<p><strong>ನವದೆಹಲಿ:</strong> ‘ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯರು ಹಾಗೂ ಸಲಿಂಗ ಲೈಂಗಿಕ ಒಲವುಳ್ಳ ಪುರುಷರು ರಕ್ತದಾನ ಮಾಡದಂತೆ ನಿರ್ಬಂಧಿಸಿರುವ ನಿಯಮಗಳನ್ನು ಸಡಿಲಗೊಳಿಸಿದರೆ ಅದರಿಂದ ಇತರರಿಗೆ ಹಾನಿಯಾಗುತ್ತದೆ ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಗುರುವಾರ ತಿಳಿಸಿದೆ.</p>.<p>2017ರಲ್ಲಿ ರಾಷ್ಟ್ರೀಯ ರಕ್ತ ವರ್ಗವಣಾ ಮಂಡಳಿಯು (ಎನ್ಬಿಟಿಸಿ) ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯರು ಹಾಗೂ ಸಲಿಂಗ ಲೈಂಗಿಕ ಒಲವುಳ್ಳ ಪುರುಷರು ರಕ್ತದಾನಿಗಳಾಗುವುದನ್ನು ನಿರ್ಬಂಧಿಸಿ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿತ್ತು. ಈ ಮಾರ್ಗಸೂಚಿಗಳು ತಾರತಮ್ಯ ಎಸಗುತ್ತಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. </p>.<p>ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ. ಕಳೆದ ಮೇ ನಲ್ಲಿ ನಡೆದ ವಿಚಾರಣೆ ವೇಳೆ ಮಾರ್ಗಸೂಚಿಗಳ ಸರಳೀಕರಣ ಕುರಿತು ತಜ್ಞರ ಅಭಿಪ್ರಾಯ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತ್ತು.</p>.<p class="bodytext">ಅದರಂತೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು, ‘ತಜ್ಞರು ನಿಯಮಗಳ ಸಡಿಲೀಕರಣದ ವಿರುದ್ಧ ಅಭಿಪ್ರಾಯ ನೀಡಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯರು ಹಾಗೂ ಸಲಿಂಗ ಲೈಂಗಿಕ ಒಲವುಳ್ಳ ಪುರುಷರು ರಕ್ತದಾನ ಮಾಡದಂತೆ ನಿರ್ಬಂಧಿಸಿರುವ ನಿಯಮಗಳನ್ನು ಸಡಿಲಗೊಳಿಸಿದರೆ ಅದರಿಂದ ಇತರರಿಗೆ ಹಾನಿಯಾಗುತ್ತದೆ ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಗುರುವಾರ ತಿಳಿಸಿದೆ.</p>.<p>2017ರಲ್ಲಿ ರಾಷ್ಟ್ರೀಯ ರಕ್ತ ವರ್ಗವಣಾ ಮಂಡಳಿಯು (ಎನ್ಬಿಟಿಸಿ) ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯರು ಹಾಗೂ ಸಲಿಂಗ ಲೈಂಗಿಕ ಒಲವುಳ್ಳ ಪುರುಷರು ರಕ್ತದಾನಿಗಳಾಗುವುದನ್ನು ನಿರ್ಬಂಧಿಸಿ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿತ್ತು. ಈ ಮಾರ್ಗಸೂಚಿಗಳು ತಾರತಮ್ಯ ಎಸಗುತ್ತಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. </p>.<p>ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ. ಕಳೆದ ಮೇ ನಲ್ಲಿ ನಡೆದ ವಿಚಾರಣೆ ವೇಳೆ ಮಾರ್ಗಸೂಚಿಗಳ ಸರಳೀಕರಣ ಕುರಿತು ತಜ್ಞರ ಅಭಿಪ್ರಾಯ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತ್ತು.</p>.<p class="bodytext">ಅದರಂತೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು, ‘ತಜ್ಞರು ನಿಯಮಗಳ ಸಡಿಲೀಕರಣದ ವಿರುದ್ಧ ಅಭಿಪ್ರಾಯ ನೀಡಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>