<p><strong>ಶ್ರೀನಗರ</strong>: ಲೇಹ್ನಲ್ಲಿ ವಿಧಿಸಿದ್ದ ಒಂದು ವಾರದ ಕರ್ಫ್ಯೂ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.</p><p>ಲಡಾಖ್ಗೆ 6ನೇ ಪರಿಚ್ಛೇದದ ಮತ್ತು ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಲೇಹ್ನಲ್ಲಿ ಸೆಪ್ಟೆಂಬರ್ 24ರಂದು ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ನಾಲ್ವರು ಮೃತಪಟ್ಟ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಲಡಾಖ್ನ ಆಡಳಿತ ಆದೇಶಿಸಿದೆ.</p><p>ನುಬ್ರಾದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಮುಕುಲ್ ಬೆನಿವಾಲ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದ್ದು, ನಾಲ್ಕು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ, ಪೊಲೀಸರ ಕ್ರಮ, ಸಾವು–ನೋವುಗಳಿಗೆ ಕಾರಣವಾದ ಸಂಗತಿಗಳ ಕುರಿತು ತನಿಖೆ ನಡೆಸಲಾಗುತ್ತದೆ.</p><p>ಘಟನೆ ಕುರಿತು ಮಾಹಿತಿ ಹೊಂದಿರುವ ಅಥವಾ ಮೌಖಿಕ ಸಾಕ್ಷ್ಯ, ಲಿಖಿತ ಹೇಳಿಕೆ, ಛಾಯಾಚಿತ್ರ–ವಿಡಿಯೊದಂತಹ ಪುರಾವೆಗಳನ್ನು ಹೊಂದಿರುವ ಯಾವುದೇ ವ್ಯಕ್ತಿಯು ಲೇಹ್ನ ಉಪ ಆಯುಕ್ತರ ಕಚೇರಿಯ ಕಾನ್ಫರೆನ್ಸ್ ಹಾಲ್ಗೆ ಅ.4ರಿಂದ 18ರೊಳಗೆ ಭೇಟಿ ನೀಡಿ ಅಗತ್ಯ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಲಡಾಖ್ ಹಿಂಸಾಚಾರ: 3 Idiots ಚಿತ್ರಕ್ಕೆ ಸ್ಫೂರ್ತಿಯಾದ ವಾಂಗ್ಚುಕ್ ಬಂಧನವೇಕೆ?.ಲಡಾಖ್ ಹಿಂಸಾಚಾರಕ್ಕೆ ವಾಂಗ್ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಲೇಹ್ನಲ್ಲಿ ವಿಧಿಸಿದ್ದ ಒಂದು ವಾರದ ಕರ್ಫ್ಯೂ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.</p><p>ಲಡಾಖ್ಗೆ 6ನೇ ಪರಿಚ್ಛೇದದ ಮತ್ತು ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಲೇಹ್ನಲ್ಲಿ ಸೆಪ್ಟೆಂಬರ್ 24ರಂದು ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ನಾಲ್ವರು ಮೃತಪಟ್ಟ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಲಡಾಖ್ನ ಆಡಳಿತ ಆದೇಶಿಸಿದೆ.</p><p>ನುಬ್ರಾದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಮುಕುಲ್ ಬೆನಿವಾಲ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದ್ದು, ನಾಲ್ಕು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ, ಪೊಲೀಸರ ಕ್ರಮ, ಸಾವು–ನೋವುಗಳಿಗೆ ಕಾರಣವಾದ ಸಂಗತಿಗಳ ಕುರಿತು ತನಿಖೆ ನಡೆಸಲಾಗುತ್ತದೆ.</p><p>ಘಟನೆ ಕುರಿತು ಮಾಹಿತಿ ಹೊಂದಿರುವ ಅಥವಾ ಮೌಖಿಕ ಸಾಕ್ಷ್ಯ, ಲಿಖಿತ ಹೇಳಿಕೆ, ಛಾಯಾಚಿತ್ರ–ವಿಡಿಯೊದಂತಹ ಪುರಾವೆಗಳನ್ನು ಹೊಂದಿರುವ ಯಾವುದೇ ವ್ಯಕ್ತಿಯು ಲೇಹ್ನ ಉಪ ಆಯುಕ್ತರ ಕಚೇರಿಯ ಕಾನ್ಫರೆನ್ಸ್ ಹಾಲ್ಗೆ ಅ.4ರಿಂದ 18ರೊಳಗೆ ಭೇಟಿ ನೀಡಿ ಅಗತ್ಯ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಲಡಾಖ್ ಹಿಂಸಾಚಾರ: 3 Idiots ಚಿತ್ರಕ್ಕೆ ಸ್ಫೂರ್ತಿಯಾದ ವಾಂಗ್ಚುಕ್ ಬಂಧನವೇಕೆ?.ಲಡಾಖ್ ಹಿಂಸಾಚಾರಕ್ಕೆ ವಾಂಗ್ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>