ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಜಲ ದಿನ | ನೀರಿನ ಸಂರಕ್ಷಣೆಗೆ ಪ್ರತಿಜ್ಞೆ ಮಾಡಿ: ಪ್ರಧಾನಿ ನರೇಂದ್ರ ಮೋದಿ

ನೀರಿನ ಸಂರಕ್ಷಣೆಯಲ್ಲಿ ತೊಡಗಿದವರ ಬಗ್ಗೆ ಮೆಚ್ಚುಗೆ
Last Updated 22 ಮಾರ್ಚ್ 2022, 10:58 IST
ಅಕ್ಷರ ಗಾತ್ರ

ನವದೆಹಲಿ: 'ವಿಶ್ವ ಜಲ ದಿನ'ದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ನೀರಿನ ಪ್ರತಿಯೊಂದು ಹನಿಯನ್ನು ಉಳಿಸಬೇಕೆಂಬ ತಮ್ಮ ಕರೆಯನ್ನು ಪುನರುಚ್ಚರಿಸಿದ್ದಾರೆ.

ಮಂಗಳವಾರ ಮಾತನಾಡಿದ ಅವರು, 'ಕಳೆದ ಕೆಲವು ವರ್ಷಗಳಿಂದ ನೀರಿನ ಸಂರಕ್ಷಣೆಯು ಸಾಮೂಹಿಕ ಆಂದೋಲನವಾಗುತ್ತಿದೆ.

ವಿಶ್ವ ಜಲ ದಿನವಾದ ಇಂದು ನಾವೆಲ್ಲರೂ ನೀರಿನ ಪ್ರತಿಯೊಂದು ಹನಿಯನ್ನು ರಕ್ಷಿಸುವ ಶಪಥ ಮಾಡೋಣ. ದೇಶದ ಪ್ರತಿಯೊಬ್ಬ ನಾಗರಿಕರಿಗೆ ಶುದ್ಧ ನೀರಿನ ಪೂರೈಕೆ ಹಾಗೂ ನೀರಿನ ಸಂರಕ್ಷಣೆ ಸಲುವಾಗಿ 'ಜಲ ಜೀವನ ಮಿಷನ್' ಸೇರಿದಂತೆ ಹಲವು ಯೋಜನೆಗಳನ್ನು ಭಾರತ ಸರ್ಕಾರ ಕೈಗೊಂಡಿದೆ' ಎಂದು ಹೇಳಿದ್ದಾರೆ.

ಅಲ್ಲದೆ ನೀರಿನ ಸಂರಕ್ಷಣೆಯಲ್ಲಿ ತೊಡಗಿದ ದೇಶದ ನಾಗರಿಕರು ಹಾಗೂ ಸಂಘ-ಸಂಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT