<p><strong>ಮುಂಬೈ</strong>: ‘ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಶೇಕಡಾ 40ರಷ್ಟು ಬೆಳೆಗೆ ಹಾನಿಯಾಗಿದೆ. ಹಾನಿ ಪ್ರಮಾಣದ ಮರಶೀಲನೆ ಮುಂದುವರಿದಿದೆ’ ಎಂದು ಕಂದಾಯ ಸಚಿವ ಚಂದ್ರಶೇಖರ್ ಬಾವಂಕುಲೆ ತಿಳಿಸಿದ್ದಾರೆ.</p>.<p>ಕಳೆದ ವಾರ ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯಿಂದ ಮರಾಠವಾಡ ಪ್ರಾಂತ್ಯದ ಸೋಲಾಪುರ, ಸತಾರಾ ಹಾಗೂ ಸಾಂಗ್ಲಿ ಸೇರಿದಂತೆ 8 ಜಿಲ್ಲೆಗಳಲ್ಲಿ ಬೆಳೆಹಾನಿ ಸಂಭವಿಸಿದೆ. ಇದರಿಂದ, ಲಕ್ಷಾಂತರ ಎಕರೆಯಲ್ಲಿ ಬೆಳೆದಿದ್ದ ಬೆಳೆಯು ಸಂಪೂರ್ಣವಾಗಿ ನಾಶಗೊಂಡಿದೆ.</p>.<p>‘ಅಕ್ಟೋಬರ್ 5ರ ವೇಳೆಗೆ ಇಡೀ ರಾಜ್ಯದ ಹಾನಿಯ ಪರಿಶೀಲನೆ ಮುಕ್ತಾಯಗೊಳ್ಳಲಿದೆ. ಇದಾದ ಬಳಿಕ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ ಶಿಂದೆ, ಅಜಿತ್ ಪವಾರ್ ಅವರು ಸಭೆ ನಡೆಸಿ, ಆರ್ಥಿಕ ನೆರವು ಘೋಷಿಸಲಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಕೆಲವು ಪ್ರದೇಶಗಳಿಗೆ ಇನ್ನೂ ಯಾರೂ ತಲುಪಲಾಗಿಲ್ಲ. ಹಾನಿಪೀಡಿತ ಪ್ರದೇಶಗಳಿಗೆ ತೆರಳಿ, ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಶೇಕಡಾ 40ರಷ್ಟು ಬೆಳೆಯು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿ, ಹಾನಿಯಾಗಿದೆ’ ಎಂದು ಸಚಿವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಶೇಕಡಾ 40ರಷ್ಟು ಬೆಳೆಗೆ ಹಾನಿಯಾಗಿದೆ. ಹಾನಿ ಪ್ರಮಾಣದ ಮರಶೀಲನೆ ಮುಂದುವರಿದಿದೆ’ ಎಂದು ಕಂದಾಯ ಸಚಿವ ಚಂದ್ರಶೇಖರ್ ಬಾವಂಕುಲೆ ತಿಳಿಸಿದ್ದಾರೆ.</p>.<p>ಕಳೆದ ವಾರ ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯಿಂದ ಮರಾಠವಾಡ ಪ್ರಾಂತ್ಯದ ಸೋಲಾಪುರ, ಸತಾರಾ ಹಾಗೂ ಸಾಂಗ್ಲಿ ಸೇರಿದಂತೆ 8 ಜಿಲ್ಲೆಗಳಲ್ಲಿ ಬೆಳೆಹಾನಿ ಸಂಭವಿಸಿದೆ. ಇದರಿಂದ, ಲಕ್ಷಾಂತರ ಎಕರೆಯಲ್ಲಿ ಬೆಳೆದಿದ್ದ ಬೆಳೆಯು ಸಂಪೂರ್ಣವಾಗಿ ನಾಶಗೊಂಡಿದೆ.</p>.<p>‘ಅಕ್ಟೋಬರ್ 5ರ ವೇಳೆಗೆ ಇಡೀ ರಾಜ್ಯದ ಹಾನಿಯ ಪರಿಶೀಲನೆ ಮುಕ್ತಾಯಗೊಳ್ಳಲಿದೆ. ಇದಾದ ಬಳಿಕ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ ಶಿಂದೆ, ಅಜಿತ್ ಪವಾರ್ ಅವರು ಸಭೆ ನಡೆಸಿ, ಆರ್ಥಿಕ ನೆರವು ಘೋಷಿಸಲಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಕೆಲವು ಪ್ರದೇಶಗಳಿಗೆ ಇನ್ನೂ ಯಾರೂ ತಲುಪಲಾಗಿಲ್ಲ. ಹಾನಿಪೀಡಿತ ಪ್ರದೇಶಗಳಿಗೆ ತೆರಳಿ, ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಶೇಕಡಾ 40ರಷ್ಟು ಬೆಳೆಯು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿ, ಹಾನಿಯಾಗಿದೆ’ ಎಂದು ಸಚಿವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>