<p><strong>ನವದೆಹಲಿ</strong>: ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನಿನ ಖಾತರಿ ನೀಡುವುದರಿಂದ ಸರ್ಕಾರದ ಖಜಾನೆಗೆ ಹೊರೆಯಾಗುವುದಿಲ್ಲ. ಬದಲಿಗೆ ರೈತರಿಂದ ದೇಶದ ಜಿಡಿಪಿ ಬೆಳವಣಿಗೆಯಾತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.</p><p>ಈ ಕುರಿತಂತೆ ಎಕ್ಸ್ನಲ್ಲಿ ಬರೆದುಕೊಂಡಿರುವ ರಾಹುಲ್, ‘ಎಂಎಸ್ಪಿಗೆ ಕಾನೂನಿನ ಖಾತರಿ ನೀಡುವುದು ಕಾರ್ಯಸಾಧುವಲ್ಲ ಎಂಬ ಸುಳ್ಳನ್ನು ಮೋದಿ ಬೆಂಬಲಿತ ಮಾಧ್ಯಮಗಳಿಂದ ಹರಡಲಾಗುತ್ತಿದೆ’ ಎಂದು ಕಿಡಿಕಾರಿದರು.</p><p>‘ಈ ವಿಷಯದಲ್ಲಿ ಸುಳ್ಳು ಏನೆಂದರೆ ಭಾರತ ಸರ್ಕಾರದ ಬಜೆಟ್ನಲ್ಲಿ ಎಂಎಸ್ಪಿಗೆ ಕಾನೂನು ಖಾತರಿ ನೀಡುವುದು ಕಾರ್ಯಸಾಧ್ಯವಲ್ಲ. ಸತ್ಯವೆಂದರೆ ಸಿಆರ್ಐಎಸ್ಐಎಲ್ ಪ್ರಕಾರ ಎಂಎಸ್ಪಿಗೆ ಕಾನೂನಿನ ಖಾತರಿ ನೀಡಿದರೆ ₹21,000 ಕೋಟಿ ಹೆಚ್ಚುವರಿ ಹೊರೆ ಬೀಳುತ್ತದೆ. ಆದರೆ ಇದು ಸರ್ಕಾರದ ಒಟ್ಟು ಬಜೆಟ್ನ ಶೇ.0.4ರಷ್ಟು ಮಾತ್ರ’ ಎಂದು ತಿಳಿಸಿದ್ದಾರೆ.</p><p>‘₹14 ಲಕ್ಷ ಕೋಟಿ ಮೌಲ್ಯದ ಬ್ಯಾಂಕ್ ಸಾಲ ಮನ್ನಾ ಮಾಡಿ, ₹1.8 ಲಕ್ಷ ಕೋಟಿ ಕಾರ್ಪೊರೇಟ್ ತೆರಿಗೆ ವಿನಾಯಿತಿ ನೀಡಿರುವ ಕೇಂದ್ರ ಸರ್ಕಾರಕ್ಕೆ ರೈತರ ಬೇಡಿಕೆ ಹೊರೆಯೆಂದು ಯಾಕೆ ಅನಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.</p><p>‘ಎಂಎಸ್ಪಿಗೆ ಕಾನೂನಿನ ಖಾತರಿ ನೀಡುವುದರಿಂದ ಕೃಷಿಯಲ್ಲಿ ಹೂಡಿಕೆ ಹೆಚ್ಚಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಆ ಮೂಲಕ ವಿವಿಧ ಬಗೆಯ ಬೆಳೆಗಳನ್ನು ಬೆಳೆಯುವುದಕ್ಕೆ ರೈತರಿಗೆ ವಿಶ್ವಾಸ ಮೂಡುತ್ತದೆ’ ಎಂದು ಹೇಳಿದರು.</p><p>‘ಎಂಎಸ್ಪಿ ಬಗ್ಗೆ ಸುಳ್ಳನ್ನು ಹರಡುತ್ತಿರುವವರು ಡಾ. ಸ್ವಾಮಿನಾಥನ್ ಮತ್ತು ಅವರ ಕನಸುಗಳನ್ನು ಅವಮಾನಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.