<p><strong>ಕೋಲ್ಕತ್ತ:</strong> ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನೊಂದಿಗೆ ಸೀಟು ಹಂಚಿಕೆ ಮಾತುಕತೆಯನ್ನು ಎಡರಂಗ ಆಗಲೇ ಆರಂಭಿಸಿದೆ. ಆದರೆ, ಚುನಾವಣೆಯಲ್ಲಿ ಯಾವ ಪಕ್ಷವನ್ನು ಪ್ರಮುಖ ಪ್ರತಿಸ್ಪರ್ಧಿಯಾಗಿ ಪರಿಗಣಿಸಬೇಕು– ಬಿಜೆಪಿಯೇ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷವೇ ಎಂಬ ಗೊಂದಲ ಎಡರಂಗವನ್ನು ಕಾಡುತ್ತಿದೆ. ಈ ವಿಚಾರದಲ್ಲಿ ಮುಖಂಡರಲ್ಲಿ ಭಿನ್ನಾಭಿಪ್ರಾಯವೂ ಕಾಣಿಸಿಕೊಂಡಿದೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>‘ಬಿಜೆಪಿಯೇ ದೊಡ್ಡ ಅಪಾಯ’, ಹಾಗಾಗಿ, ಎಡಪಕ್ಷಗಳು ಬಿಜೆಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಬೇಕೇ ವಿನಾ ಟಿಎಂಸಿಯನ್ನು ಅಲ್ಲ ಎಂದು ಸಿಪಿಐ (ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳುತ್ತಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಈ ವಾದವನ್ನು ಒಪ್ಪುವುದಿಲ್ಲ. ಬಿಜೆಪಿಯನ್ನಷ್ಟೇ ಗುರಿ ಮಾಡಿಕೊಂಡರೆ, ಆಡಳಿತವಿರೋಧಿ ಮತಗಳೆಲ್ಲವೂ ಬಿಜೆಪಿಯ ಪಾಲಾಗುತ್ತದೆ. ಇದರಿಂದ ಬಿಜೆಪಿಗೆ ಅನುಕೂಲವೇ ಆಗುತ್ತದೆ ಎಂಬುದು ಅವರ ಪ್ರತಿಪಾದನೆ.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದಿರುವ ಸಿಪಿಐ(ಎಂಎಲ್), ಬಿಜೆಪಿಯೇ ಪ್ರಧಾನ ಎದುರಾಳಿ ಎನ್ನುತ್ತಿದೆ. ಟಿಎಂಸಿ ಅಥವಾ ಇನ್ನಾವುದೇ ಪಕ್ಷವನ್ನು ಬಿಜೆಪಿಯೊಂದಿಗೆ ಸಮೀಕರಿಸಿ ನೋಡಲಾಗದು ಎಂಬುದು ಭಟ್ಟಾಚಾರ್ಯ ಅವರ ವಾದ.</p>.<p>‘ತ್ರಿಪುರಾ, ಅಸ್ಸಾಂ ಮತ್ತು ಬಿಹಾರದಲ್ಲಿ ಬಿಜೆಪಿ ಹೇಗೆ ಅಧಿಕಾರಕ್ಕೆ ಬಂದಿತು ಎಂಬುದನ್ನು ನೆನಪಿನಲ್ಲಿ ಇರಿಸಿಕೊಳ್ಳಬೇಕು. ಅದನ್ನು ದೃಷ್ಟಿಯಲ್ಲಿ ಇರಿಸಿಕೊಂಡರೆ ಪಶ್ಚಿಮ ಬಂಗಾಳದಲ್ಲಿಯೂ ಬಿಜೆಪಿಯೇ ಪ್ರಮುಖ ಎದುರಾಳಿ ಎಂಬುದು ಅರಿವಾಗುತ್ತದೆ’ ಎಂದು ಭಟ್ಟಾಚಾರ್ಯ ವಿವರಿಸುತ್ತಾರೆ.</p>.