<p><strong>ದಾಮನ್:</strong> ಕೇಂದ್ರಾಡಳಿತ ಪ್ರದೇಶ ದಾಮನ್ನಲ್ಲಿ ಬೇಕರಿಗೆ (ಸ್ವೀಟ್ ಸ್ಟಾಲ್) ನುಗ್ಗಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.</p><p>ಸ್ಥಳೀಯ ಪೊಲೀಸರು, ಅರಣ್ಯ ಅಧಿಕಾರಿಗಳು ಹಾಗೂ ಮಹಾರಾಷ್ಟ್ರದ ವಿಶೇಷ ಅರಣ್ಯ ಪಡೆ ಅಧಿಕಾರಿಗಳು ಸತತ 10 ಗಂಟೆಗಳ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. </p><p>ಮಂಗಳವಾರ ಬೆಳಿಗ್ಗೆ 11.30ರ ವೇಳೆಗೆ ನಾನಿ ದಾಮನ್ ಪ್ರದೇಶದ ಮಾರುಕಟ್ಟೆಯಲ್ಲಿರುವ ಬೇಕರಿಗೆ ನುಗ್ಗಿತ್ತು. ತಕ್ಷಣಕ್ಕೆ ಸ್ಥಳೀಯರು ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.</p><p>ತಕ್ಷಣವೇ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದರು. ಈ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯ ಮೆಟ್ಟಿಲಿನ ಬಳಿ ಚಿರತೆ ಕುಳಿತಿರುವುದು ಪತ್ತೆಯಾಯಿತು. ಗನ್ಗಳು ಹಾಗೂ ಬಲೆಯನ್ನು ಬಳಸಿ ಕಾರ್ಯಾಚರಣೆ ನಡೆಸಿತು. ಆದರೆ ಚಿರತೆ ಆಕ್ರಮಣಕಾರಿಯಾಗಿ ಹಲವು ಬಾರಿ ಅರಣ್ಯ ಸಿಬ್ಬಂದಿಯ ಮೇಲೆ ದಾಳಿ ಮಾಡಿತು. ಈ ವೇಳೆ ಕೆಲ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.</p><p>ಪರಿಸ್ಥಿತಿಯ ಗಂಭೀರತೆ ತಿಳಿದು ಮಹಾರಾಷ್ಟ್ರದ ವಿಶೇಷ ಅರಣ್ಯ ಪಡೆಯನ್ನು ಕರೆಸಲಾಯಿತು. ಸತತ 10 ಗಂಟೆಗಳ ಕಾರ್ಯಾಚರಣೆ ನಂತರ ಚಿರತೆಯನ್ನು ಸೆರೆ ಹಿಡಿಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ದಾಮನ್ ನಗರದಲ್ಲಿ ಎರಡು ದಿನಗಳ ಹಿಂದೆ ಚಿರತೆಯೊಂದು ಕಾಣಿಸಿಕೊಂಡಿತ್ತು. ಸೋಮವಾರ ರಾತ್ರಿ ಇಲ್ಲಿನ ಧೋಬಿ ತಲಾವ್ ಬಳಿಯೂ ಚಿರತೆ ಕಂಡುಬಂದಿತ್ತು. ಈಗ ಸೆರೆ ಹಿಡಿದಿರುವ ಚಿರತೆ ಇದೆ ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಮನ್:</strong> ಕೇಂದ್ರಾಡಳಿತ ಪ್ರದೇಶ ದಾಮನ್ನಲ್ಲಿ ಬೇಕರಿಗೆ (ಸ್ವೀಟ್ ಸ್ಟಾಲ್) ನುಗ್ಗಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.</p><p>ಸ್ಥಳೀಯ ಪೊಲೀಸರು, ಅರಣ್ಯ ಅಧಿಕಾರಿಗಳು ಹಾಗೂ ಮಹಾರಾಷ್ಟ್ರದ ವಿಶೇಷ ಅರಣ್ಯ ಪಡೆ ಅಧಿಕಾರಿಗಳು ಸತತ 10 ಗಂಟೆಗಳ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. </p><p>ಮಂಗಳವಾರ ಬೆಳಿಗ್ಗೆ 11.30ರ ವೇಳೆಗೆ ನಾನಿ ದಾಮನ್ ಪ್ರದೇಶದ ಮಾರುಕಟ್ಟೆಯಲ್ಲಿರುವ ಬೇಕರಿಗೆ ನುಗ್ಗಿತ್ತು. ತಕ್ಷಣಕ್ಕೆ ಸ್ಥಳೀಯರು ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.</p><p>ತಕ್ಷಣವೇ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದರು. ಈ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯ ಮೆಟ್ಟಿಲಿನ ಬಳಿ ಚಿರತೆ ಕುಳಿತಿರುವುದು ಪತ್ತೆಯಾಯಿತು. ಗನ್ಗಳು ಹಾಗೂ ಬಲೆಯನ್ನು ಬಳಸಿ ಕಾರ್ಯಾಚರಣೆ ನಡೆಸಿತು. ಆದರೆ ಚಿರತೆ ಆಕ್ರಮಣಕಾರಿಯಾಗಿ ಹಲವು ಬಾರಿ ಅರಣ್ಯ ಸಿಬ್ಬಂದಿಯ ಮೇಲೆ ದಾಳಿ ಮಾಡಿತು. ಈ ವೇಳೆ ಕೆಲ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.</p><p>ಪರಿಸ್ಥಿತಿಯ ಗಂಭೀರತೆ ತಿಳಿದು ಮಹಾರಾಷ್ಟ್ರದ ವಿಶೇಷ ಅರಣ್ಯ ಪಡೆಯನ್ನು ಕರೆಸಲಾಯಿತು. ಸತತ 10 ಗಂಟೆಗಳ ಕಾರ್ಯಾಚರಣೆ ನಂತರ ಚಿರತೆಯನ್ನು ಸೆರೆ ಹಿಡಿಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ದಾಮನ್ ನಗರದಲ್ಲಿ ಎರಡು ದಿನಗಳ ಹಿಂದೆ ಚಿರತೆಯೊಂದು ಕಾಣಿಸಿಕೊಂಡಿತ್ತು. ಸೋಮವಾರ ರಾತ್ರಿ ಇಲ್ಲಿನ ಧೋಬಿ ತಲಾವ್ ಬಳಿಯೂ ಚಿರತೆ ಕಂಡುಬಂದಿತ್ತು. ಈಗ ಸೆರೆ ಹಿಡಿದಿರುವ ಚಿರತೆ ಇದೆ ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>