<p><strong>ನವದೆಹಲಿ</strong>: ಕಳೆದ ವರ್ಷ ಒಂಬತ್ತು ದೇವಾಲಯಗಳನ್ನು ಕೆಡವಲು ಎಎಪಿ (ಆಮ್ ಆದ್ಮಿ ಪಕ್ಷ) ಸರ್ಕಾರ ಅನುಮೋದನೆ ನೀಡಿತ್ತು ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಕಚೇರಿ ಪ್ರಕಟಣೆ ತಿಳಿಸಿದೆ.</p>.<p>ದೆಹಲಿ ಮುಖ್ಯಮಂತ್ರಿ ಆತಿಶಿ, ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದ ಬೆನ್ನಲ್ಲೇ ಈ ಆರೋಪ ಬಂದಿದೆ. ಆತಿಶಿ ಬರೆದ ಪತ್ರದಲ್ಲಿ ತಮ್ಮ ಪರಿಧಿಯ 'ಧಾರ್ಮಿಕ ಸಮಿತಿ' ನವೆಂಬರ್ 22ರಂದು ನಡೆದ ಸಭೆಯಲ್ಲಿ ಹಿಂದೂ ದೇವಾಲಯಗಳು, ಬೌದ್ಧ ಪೂಜಾ ಸ್ಥಳಗಳು ಸೇರಿದಂತೆ ನಗರದ ವಿವಿಧೆಡೆ ಇರುವ ಆರು ಧಾರ್ಮಿಕ ಕಟ್ಟಡಗಳನ್ನು ಕೆಡವಲು ನಿರ್ಧರಿಸಲಾಗಿದೆ ಎಂದು ಉಲ್ಲೇಖಿಸಿದ್ದರು.</p><p>ಇದಕ್ಕೆ ಪ್ರತಿಯಾಗಿ ಉತ್ತರ ನೀಡಿರುವ ಗವರ್ನರ್ ಕಚೇರಿ,, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಳೆದ ವರ್ಷ ಫೆಬ್ರುವರಿ 8ರಂದು ದೆಹಲಿಯ ವಿವಿಧ ಭಾಗಗಳಲ್ಲಿರುವ ಒಂಬತ್ತು ದೇವಾಲಯಗಳನ್ನು ಕೆಡವಲು ಶಿಫಾರಸು ಮಾಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p><p>ಕೇಜ್ರಿವಾಲ್ ಮತ್ತು ಆಗಿನ ಗೃಹ ಸಚಿವರಾಗಿದ್ದ ಮನೀಶ್ ಸಿಸೋಡಿಯಾ ಅವರು ದೇವಾಲಯಗಳನ್ನು ಕೆಡವಲು ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿದ್ದರು. ಕರವಾಲ್ ನಗರದ ಏಳು ದೇವಾಲಯಗಳು ಮತ್ತು ಉಸ್ಮಾನ್ಪುರದಲ್ಲಿದ್ದ ಎರಡು ದೇವಾಲಯಗಳನ್ನು ಕೆಡವಲು ಅನುಮೋದಿಸಲಾಗಿತ್ತು ಎಂದು ದಾಖಲೆಗಳನ್ನು ಲಗತ್ತಿಸಿದೆ.</p><p>2016ರಲ್ಲಿ ದೆಹಲಿಯ ವಿವಿಧ ಭಾಗಗಳಲ್ಲಿ ಎಂಟು ದೇವಾಲಯಗಳನ್ನು ಕೆಡವಲು ಅಂದಿನ ಗೃಹ ಸಚಿವ ಸತ್ಯೇಂದ್ರ ಜೈನ್ ಅನುಮೋದನೆ ನೀಡಿದ್ದರು ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ ವರ್ಷ ಒಂಬತ್ತು ದೇವಾಲಯಗಳನ್ನು ಕೆಡವಲು ಎಎಪಿ (ಆಮ್ ಆದ್ಮಿ ಪಕ್ಷ) ಸರ್ಕಾರ ಅನುಮೋದನೆ ನೀಡಿತ್ತು ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಕಚೇರಿ ಪ್ರಕಟಣೆ ತಿಳಿಸಿದೆ.</p>.<p>ದೆಹಲಿ ಮುಖ್ಯಮಂತ್ರಿ ಆತಿಶಿ, ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದ ಬೆನ್ನಲ್ಲೇ ಈ ಆರೋಪ ಬಂದಿದೆ. ಆತಿಶಿ ಬರೆದ ಪತ್ರದಲ್ಲಿ ತಮ್ಮ ಪರಿಧಿಯ 'ಧಾರ್ಮಿಕ ಸಮಿತಿ' ನವೆಂಬರ್ 22ರಂದು ನಡೆದ ಸಭೆಯಲ್ಲಿ ಹಿಂದೂ ದೇವಾಲಯಗಳು, ಬೌದ್ಧ ಪೂಜಾ ಸ್ಥಳಗಳು ಸೇರಿದಂತೆ ನಗರದ ವಿವಿಧೆಡೆ ಇರುವ ಆರು ಧಾರ್ಮಿಕ ಕಟ್ಟಡಗಳನ್ನು ಕೆಡವಲು ನಿರ್ಧರಿಸಲಾಗಿದೆ ಎಂದು ಉಲ್ಲೇಖಿಸಿದ್ದರು.</p><p>ಇದಕ್ಕೆ ಪ್ರತಿಯಾಗಿ ಉತ್ತರ ನೀಡಿರುವ ಗವರ್ನರ್ ಕಚೇರಿ,, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಳೆದ ವರ್ಷ ಫೆಬ್ರುವರಿ 8ರಂದು ದೆಹಲಿಯ ವಿವಿಧ ಭಾಗಗಳಲ್ಲಿರುವ ಒಂಬತ್ತು ದೇವಾಲಯಗಳನ್ನು ಕೆಡವಲು ಶಿಫಾರಸು ಮಾಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p><p>ಕೇಜ್ರಿವಾಲ್ ಮತ್ತು ಆಗಿನ ಗೃಹ ಸಚಿವರಾಗಿದ್ದ ಮನೀಶ್ ಸಿಸೋಡಿಯಾ ಅವರು ದೇವಾಲಯಗಳನ್ನು ಕೆಡವಲು ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿದ್ದರು. ಕರವಾಲ್ ನಗರದ ಏಳು ದೇವಾಲಯಗಳು ಮತ್ತು ಉಸ್ಮಾನ್ಪುರದಲ್ಲಿದ್ದ ಎರಡು ದೇವಾಲಯಗಳನ್ನು ಕೆಡವಲು ಅನುಮೋದಿಸಲಾಗಿತ್ತು ಎಂದು ದಾಖಲೆಗಳನ್ನು ಲಗತ್ತಿಸಿದೆ.</p><p>2016ರಲ್ಲಿ ದೆಹಲಿಯ ವಿವಿಧ ಭಾಗಗಳಲ್ಲಿ ಎಂಟು ದೇವಾಲಯಗಳನ್ನು ಕೆಡವಲು ಅಂದಿನ ಗೃಹ ಸಚಿವ ಸತ್ಯೇಂದ್ರ ಜೈನ್ ಅನುಮೋದನೆ ನೀಡಿದ್ದರು ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>