<p>‘ಟಿಎಂಸಿಯೂ ಸೇರಿದಂತೆ ಎಲ್ಲ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಬಿಜೆಪಿಯನ್ನು ಸೋಲಿಸಲು ಯತ್ನಿಸುವುದು ಆತ್ಮಹತ್ಯೆಗೆ ಸಮಾನ. ಎಲ್ಲರೂ ಬಿಜೆಪಿಯ ವಿರುದ್ಧ ಒಂದಾದರೆ ಆಡಳಿತ ವಿರೋಧಿ ಮತಗಳೆಲ್ಲವೂ ಬಿಜೆಪಿಗೆ ಸಿಗುತ್ತದೆ. ಏಕೆಂದರೆ, ಬಿಜೆಪಿ ಮಾತ್ರ ಆಗ ವಿರೋಧ ಪಕ್ಷದಂತೆ ಕಾಣಿಸುತ್ತದೆ.<br />ಎಲ್ಲರೂ ಬಿಜೆಪಿಯನ್ನು ವಿರೋಧಿಸುವ ಕಾರ್ಯತಂತ್ರವು ಬಿಜೆಪಿಗೇ ಅನುಕೂಲಕರವಾಗಿ ಪರಿಣಮಿಸಬಹುದು’ ಎಂದು ಸಿಪಿಎಂ ಮುಖವಾಣಿ ‘ಗಣಶಕ್ತಿ’ಗೆ ನೀಡಿದ ಸಂದರ್ಶನದಲ್ಲಿ ಯೆಚೂರಿ ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳ ಮತ್ತು ಇಡೀ ದೇಶದಲ್ಲಿ ಬಿಜೆಪಿಯೇ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿ. ಹಾಗಿದ್ದರೂ, ಟಿಎಂಸಿಯನ್ನು ಎಡಪಕ್ಷಗಳು ಟೀಕಿಸದೇ ಇದ್ದರೆ ಬಿಜೆಪಿಯನ್ನು ಸೋಲಿಸುವ ಉದ್ದೇಶವೇ ಈಡೇರುವುದಿಲ್ಲ ಎಂಬುದು ಅವರ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನೊಂದಿಗೆ ಸೀಟು ಹಂಚಿಕೆ ಮಾತುಕತೆಯನ್ನು ಎಡರಂಗ ಆಗಲೇ ಆರಂಭಿಸಿದೆ. ಆದರೆ, ಚುನಾವಣೆಯಲ್ಲಿ ಯಾವ ಪಕ್ಷವನ್ನು ಪ್ರಮುಖ ಪ್ರತಿಸ್ಪರ್ಧಿಯಾಗಿ ಪರಿಗಣಿಸಬೇಕು– ಬಿಜೆಪಿಯೇ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷವೇ ಎಂಬ ಗೊಂದಲ ಎಡರಂಗವನ್ನು ಕಾಡುತ್ತಿದೆ. ಈ ವಿಚಾರದಲ್ಲಿ ಮುಖಂಡರಲ್ಲಿ ಭಿನ್ನಾಭಿಪ್ರಾಯವೂ ಕಾಣಿಸಿಕೊಂಡಿದೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>‘ಬಿಜೆಪಿಯೇ ದೊಡ್ಡ ಅಪಾಯ’, ಹಾಗಾಗಿ, ಎಡಪಕ್ಷಗಳು ಬಿಜೆಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಬೇಕೇ ವಿನಾ ಟಿಎಂಸಿಯನ್ನು ಅಲ್ಲ ಎಂದು ಸಿಪಿಐ (ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳುತ್ತಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಈ ವಾದವನ್ನು ಒಪ್ಪುವುದಿಲ್ಲ. ಬಿಜೆಪಿಯನ್ನಷ್ಟೇ ಗುರಿ ಮಾಡಿಕೊಂಡರೆ, ಆಡಳಿತವಿರೋಧಿ ಮತಗಳೆಲ್ಲವೂ ಬಿಜೆಪಿಯ ಪಾಲಾಗುತ್ತದೆ. ಇದರಿಂದ ಬಿಜೆಪಿಗೆ ಅನುಕೂಲವೇ ಆಗುತ್ತದೆ ಎಂಬುದು ಅವರ ಪ್ರತಿಪಾದನೆ.