<p><strong>ಲಖನೌ:</strong> ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ಉತ್ತರ ಪ್ರದೇಶದಲ್ಲಿ ಕಠಿಣ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. </p>.<p>ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಅಪರಾಧ ಸಾಬೀತಾದರೆ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ₹1 ಕೋಟಿಯಷ್ಟು ದಂಡ ವಿಧಿಸುವ ಕಾಯ್ದೆ ಜಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದ್ದು, ಮಂಗಳವಾರ ನಡೆದ ಸಚಿವ ಸಂಪುಟ ಸಭೆಯು ‘ಉತ್ತರ ಪ್ರದೇಶ ನಾಗರಿಕ ಪರೀಕ್ಷೆಗಳು (ಅಕ್ರಮ ತಡೆ) ಸುಗ್ರೀವಾಜ್ಞೆ–2024’ಕ್ಕೆ ಅನುಮೋದನೆ ನೀಡಿದೆ. </p>.<p>ಪ್ರಸ್ತುತ ವಿಧಾನಸಭಾ ಅಧಿವೇಶನ ನಡೆಯದಿರುವುದರಿಂದ ಕಾಯ್ದೆ ಜಾರಿಗಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಮೂಲಗಳು ಹೇಳಿವೆ. </p>.<p>‘ಸುಗ್ರೀವಾಜ್ಞೆಯ ನಿಯಮಗಳು, ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಗಳು, ಹುದ್ದೆ ಕಾಯಂ ಅಥವಾ ಬಡ್ತಿ ಪರೀಕ್ಷೆಗಳು ಮಾತ್ರವಲ್ಲದೇ ಪದವಿ, ಡಿಪ್ಲೊಮಾ ಹಾಗೂ ಇತರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳಿಗೆ ಅನ್ವಯವಾಗುತ್ತವೆ’ ಎಂದು ಸರ್ಕಾರದ ವಕ್ತಾರರೊಬ್ಬರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ಉತ್ತರ ಪ್ರದೇಶದಲ್ಲಿ ಕಠಿಣ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. </p>.<p>ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಅಪರಾಧ ಸಾಬೀತಾದರೆ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ₹1 ಕೋಟಿಯಷ್ಟು ದಂಡ ವಿಧಿಸುವ ಕಾಯ್ದೆ ಜಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದ್ದು, ಮಂಗಳವಾರ ನಡೆದ ಸಚಿವ ಸಂಪುಟ ಸಭೆಯು ‘ಉತ್ತರ ಪ್ರದೇಶ ನಾಗರಿಕ ಪರೀಕ್ಷೆಗಳು (ಅಕ್ರಮ ತಡೆ) ಸುಗ್ರೀವಾಜ್ಞೆ–2024’ಕ್ಕೆ ಅನುಮೋದನೆ ನೀಡಿದೆ. </p>.<p>ಪ್ರಸ್ತುತ ವಿಧಾನಸಭಾ ಅಧಿವೇಶನ ನಡೆಯದಿರುವುದರಿಂದ ಕಾಯ್ದೆ ಜಾರಿಗಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಮೂಲಗಳು ಹೇಳಿವೆ. </p>.<p>‘ಸುಗ್ರೀವಾಜ್ಞೆಯ ನಿಯಮಗಳು, ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಗಳು, ಹುದ್ದೆ ಕಾಯಂ ಅಥವಾ ಬಡ್ತಿ ಪರೀಕ್ಷೆಗಳು ಮಾತ್ರವಲ್ಲದೇ ಪದವಿ, ಡಿಪ್ಲೊಮಾ ಹಾಗೂ ಇತರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳಿಗೆ ಅನ್ವಯವಾಗುತ್ತವೆ’ ಎಂದು ಸರ್ಕಾರದ ವಕ್ತಾರರೊಬ್ಬರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>