<p><strong>ನವದೆಹಲಿ</strong>: ದೆಹಲಿ ಸರ್ಕಾರ ನಡೆಸುವ ಮೊಹಲ್ಲಾ ಕ್ಲಿನಿಕ್ಗಳಲ್ಲಿ ಖಾಸಗಿ ಲ್ಯಾಬ್ಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ನಕಲಿ ರೋಗನಿರ್ಣಯ ಪರೀಕ್ಷೆಗಳನ್ನು ಶಿಫಾರಸು ಮಾಡಿದ ಆರೋಪದ ಮೇಲೆ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>‘ಗುಣಮಟ್ಟದ ಪ್ರಮಾಣಿತ ಪರೀಕ್ಷೆಗಳಲ್ಲಿ’ ವಿಫಲವಾದ ಔಷಧಗಳನ್ನು ದೆಹಲಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ ಎಂಬ ಆರೋಪ ಕುರಿತು ಸಿಬಿಐ ತನಿಖೆಗೆ ಸಕ್ಸೇನಾ ಆದೇಶಿಸಿದ್ದರು. ಅದಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.</p><p>"ಕಳೆದ ವರ್ಷ, ಮೊಹಲ್ಲಾ ಕ್ಲಿನಿಕ್ಗಳಿಗೆ ವೈದ್ಯರು ಬರುತ್ತಿಲ್ಲ, ಆದರೂ ಬಂದಿದ್ದಾರೆ ಎಂದು ದಾಖಲಾತಿಯಲ್ಲಿ ತೋರಿಸಲಾಗಿತ್ತು. ವೈದ್ಯರ ಅನುಪಸ್ಥಿತಿಯ ಹೊರತಾಗಿಯೂ ಪರೀಕ್ಷೆಗಳು ಮತ್ತು ಔಷಧಿಗಳನ್ನು ಶಿಫಾರಸು ಮಾಡಲಾಗುತ್ತಿದೆ ಎಂಬುದು ಕಂಡುಬಂದಿತ್ತು. ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಾಗಿದೆ’ಎಂದು ಮೂಲಗಳು ತಿಳಿಸಿವೆ.</p><p>ಈ ಬೆಳವಣಿಗೆಯ ಬಗ್ಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಸರ್ಕಾರ ನಡೆಸುವ ಮೊಹಲ್ಲಾ ಕ್ಲಿನಿಕ್ಗಳಲ್ಲಿ ಖಾಸಗಿ ಲ್ಯಾಬ್ಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ನಕಲಿ ರೋಗನಿರ್ಣಯ ಪರೀಕ್ಷೆಗಳನ್ನು ಶಿಫಾರಸು ಮಾಡಿದ ಆರೋಪದ ಮೇಲೆ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>‘ಗುಣಮಟ್ಟದ ಪ್ರಮಾಣಿತ ಪರೀಕ್ಷೆಗಳಲ್ಲಿ’ ವಿಫಲವಾದ ಔಷಧಗಳನ್ನು ದೆಹಲಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ ಎಂಬ ಆರೋಪ ಕುರಿತು ಸಿಬಿಐ ತನಿಖೆಗೆ ಸಕ್ಸೇನಾ ಆದೇಶಿಸಿದ್ದರು. ಅದಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.</p><p>"ಕಳೆದ ವರ್ಷ, ಮೊಹಲ್ಲಾ ಕ್ಲಿನಿಕ್ಗಳಿಗೆ ವೈದ್ಯರು ಬರುತ್ತಿಲ್ಲ, ಆದರೂ ಬಂದಿದ್ದಾರೆ ಎಂದು ದಾಖಲಾತಿಯಲ್ಲಿ ತೋರಿಸಲಾಗಿತ್ತು. ವೈದ್ಯರ ಅನುಪಸ್ಥಿತಿಯ ಹೊರತಾಗಿಯೂ ಪರೀಕ್ಷೆಗಳು ಮತ್ತು ಔಷಧಿಗಳನ್ನು ಶಿಫಾರಸು ಮಾಡಲಾಗುತ್ತಿದೆ ಎಂಬುದು ಕಂಡುಬಂದಿತ್ತು. ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಾಗಿದೆ’ಎಂದು ಮೂಲಗಳು ತಿಳಿಸಿವೆ.</p><p>ಈ ಬೆಳವಣಿಗೆಯ ಬಗ್ಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>