತ್ಯೇಕವಾಗಿ ಇರಿಸಲಾಗಿದೆ.</p>.<p>ಲಖನೌ ಪ್ರಯೋಗಾಲಯದ ಆರಂಭಿಕ ತನಿಖೆಯ ಪ್ರಕಾರ ಈ ಗ್ರಾಮದಲ್ಲಿ ಜನರ ಸಾವಿಗೆ ವೈರಾಣು, ಬ್ಯಾಕ್ಟೀರಿಯಾ ಅಥವಾ ಸೋಂಕು ಕಾರಣವಲ್ಲ, ವಿಷಕಾರಿ ಪದಾರ್ಥದ ಕಾರಣದಿಂದಾಗಿ ಸಾವು ಉಂಟಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.</p>.<p class="title">ವಿಷಕಾರಿ ಪದಾರ್ಥ ಯಾವುದು ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಶೀಘ್ರವೇ ಪರಿಹಾರ ಸಿಗಬಹುದು ಎಂಬ ನಂಬಿಕೆ ಇದೆ. ಕಿಡಿಗೇಡಿತನದ ಕೃತ್ಯವೇನಾದರೂ ಆಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಸಚಿವ ಸಿಂಗ್ ಹೇಳಿದ್ದಾರೆ.</p>.<p class="title">ಶುಕ್ರವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಜೌರಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಅಮರಜೀತ್ ಸಿಂಗ್ ಭಾಟಿಯಾ, ‘ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ರಜೆಗಳನ್ನು ರದ್ದುಪಡಿಸಲಾಗಿದೆ’ ಎಂಬ ವಿಷಯ ತಿಳಿಸಿದರು.</p>.<p class="title">‘ಚಳಿಗಾಲದ ರಜೆಯನ್ನು ಕೂಡ ರದ್ದುಪಡಿಸಲಾಗಿದೆ’ ಎಂದು ಅವರು ಹೇಳಿದರು. ವೈದ್ಯಕೀಯ ಕಾಲೇಜಿಗೆ ನೆರವಾಗುವ ಉದ್ದೇಶದಿಂದ ಸರ್ಕಾರವು 10 ಮಂದಿ ಹೆಚ್ಚುವರಿ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಿದೆ ಎಂದರು.</p>.<p class="title">ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರ ಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ. ಮೂವರು ಸಹೋದರಿಯರು ಸೇರಿದಂತೆ ಒಟ್ಟು ನಾಲ್ಕು ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಮೂವರನ್ನು ವಿಮಾನದ ಮೂಲಕ ಜಮ್ಮುವಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಮೃತರ ಹತ್ತಿರದ ಸಂಬಂಧಿಗಳನ್ನು ರಜೌರಿಯಲ್ಲಿನ ನರ್ಸಿಂಗ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಕಾಯಿಲೆಗೆ ತುತ್ತಾದ ಕುಟುಂಬಗಳ ಸಂಪರ್ಕದಲ್ಲಿದ್ದ ಹಲವರನ್ನು ಗುರುತಿಸಲಾಗಿದೆ ಎಂದು ಕೂಡ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಜೌರಿ/ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಬಧಾಲ್ ಗ್ರಾಮದಲ್ಲಿ ನಿಗೂಢ ಕಾಯಿಲೆಯೊಂದಕ್ಕೆ ತುತ್ತಾಗಿ 17 ಮಂದಿ ಮೃತಪಟ್ಟಿರುವ ಕಾರಣ ಕಟ್ಟೆಚ್ಚರದಿಂದ ಇರುವಂತೆ ಸೂಚನೆ ಬಂದಿರುವುದರಿಂದ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಯ ಎಲ್ಲ ರಜೆಗಳನ್ನು ಅಧಿಕಾರಿಗಳು ರದ್ದುಪಡಿಸಿದ್ದಾರೆ. ಈ ಗ್ರಾಮದಲ್ಲಿ 230 ಮಂದಿಯನ್ನು ಬೇರೆಯವರ ಸಂಪರ್ಕದಿಂದ ಪ್ರತ್ಯೇಕವಾಗಿ ಇರಿಸಲಾಗಿದೆ.</p>.<p>ಲಖನೌ ಪ್ರಯೋಗಾಲಯದ ಆರಂಭಿಕ ತನಿಖೆಯ ಪ್ರಕಾರ ಈ ಗ್ರಾಮದಲ್ಲಿ ಜನರ ಸಾವಿಗೆ ವೈರಾಣು, ಬ್ಯಾಕ್ಟೀರಿಯಾ ಅಥವಾ ಸೋಂಕು ಕಾರಣವಲ್ಲ, ವಿಷಕಾರಿ ಪದಾರ್ಥದ ಕಾರಣದಿಂದಾಗಿ ಸಾವು ಉಂಟಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.</p>.<p class="title">ವಿಷಕಾರಿ ಪದಾರ್ಥ ಯಾವುದು ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಶೀಘ್ರವೇ ಪರಿಹಾರ ಸಿಗಬಹುದು ಎಂಬ ನಂಬಿಕೆ ಇದೆ. ಕಿಡಿಗೇಡಿತನದ ಕೃತ್ಯವೇನಾದರೂ ಆಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಸಚಿವ ಸಿಂಗ್ ಹೇಳಿದ್ದಾರೆ.</p>.<p class="title">ಶುಕ್ರವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಜೌರಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಅಮರಜೀತ್ ಸಿಂಗ್ ಭಾಟಿಯಾ, ‘ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ರಜೆಗಳನ್ನು ರದ್ದುಪಡಿಸಲಾಗಿದೆ’ ಎಂಬ ವಿಷಯ ತಿಳಿಸಿದರು.</p>.<p class="title">‘ಚಳಿಗಾಲದ ರಜೆಯನ್ನು ಕೂಡ ರದ್ದುಪಡಿಸಲಾಗಿದೆ’ ಎಂದು ಅವರು ಹೇಳಿದರು. ವೈದ್ಯಕೀಯ ಕಾಲೇಜಿಗೆ ನೆರವಾಗುವ ಉದ್ದೇಶದಿಂದ ಸರ್ಕಾರವು 10 ಮಂದಿ ಹೆಚ್ಚುವರಿ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಿದೆ ಎಂದರು.</p>.<p class="title">ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರ ಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ. ಮೂವರು ಸಹೋದರಿಯರು ಸೇರಿದಂತೆ ಒಟ್ಟು ನಾಲ್ಕು ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಮೂವರನ್ನು ವಿಮಾನದ ಮೂಲಕ ಜಮ್ಮುವಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಮೃತರ ಹತ್ತಿರದ ಸಂಬಂಧಿಗಳನ್ನು ರಜೌರಿಯಲ್ಲಿನ ನರ್ಸಿಂಗ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಕಾಯಿಲೆಗೆ ತುತ್ತಾದ ಕುಟುಂಬಗಳ ಸಂಪರ್ಕದಲ್ಲಿದ್ದ ಹಲವರನ್ನು ಗುರುತಿಸಲಾಗಿದೆ ಎಂದು ಕೂಡ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>