</p><p>ಇದರೊಂದಿಗೆ, ಸ್ವಾಮಿನಾಥನ್ ವರದಿ ಆಧರಿಸಿ ರೈತರ ಬೆಳೆಗಳಿಗೆ ದರವನ್ನು ನಿಗದಿಮಾಡುವ ಪಕ್ಷದ ಸಂಕಲ್ಪ ಕುರಿತು ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮೋದಿ ಮಾತನಾಡಿರುವ ವಿಡಿಯೊವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನಿನ ಖಾತರಿ ನೀಡುವುದರಿಂದ ಸರ್ಕಾರದ ಖಜಾನೆಗೆ ಹೊರೆಯಾಗುವುದಿಲ್ಲ. ಬದಲಿಗೆ ರೈತರಿಂದ ದೇಶದ ಜಿಡಿಪಿ ಬೆಳವಣಿಗೆಯಾತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.</p><p>ಈ ಕುರಿತಂತೆ ಎಕ್ಸ್ನಲ್ಲಿ ಬರೆದುಕೊಂಡಿರುವ ರಾಹುಲ್, ‘ಎಂಎಸ್ಪಿಗೆ ಕಾನೂನಿನ ಖಾತರಿ ನೀಡುವುದು ಕಾರ್ಯಸಾಧುವಲ್ಲ ಎಂಬ ಸುಳ್ಳನ್ನು ಮೋದಿ ಬೆಂಬಲಿತ ಮಾಧ್ಯಮಗಳಿಂದ ಹರಡಲಾಗುತ್ತಿದೆ’ ಎಂದು ಕಿಡಿಕಾರಿದರು.</p><p>‘ಈ ವಿಷಯದಲ್ಲಿ ಸುಳ್ಳು ಏನೆಂದರೆ ಭಾರತ ಸರ್ಕಾರದ ಬಜೆಟ್ನಲ್ಲಿ ಎಂಎಸ್ಪಿಗೆ ಕಾನೂನು ಖಾತರಿ ನೀಡುವುದು ಕಾರ್ಯಸಾಧ್ಯವಲ್ಲ. ಸತ್ಯವೆಂದರೆ ಸಿಆರ್ಐಎಸ್ಐಎಲ್ ಪ್ರಕಾರ ಎಂಎಸ್ಪಿಗೆ ಕಾನೂನಿನ ಖಾತರಿ ನೀಡಿದರೆ ₹21,000 ಕೋಟಿ ಹೆಚ್ಚುವರಿ ಹೊರೆ ಬೀಳುತ್ತದೆ. ಆದರೆ ಇದು ಸರ್ಕಾರದ ಒಟ್ಟು ಬಜೆಟ್ನ ಶೇ.0.4ರಷ್ಟು ಮಾತ್ರ’ ಎಂದು ತಿಳಿಸಿದ್ದಾರೆ.</p><p>‘₹14 ಲಕ್ಷ ಕೋಟಿ ಮೌಲ್ಯದ ಬ್ಯಾಂಕ್ ಸಾಲ ಮನ್ನಾ ಮಾಡಿ, ₹1.8 ಲಕ್ಷ ಕೋಟಿ ಕಾರ್ಪೊರೇಟ್ ತೆರಿಗೆ ವಿನಾಯಿತಿ ನೀಡಿರುವ ಕೇಂದ್ರ ಸರ್ಕಾರಕ್ಕೆ ರೈತರ ಬೇಡಿಕೆ ಹೊರೆಯೆಂದು ಯಾಕೆ ಅನಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.</p><p>‘ಎಂಎಸ್ಪಿಗೆ ಕಾನೂನಿನ ಖಾತರಿ ನೀಡುವುದರಿಂದ ಕೃಷಿಯಲ್ಲಿ ಹೂಡಿಕೆ ಹೆಚ್ಚಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಆ ಮೂಲಕ ವಿವಿಧ ಬಗೆಯ ಬೆಳೆಗಳನ್ನು ಬೆಳೆಯುವುದಕ್ಕೆ ರೈತರಿಗೆ ವಿಶ್ವಾಸ ಮೂಡುತ್ತದೆ’ ಎಂದು ಹೇಳಿದರು.</p><p>‘ಎಂಎಸ್ಪಿ ಬಗ್ಗೆ ಸುಳ್ಳನ್ನು ಹರಡುತ್ತಿರುವವರು ಡಾ. ಸ್ವಾಮಿನಾಥನ್ ಮತ್ತು ಅವರ ಕನಸುಗಳನ್ನು ಅವಮಾನಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.</p><p>ಇದರೊಂದಿಗೆ, ಸ್ವಾಮಿನಾಥನ್ ವರದಿ ಆಧರಿಸಿ ರೈತರ ಬೆಳೆಗಳಿಗೆ ದರವನ್ನು ನಿಗದಿಮಾಡುವ ಪಕ್ಷದ ಸಂಕಲ್ಪ ಕುರಿತು ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮೋದಿ ಮಾತನಾಡಿರುವ ವಿಡಿಯೊವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>