<p><strong>ಗೊಂಡಾ (ಉತ್ತರ ಪ್ರದೇಶ):</strong> ಮದ್ಯಪಾನಕ್ಕೆ ಹಣ ನೀಡಿಲ್ಲವೆಂದು ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದವನಿಗೆ ಸ್ಥಳೀಯ ನ್ಯಾಯಾಲಯವೊಂದು ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.‘</p>.ಉತ್ತರ ಪ್ರದೇಶ: ನದಿಯಲ್ಲಿ ತಂದೆಯ ಅಸ್ಥಿ ವಿಸರ್ಜಿಸುವಾಗ ಕೊಚ್ಚಿ ಹೋದ ಮಗ. <p>ಪ್ರಕರಣದಲ್ಲಿ ಸುಖಯ್ ಅವರನ್ನು ದೋಷಿ ಎಂದು ಘೋಷಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (III) ರಾಜೇಶ್ ಕುಮಾರ್, ಕಠಿಣ ಜೀವಾವಧಿ ಶಿಕ್ಷೆಯ ಜೊತೆಗೆ ₹ 50 ಸಾವಿರ ದಂಡವನ್ನೂ ವಿಧಿಸಿದ್ದಾರೆ.</p><p>'ಕೋತ್ವಾಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದತ್ತನಗರ ಬೈಸನ್ ಗ್ರಾಮದಲ್ಲಿರುವ ಸ್ವಗೃಹದಲ್ಲಿ ಈಶ್ವರ್ ದೀನ್ ಮಲಗಿದ್ದಾಗ, ಸ್ವಂತ ಮಗನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 2021ರ ಮಾರ್ಚ್ 2ರಂದು ಘಟನೆ ನಡಿದಿದೆ' ಎಂದು ಸರ್ಕಾರಿ ವಕೀಲ ಅಮಿತ್ ಕುಮಾರ್ ಪಾಠಕ್ ತಿಳಿಸಿದ್ದಾರೆ.</p>.Heavy Rain | ಉತ್ತರ ಪ್ರದೇಶ: ಭಾರಿ ಮಳೆಗೆ 16 ಮಂದಿ ಸಾವು, ಜನ ಜೀವನ ಅಸ್ತವ್ಯಸ್ತ.<p>ಮೊದಲು ಮೃತ ಈಶ್ವರ್ ಅವರ ಸೋದರ ಸಂಬಂಧಿ, ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದರು. ತನಿಖೆ ವೇಳೆ ಠಾಣಾಧಿಕಾರಿ ಹಾಗೂ ತನಿಖಾಧಿಕಾರಿ ಸಾಕ್ಷ್ಯಗಳನ್ನು ಸಂಗ್ರಹಿಸಿ ಸುಖಾಯ್ನನ್ನು ಬಂಧಿಸಿದ್ದಾರೆ.</p><p>ಆತ ಬಾಯಿಬಿಟ್ಟ ಬಳಿಕ ಕೃತ್ಯಕ್ಕೆ ಬಳಸಲಾಗಿದ್ದ ಕೊಡಲಿಯನ್ನು ವಶಪಡಿಸಿಕೊಂಡು, ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವೈಜ್ಞಾನಿಕ ಪರಿಶೀಲನೆಗೆ ಕಳುಹಿಸಲಾಗಿತ್ತು ಎಂದು ಪಾಠಕ್ ತಿಳಿಸಿದ್ದಾರೆ.</p><p>ಕುಡಿತದ ದಾಸನಾಗಿದ್ದ ಸುಖಾಯ್, ಹಣಕ್ಕಾಗಿ ಪದೇ ಪದೇ ತಂದೆಯನ್ನು ಪೀಡಿಸುತ್ತಿದ್ದ. ಘಟನೆ ನಡೆದ ದಿನದಂದೂ ಹಣಕ್ಕಾಗಿ ಪೀಡಿಸಿದ್ದ.</p> .