<p><strong>ಮುಂಬೈ: </strong>ಪುಣೆ ಜಿಲ್ಲೆಯ ಜುನ್ನಾರ್ನ ಬಲ್ಲಾಲ್ವಾಡಿ ಗ್ರಾಮದಲ್ಲಿ 70 ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ವೈಲ್ಡ್ ಲೈಫ್ ಎಸ್ಒಎಸ್ ಸಂಸ್ಥೆಯ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಶನಿವಾರ ರಕ್ಷಣೆ ಮಾಡಿದ್ದಾರೆ.</p>.<p>ಅಂದಾಜು ಒಂದು ವರ್ಷ ವಯಸ್ಸಿನ ಗಂಡು ಚಿರತೆ ಈಗ ವೈದ್ಯಕೀಯ ಚಿಕಿತ್ಸೆ ನಿರೀಕ್ಷಣೆಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಲದ ಸಮೀಪದ ಬಾವಿಗೆ ಚಿರತೆ ಬಿದ್ದಿರುವುದನ್ನು ಬಲ್ಲಾಲ್ವಾಡಿ ಗ್ರಾಮದ ರೈತರೊಬ್ಬರು ಗಮನಿಸಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ತಲುಪಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾವಿಯೊಳಗೆ ಪಂಜರವನ್ನು ಇಳಿಸಿ ಅದರಲ್ಲಿ ಚಿರತೆಯನ್ನು ಸೆರೆಹಿಡಿದು ಮೇಲಕ್ಕೆತ್ತಿದ್ದಾರೆ.</p>.<p>ಚಿರತೆಯನ್ನು ಕೆಲ ದಿನಗಳವರೆಗೆ ಚಿರತೆ ಸಂರಕ್ಷಣಾ ಕೇಂದ್ರದಲ್ಲಿ ಇರಿಸಿ, ಬಳಿಕ ಕಾಡಿಗೆ ಬಿಡಲಾಗುವುದು ಎಂದು ವೈಲ್ಡ್ ಲೈಫ್ ಎಸ್ಒಎಸ್ನ ಪಶು ವೈದ್ಯಾಧಿಕಾರಿ ಡಾ. ನಿಖಿಲ್ ಬಂಗರ್ ತಿಳಿಸಿದ್ದಾರೆ.<br />ಚಿರತೆಯನ್ನು ಬಾವಿಯಿಂದ ಮೇಲಕ್ಕೆತ್ತುವ ಕಾರ್ಯಾಚರಣೆಯನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಪುಣೆ ಜಿಲ್ಲೆಯ ಜುನ್ನಾರ್ನ ಬಲ್ಲಾಲ್ವಾಡಿ ಗ್ರಾಮದಲ್ಲಿ 70 ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ವೈಲ್ಡ್ ಲೈಫ್ ಎಸ್ಒಎಸ್ ಸಂಸ್ಥೆಯ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಶನಿವಾರ ರಕ್ಷಣೆ ಮಾಡಿದ್ದಾರೆ.</p>.<p>ಅಂದಾಜು ಒಂದು ವರ್ಷ ವಯಸ್ಸಿನ ಗಂಡು ಚಿರತೆ ಈಗ ವೈದ್ಯಕೀಯ ಚಿಕಿತ್ಸೆ ನಿರೀಕ್ಷಣೆಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಲದ ಸಮೀಪದ ಬಾವಿಗೆ ಚಿರತೆ ಬಿದ್ದಿರುವುದನ್ನು ಬಲ್ಲಾಲ್ವಾಡಿ ಗ್ರಾಮದ ರೈತರೊಬ್ಬರು ಗಮನಿಸಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ತಲುಪಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾವಿಯೊಳಗೆ ಪಂಜರವನ್ನು ಇಳಿಸಿ ಅದರಲ್ಲಿ ಚಿರತೆಯನ್ನು ಸೆರೆಹಿಡಿದು ಮೇಲಕ್ಕೆತ್ತಿದ್ದಾರೆ.</p>.<p>ಚಿರತೆಯನ್ನು ಕೆಲ ದಿನಗಳವರೆಗೆ ಚಿರತೆ ಸಂರಕ್ಷಣಾ ಕೇಂದ್ರದಲ್ಲಿ ಇರಿಸಿ, ಬಳಿಕ ಕಾಡಿಗೆ ಬಿಡಲಾಗುವುದು ಎಂದು ವೈಲ್ಡ್ ಲೈಫ್ ಎಸ್ಒಎಸ್ನ ಪಶು ವೈದ್ಯಾಧಿಕಾರಿ ಡಾ. ನಿಖಿಲ್ ಬಂಗರ್ ತಿಳಿಸಿದ್ದಾರೆ.<br />ಚಿರತೆಯನ್ನು ಬಾವಿಯಿಂದ ಮೇಲಕ್ಕೆತ್ತುವ ಕಾರ್ಯಾಚರಣೆಯನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>