<p><strong>ನವದೆಹಲಿ</strong>: ಬಜೆಟ್ ಅಧಿವೇಶನದ ಆರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಬಿಜೆಪಿಯ ಏಳು ಶಾಸಕರಿಗೆ ದೆಹಲಿ ಹೈಕೋರ್ಟ್ ವಿಧಾನಸಭೆಯ ಅಧ್ಯಕ್ಷರನ್ನು ಭೇಟಿಯಾಗುವಂತೆ ಸೂಚಿಸಿದೆ. </p>.<p>ಶಾಸಕರ ಪರ ವಕೀಲ ಜಯಂತ್ ಮೆಹ್ತಾ ಶಾಸಕರು ಕ್ಷಮೆ ಕೋರಿ ಎಲ್ಜಿ ವಿ.ಕೆ.ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ಅವರು ಕ್ಷಮೆ ಅಂಗೀಕರಿಸಿರುವುದಾಗಿ ಹೈಕೋರ್ಟ್ಗೆ ತಿಳಿಸಿದ ನಂತರ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಈ ಸೂಚನೆ ನೀಡಿದರು. </p>.<p>‘ನಾವು ತಪ್ಪು ಮಾಡಿದ್ದೇವೆ ಎಂದು ಭಾವಿಸುವುದಿಲ್ಲವಾದರೂ, ಅದು ಕ್ಷಮಾಪಣಾ ಪತ್ರವಾಗಿತ್ತು’ ಎಂದು ಶಾಸಕರ ಪರ ವಕೀಲರು ಹೇಳಿದರು.</p>.<p>‘ಶಾಸಕರಾಗಿ ವಿಧಾನಸಭೆಯ ಅಧ್ಯಕ್ಷರನ್ನು ಭೇಟಿಯಾಗುವುದು ನಮಗೆ ಕಷ್ಟವೇನಲ್ಲ. ಆದರೆ, ನಮ್ಮ ಕಳವಳ ಮತ್ತು ನೋವು ಇರುವುದು ನಮ್ಮ ಮುಂದುವರೆದ ಅಮಾನತಿನ ಬಗ್ಗೆ’ ಎಂದು ಶಾಸಕರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. </p>.<p>ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಜೆಟ್ ಅಧಿವೇಶನದ ಆರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಬಿಜೆಪಿಯ ಏಳು ಶಾಸಕರಿಗೆ ದೆಹಲಿ ಹೈಕೋರ್ಟ್ ವಿಧಾನಸಭೆಯ ಅಧ್ಯಕ್ಷರನ್ನು ಭೇಟಿಯಾಗುವಂತೆ ಸೂಚಿಸಿದೆ. </p>.<p>ಶಾಸಕರ ಪರ ವಕೀಲ ಜಯಂತ್ ಮೆಹ್ತಾ ಶಾಸಕರು ಕ್ಷಮೆ ಕೋರಿ ಎಲ್ಜಿ ವಿ.ಕೆ.ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ಅವರು ಕ್ಷಮೆ ಅಂಗೀಕರಿಸಿರುವುದಾಗಿ ಹೈಕೋರ್ಟ್ಗೆ ತಿಳಿಸಿದ ನಂತರ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಈ ಸೂಚನೆ ನೀಡಿದರು. </p>.<p>‘ನಾವು ತಪ್ಪು ಮಾಡಿದ್ದೇವೆ ಎಂದು ಭಾವಿಸುವುದಿಲ್ಲವಾದರೂ, ಅದು ಕ್ಷಮಾಪಣಾ ಪತ್ರವಾಗಿತ್ತು’ ಎಂದು ಶಾಸಕರ ಪರ ವಕೀಲರು ಹೇಳಿದರು.</p>.<p>‘ಶಾಸಕರಾಗಿ ವಿಧಾನಸಭೆಯ ಅಧ್ಯಕ್ಷರನ್ನು ಭೇಟಿಯಾಗುವುದು ನಮಗೆ ಕಷ್ಟವೇನಲ್ಲ. ಆದರೆ, ನಮ್ಮ ಕಳವಳ ಮತ್ತು ನೋವು ಇರುವುದು ನಮ್ಮ ಮುಂದುವರೆದ ಅಮಾನತಿನ ಬಗ್ಗೆ’ ಎಂದು ಶಾಸಕರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. </p>.<p>ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>