ನ್ಯಾಷನಲ್ ಕಾನ್ಫರೆನ್ಸ್ ಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ 116ನೇ ಜನ್ಮ ದಿನಾಚರಣೆಯಲ್ಲಿ ಪಕ್ಷದ ಯುವ ಘಟಕವನ್ನು ಉದ್ದೇಶಿಸಿ ಮಾತನಾಡಿದ ಅವರು, '11 ತಿಂಗಳು ರೈತರು ಪ್ರತಿಭಟನೆ ನಡೆಸಿದರು. 700ಕ್ಕೂ ಹೆಚ್ಚು ರೈತರು ಮೃತಪಟ್ಟರು. ರೈತರು ತ್ಯಾಗ ಮಾಡಿದಾಗ ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕಾಯಿತು. ಅದೇ ರೀತಿ ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ಕೂಡ ತ್ಯಾಗ ಮಾಡಲು ಸಿದ್ಧರಿರಬೇಕು' ಎಂದರು.