<p><strong>ಕೋಲ್ಕತ್ತ</strong>: ಸುಪ್ರೀಂ ಕೋರ್ಟ್ನ ನಿರ್ದೇಶನಗಳಿಗೆ ಅನುಗುಣವಾಗಿ ಶಿಕ್ಷಕರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.</p>.<p>ಇದರ ಜೊತೆಯಲ್ಲೇ, ಉದ್ಯೋಗ ಕಳೆದುಕೊಂಡ ಶಿಕ್ಷಕರ ಮರುನೇಮಕ ಕೋರಿ ಪುನರ್ ಪರಿಶೀಲನಾ ಅರ್ಜಿಗೆ ಸಂಬಂಧಿಸಿದ ಕೆಲಸಗಳನ್ನೂ ಮುಂದುವರಿಸಲಾಗುತ್ತದೆ ಎಂದು ಮಮತಾ ಹೇಳಿದ್ದಾರೆ.</p>.<p>ಕೆಲಸ ಕಳೆದುಕೊಂಡ ಶಿಕ್ಷಕರಿಗೆ ಹೊಸದಾಗಿ ನಡೆಯುವ ನೇಮಕಾತಿ ಸಂದರ್ಭದಲ್ಲಿ ಸೇವಾ ಅನುಭವದ ಪ್ರಯೋಜನ ನೀಡಲಾಗುತ್ತದೆ, ವಯೋಮಿತಿಯಲ್ಲಿ ವಿನಾಯಿತಿ ನೀಡಲಾಗುತ್ತದೆ, ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಮೇ 31ರಂದು ಹೊರಡಿಸಲಾಗುತ್ತದೆ ಎಂದು ಮಮತಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>ಶಾಲಾ ನೇಮಕಾತಿ ಆಯೋಗದ (ಎಸ್ಎಸ್ಸಿ) ಹಗರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪರಿಣಾಮವಾಗಿ ಕೆಲಸ ಕಳೆದುಕೊಂಡ ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಬೃಹತ್ ಪ್ರತಿಭಟನೆ ನಡೆಸಿರುವ ಹೊತ್ತಿನಲ್ಲಿ ಮಮತಾ ಈ ಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಸುಪ್ರೀಂ ಕೋರ್ಟ್ನ ನಿರ್ದೇಶನಗಳಿಗೆ ಅನುಗುಣವಾಗಿ ಶಿಕ್ಷಕರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.</p>.<p>ಇದರ ಜೊತೆಯಲ್ಲೇ, ಉದ್ಯೋಗ ಕಳೆದುಕೊಂಡ ಶಿಕ್ಷಕರ ಮರುನೇಮಕ ಕೋರಿ ಪುನರ್ ಪರಿಶೀಲನಾ ಅರ್ಜಿಗೆ ಸಂಬಂಧಿಸಿದ ಕೆಲಸಗಳನ್ನೂ ಮುಂದುವರಿಸಲಾಗುತ್ತದೆ ಎಂದು ಮಮತಾ ಹೇಳಿದ್ದಾರೆ.</p>.<p>ಕೆಲಸ ಕಳೆದುಕೊಂಡ ಶಿಕ್ಷಕರಿಗೆ ಹೊಸದಾಗಿ ನಡೆಯುವ ನೇಮಕಾತಿ ಸಂದರ್ಭದಲ್ಲಿ ಸೇವಾ ಅನುಭವದ ಪ್ರಯೋಜನ ನೀಡಲಾಗುತ್ತದೆ, ವಯೋಮಿತಿಯಲ್ಲಿ ವಿನಾಯಿತಿ ನೀಡಲಾಗುತ್ತದೆ, ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಮೇ 31ರಂದು ಹೊರಡಿಸಲಾಗುತ್ತದೆ ಎಂದು ಮಮತಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>ಶಾಲಾ ನೇಮಕಾತಿ ಆಯೋಗದ (ಎಸ್ಎಸ್ಸಿ) ಹಗರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪರಿಣಾಮವಾಗಿ ಕೆಲಸ ಕಳೆದುಕೊಂಡ ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಬೃಹತ್ ಪ್ರತಿಭಟನೆ ನಡೆಸಿರುವ ಹೊತ್ತಿನಲ್ಲಿ ಮಮತಾ ಈ ಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>