<p><strong>ಕೋಲ್ತತ್ತ:</strong> ಪಶ್ಚಿಮ ಬಂಗಾಳದ ಪ್ರಮುಖ ಆರ್ಕಷಣೆಯಾಗಿದ್ದ ಜನಪ್ರಿಯ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರ ಬೃಹತ್ ಪ್ರತಿಮೆಯನ್ನು ಸುರಕ್ಷತಾ ಕಾರಣಗಳನ್ನು ನೀಡಿ ಸೋಮವಾರ ತೆರವುಗೊಳಿಸಲಾಗಿದೆ.</p><p>ಮೆಸ್ಸಿ ಅವರು ಫಿಫಾ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದಿರುವಂತೆ ಬಿಂಬಿಸುವ 70 ಅಡಿ ಎತ್ತರದ ಈ ಚಿನ್ನದ ಬಣ್ಣದ ಪ್ರತಿಮೆಯನ್ನು ಕ್ರೇನ್ ಮತ್ತು ಹಗ್ಗಗಳನ್ನು ಬಳಸಿ ಕೆಳಗಿಸಲಾಗಿದ್ದು, ನಂತರ ಟ್ರಕ್ನಲ್ಲಿ ಸಾಗಿಸಲಾಗಿದೆ. </p><p>‘ಪ್ರತಿಮೆಯು ಗಾಳಿಗೆ ತೂಗಾಡುತ್ತಿದೆ ಎಂದು ಸ್ಥಳೀಯರು ದೂರಿತ್ತ ನಂತರ ಸೋಮವಾರ ಮಧ್ಯಾಹ್ನ ಅದನ್ನು ತೆರವುಗೊಳಿಸಲಾಯಿತು’ ಎಂದು ಪಶ್ಚಿಮ ಬಂಗಾಳದ ಶಾಸಕ ಶರದ್ವತ್ ಮುಖರ್ಜಿ ಅವರು ತಿಳಿಸಿದ್ದಾರೆ. </p><p>ಸೂಕ್ತ ಸ್ಥಳ ಸಿಗುವವರೆಗೆ ಪ್ರತಿಮೆಯನ್ನು ಸರ್ಕಾರಿ ಗೋದಾಮಿನಲ್ಲಿ ಸಂಗ್ರಹಿಸಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಕಳೆದ ವರ್ಷ ಡಿಸೆಂಬರ್ನಲ್ಲಿ ಭಾರತಕ್ಕೆ ಆಗಮಿಸಿದ್ದ ಮೆಸ್ಸಿ, ಕೋಲ್ಕತ್ತದ ವಿಐಪಿ ರಸ್ತೆಯ ಲೇಕ್ಟೌನ್ನ ಶ್ರೀಭೂಮಿಯಲ್ಲಿ ನಿಲ್ಲಿಸಿದ್ದ ತಮ್ಮ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ನಂತರ ನಡೆದ ‘ಗೋಟ್ ಕಪ್’ ಪ್ರದರ್ಶನ ಪಂದ್ಯದಲ್ಲಿಯೂ ಭಾಗವಹಿಸಿದ್ದರು.</p><p>ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಹೀನಾಯವಾಗಿ ಸೋತಿತ್ತು. ಮೊದಲ ಬಾರಿ ಅಧಿಕಾರಕ್ಕೆ ಬಂದ ಬಿಜೆಪಿಯು ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ಮಾಡಲು ಹೊರಟಿದೆ. </p><p>ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಂದ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ರದ್ದುಪಡಿಸುತ್ತಾ ಬಂದಿದ್ದು, ಅವುಗಳಲ್ಲಿ ಮೆಸ್ಸಿ ಪ್ರತಿಮೆ ತೆರವು ಒಂದಾಗಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ತತ್ತ:</strong> ಪಶ್ಚಿಮ ಬಂಗಾಳದ ಪ್ರಮುಖ ಆರ್ಕಷಣೆಯಾಗಿದ್ದ ಜನಪ್ರಿಯ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರ ಬೃಹತ್ ಪ್ರತಿಮೆಯನ್ನು ಸುರಕ್ಷತಾ ಕಾರಣಗಳನ್ನು ನೀಡಿ ಸೋಮವಾರ ತೆರವುಗೊಳಿಸಲಾಗಿದೆ.</p><p>ಮೆಸ್ಸಿ ಅವರು ಫಿಫಾ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದಿರುವಂತೆ ಬಿಂಬಿಸುವ 70 ಅಡಿ ಎತ್ತರದ ಈ ಚಿನ್ನದ ಬಣ್ಣದ ಪ್ರತಿಮೆಯನ್ನು ಕ್ರೇನ್ ಮತ್ತು ಹಗ್ಗಗಳನ್ನು ಬಳಸಿ ಕೆಳಗಿಸಲಾಗಿದ್ದು, ನಂತರ ಟ್ರಕ್ನಲ್ಲಿ ಸಾಗಿಸಲಾಗಿದೆ. </p><p>‘ಪ್ರತಿಮೆಯು ಗಾಳಿಗೆ ತೂಗಾಡುತ್ತಿದೆ ಎಂದು ಸ್ಥಳೀಯರು ದೂರಿತ್ತ ನಂತರ ಸೋಮವಾರ ಮಧ್ಯಾಹ್ನ ಅದನ್ನು ತೆರವುಗೊಳಿಸಲಾಯಿತು’ ಎಂದು ಪಶ್ಚಿಮ ಬಂಗಾಳದ ಶಾಸಕ ಶರದ್ವತ್ ಮುಖರ್ಜಿ ಅವರು ತಿಳಿಸಿದ್ದಾರೆ. </p><p>ಸೂಕ್ತ ಸ್ಥಳ ಸಿಗುವವರೆಗೆ ಪ್ರತಿಮೆಯನ್ನು ಸರ್ಕಾರಿ ಗೋದಾಮಿನಲ್ಲಿ ಸಂಗ್ರಹಿಸಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಕಳೆದ ವರ್ಷ ಡಿಸೆಂಬರ್ನಲ್ಲಿ ಭಾರತಕ್ಕೆ ಆಗಮಿಸಿದ್ದ ಮೆಸ್ಸಿ, ಕೋಲ್ಕತ್ತದ ವಿಐಪಿ ರಸ್ತೆಯ ಲೇಕ್ಟೌನ್ನ ಶ್ರೀಭೂಮಿಯಲ್ಲಿ ನಿಲ್ಲಿಸಿದ್ದ ತಮ್ಮ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ನಂತರ ನಡೆದ ‘ಗೋಟ್ ಕಪ್’ ಪ್ರದರ್ಶನ ಪಂದ್ಯದಲ್ಲಿಯೂ ಭಾಗವಹಿಸಿದ್ದರು.</p><p>ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಹೀನಾಯವಾಗಿ ಸೋತಿತ್ತು. ಮೊದಲ ಬಾರಿ ಅಧಿಕಾರಕ್ಕೆ ಬಂದ ಬಿಜೆಪಿಯು ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ಮಾಡಲು ಹೊರಟಿದೆ. </p><p>ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಂದ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ರದ್ದುಪಡಿಸುತ್ತಾ ಬಂದಿದ್ದು, ಅವುಗಳಲ್ಲಿ ಮೆಸ್ಸಿ ಪ್ರತಿಮೆ ತೆರವು ಒಂದಾಗಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>