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದಿರುವ ಸಿಪಿಐ(ಎಂಎಲ್), ಬಿಜೆಪಿಯೇ ಪ್ರಧಾನ ಎದುರಾಳಿ ಎನ್ನುತ್ತಿದೆ. ಟಿಎಂಸಿ ಅಥವಾ ಇನ್ನಾವುದೇ ಪಕ್ಷವನ್ನು ಬಿಜೆಪಿಯೊಂದಿಗೆ ಸಮೀಕರಿಸಿ ನೋಡಲಾಗದು ಎಂಬುದು ಭಟ್ಟಾಚಾರ್ಯ ಅವರ ವಾದ.</p>.<p>‘ತ್ರಿಪುರಾ, ಅಸ್ಸಾಂ ಮತ್ತು ಬಿಹಾರದಲ್ಲಿ ಬಿಜೆಪಿ ಹೇಗೆ ಅಧಿಕಾರಕ್ಕೆ ಬಂದಿತು ಎಂಬುದನ್ನು ನೆನಪಿನಲ್ಲಿ ಇರಿಸಿಕೊಳ್ಳಬೇಕು. ಅದನ್ನು ದೃಷ್ಟಿಯಲ್ಲಿ ಇರಿಸಿಕೊಂಡರೆ ಪಶ್ಚಿಮ ಬಂಗಾಳದಲ್ಲಿಯೂ ಬಿಜೆಪಿಯೇ ಪ್ರಮುಖ ಎದುರಾಳಿ ಎಂಬುದು ಅರಿವಾಗುತ್ತದೆ’ ಎಂದು ಭಟ್ಟಾಚಾರ್ಯ ವಿವರಿಸುತ್ತಾರೆ.</p>.<p>‘ಟಿಎಂಸಿಯೂ ಸೇರಿದಂತೆ ಎಲ್ಲ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಬಿಜೆಪಿಯನ್ನು ಸೋಲಿಸಲು ಯತ್ನಿಸುವುದು ಆತ್ಮಹತ್ಯೆಗೆ ಸಮಾನ. ಎಲ್ಲರೂ ಬಿಜೆಪಿಯ ವಿರುದ್ಧ ಒಂದಾದರೆ ಆಡಳಿತ ವಿರೋಧಿ ಮತಗಳೆಲ್ಲವೂ ಬಿಜೆಪಿಗೆ ಸಿಗುತ್ತದೆ. ಏಕೆಂದರೆ, ಬಿಜೆಪಿ ಮಾತ್ರ ಆಗ ವಿರೋಧ ಪಕ್ಷದಂತೆ ಕಾಣಿಸುತ್ತದೆ.<br />ಎಲ್ಲರೂ ಬಿಜೆಪಿಯನ್ನು ವಿರೋಧಿಸುವ ಕಾರ್ಯತಂತ್ರವು ಬಿಜೆಪಿಗೇ ಅನುಕೂಲಕರವಾಗಿ ಪರಿಣಮಿಸಬಹುದು’ ಎಂದು ಸಿಪಿಎಂ ಮುಖವಾಣಿ ‘ಗಣಶಕ್ತಿ’ಗೆ ನೀಡಿದ ಸಂದರ್ಶನದಲ್ಲಿ ಯೆಚೂರಿ ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳ ಮತ್ತು ಇಡೀ ದೇಶದಲ್ಲಿ ಬಿಜೆಪಿಯೇ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿ. ಹಾಗಿದ್ದರೂ, ಟಿಎಂಸಿಯನ್ನು ಎಡಪಕ್ಷಗಳು ಟೀಕಿಸದೇ ಇದ್ದರೆ ಬಿಜೆಪಿಯನ್ನು ಸೋಲಿಸುವ ಉದ್ದೇಶವೇ ಈಡೇರುವುದಿಲ್ಲ ಎಂಬುದು ಅವರ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>