ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕರ ತಾಣದ ಮೇಲೆ ದಾಳಿ ನಡೆಸಿದ್ದ ತನಿಖಾ ಸಂಸ್ಥೆಗಳು ಐವರನ್ನು ಬಂಧಿಸಿತ್ತು. ಅಲ್ಲಿ ಎಕೆ ರೈಫಲ್ಗಳು ಸೇರಿದಂತೆ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಆರೋಪಿ ರಿಯಾಜ್ ತಪ್ಪಿಸಿಕೊಂಡು ದೆಹಲಿಗೆ ಬಂದಿರುವುದಾಗಿ ತನಿಖಾ ಸಂಸ್ಥೆಗಳಿಂದ ಭಾನುವಾರ ಮಾಹಿತಿ ಬಂದ ಕೂಡಲೇ, ಆತನನ್ನು ಪತ್ತೆ ಮಾಡಿ ಬಂಧಿಸಲಾಯಿತು ಎಂದು ತಿಳಿಸಿದ್ದಾರೆ.