ಉತ್ತರ ಪ್ರದೇಶ: ಭೀತಿ ಸೃಷ್ಟಿಸಿದ ‘ಡ್ರೋನ್ ಚೋರ’ರ ವದಂತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೊಂಡಾ (ಉತ್ತರ ಪ್ರದೇಶ):</strong> ಮದ್ಯಪಾನಕ್ಕೆ ಹಣ ನೀಡಿಲ್ಲವೆಂದು ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದವನಿಗೆ ಸ್ಥಳೀಯ ನ್ಯಾಯಾಲಯವೊಂದು ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.‘</p>.ಉತ್ತರ ಪ್ರದೇಶ: ನದಿಯಲ್ಲಿ ತಂದೆಯ ಅಸ್ಥಿ ವಿಸರ್ಜಿಸುವಾಗ ಕೊಚ್ಚಿ ಹೋದ ಮಗ. <p>ಪ್ರಕರಣದಲ್ಲಿ ಸುಖಯ್ ಅವರನ್ನು ದೋಷಿ ಎಂದು ಘೋಷಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (III) ರಾಜೇಶ್ ಕುಮಾರ್, ಕಠಿಣ ಜೀವಾವಧಿ ಶಿಕ್ಷೆಯ ಜೊತೆಗೆ ₹ 50 ಸಾವಿರ ದಂಡವನ್ನೂ ವಿಧಿಸಿದ್ದಾರೆ.</p><p>'ಕೋತ್ವಾಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದತ್ತನಗರ ಬೈಸನ್ ಗ್ರಾಮದಲ್ಲಿರುವ ಸ್ವಗೃಹದಲ್ಲಿ ಈಶ್ವರ್ ದೀನ್ ಮಲಗಿದ್ದಾಗ, ಸ್ವಂತ ಮಗನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 2021ರ ಮಾರ್ಚ್ 2ರಂದು ಘಟನೆ ನಡಿದಿದೆ' ಎಂದು ಸರ್ಕಾರಿ ವಕೀಲ ಅಮಿತ್ ಕುಮಾರ್ ಪಾಠಕ್ ತಿಳಿಸಿದ್ದಾರೆ.</p>.Heavy Rain | ಉತ್ತರ ಪ್ರದೇಶ: ಭಾರಿ ಮಳೆಗೆ 16 ಮಂದಿ ಸಾವು, ಜನ ಜೀವನ ಅಸ್ತವ್ಯಸ್ತ.<p>ಮೊದಲು ಮೃತ ಈಶ್ವರ್ ಅವರ ಸೋದರ ಸಂಬಂಧಿ, ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದರು. ತನಿಖೆ ವೇಳೆ ಠಾಣಾಧಿಕಾರಿ ಹಾಗೂ ತನಿಖಾಧಿಕಾರಿ ಸಾಕ್ಷ್ಯಗಳನ್ನು ಸಂಗ್ರಹಿಸಿ ಸುಖಾಯ್ನನ್ನು ಬಂಧಿಸಿದ್ದಾರೆ.</p><p>ಆತ ಬಾಯಿಬಿಟ್ಟ ಬಳಿಕ ಕೃತ್ಯಕ್ಕೆ ಬಳಸಲಾಗಿದ್ದ ಕೊಡಲಿಯನ್ನು ವಶಪಡಿಸಿಕೊಂಡು, ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವೈಜ್ಞಾನಿಕ ಪರಿಶೀಲನೆಗೆ ಕಳುಹಿಸಲಾಗಿತ್ತು ಎಂದು ಪಾಠಕ್ ತಿಳಿಸಿದ್ದಾರೆ.</p><p>ಕುಡಿತದ ದಾಸನಾಗಿದ್ದ ಸುಖಾಯ್, ಹಣಕ್ಕಾಗಿ ಪದೇ ಪದೇ ತಂದೆಯನ್ನು ಪೀಡಿಸುತ್ತಿದ್ದ. ಘಟನೆ ನಡೆದ ದಿನದಂದೂ ಹಣಕ್ಕಾಗಿ ಪೀಡಿಸಿದ್ದ.</p> .ಉತ್ತರ ಪ್ರದೇಶ: ಭೀತಿ ಸೃಷ್ಟಿಸಿದ ‘ಡ್ರೋನ್ ಚೋರ’ರ ವದಂತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>